ಭರವಸೆಯ ಬೆಳಕುಮೂರುವರ್ಷ ತುಂಬಿದ ಸಂಭ್ರಮದಲ್ಲಿರುವ ಕೆ.ಆರ್.ಕೆ ಆಚಾರ್ಯರ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್...

ಮೂರುವರ್ಷ ತುಂಬಿದ ಸಂಭ್ರಮದಲ್ಲಿರುವ ಕೆ.ಆರ್.ಕೆ ಆಚಾರ್ಯರ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಗೆ ಶುಭಾಶಯಗಳು

-

- Advertisment -spot_img
ಕೋಟ ರಾಮಕೃಷ್ಣ ಆಚಾರ್ಯ ಎಲ್ಲರೂ ಪ್ರೀತಿಯಿಂದ  ಕರೆಯುವ ಇವರ ಹೆಸರು ಕೆ ಆರ್ ಕೆ.ಇವರ ಹುಟ್ಟೂರು ಕೋಟದಿಂದ  ಆರಂಭಗೊಂಡು ಜಿಲ್ಲಾ ರಾಜ್ಯ ಮತ್ತು ರಾಷ್ಟ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿನ ಟೆನ್ನಿಸ್ ಬಾಲ್ ಕ್ರಿಕೆಟ್ ಅಂಗಳದಲ್ಲಿ ಇವರ ಹೆಸರು  ಚಿರಪರಿಚಿತವಾಗಿದೆ.
 ವೃತ್ತಿಯಲ್ಲಿ ಆಭರಣ ತಯಾರಕರಾದ ಇವರು ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರ ಹಾಗೂ ಸಂಘಟಕರಾಗಿ  ಕಳೆದ ಇಪ್ಪತ್ತು ವರ್ಷಗಳಿಂದ ಟೆನ್ನಿಸ್ ಬಾಲ್ ಕ್ರಿಕೆಟಿನ ನಂಟಿನೊಂದಿಗೆ  ಕ್ರಿಕೆಟ್ ಅಂಗಳದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.
 ಕೆ ಆರ್ ಕೆ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡುವುದರ ಜೊತೆ ಜೋತೆಗೆ ಟೆನ್ನಿಸ್ ಬಾಲ್ ಕ್ರಿಕೆಟಿನ ಪ್ರತಿಯೊಬ್ಬ ಹಿರಿಯ ಕಿರಿಯ ಆಟಗಾರರ ಮತ್ತು ತಂಡಗಳ ಕಷ್ಟ ಸುಖವನ್ನು ಹತ್ತಿರದಿಂದ ನೋಡಿ ಎಲ್ಲರನ್ನೂ ಒಗ್ಗೂಡಿಸಿ ಆಟಗಾರರ ಮತ್ತು ತಂಡಗಳ ಹಾಗೂ ಪಂದ್ಯಾವಳಿಗಳ ಆಗು ಹೊಗುಗಳನ್ನು ಹಂಚಿಕೊಳ್ಳಲು ಒಂದು ಉತ್ತಮ ವೇದಿಕೆಯನ್ನು ರೂಪಿಸ ಬೇಕೆನ್ನುವುದು ಇವರ ಕನಸಾಗಿತ್ತು.
 ಗ್ರಾಮೀಣ ಪ್ರದೇಶ ಮತ್ತು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟಗಳ ಮಾಹಿತಿಯೊಂದಿಗೆ ಪ್ರತಿಯೊಬ್ಬ ಆಟಗಾರರ ಪರಿಚಯ ಮತ್ತು ಹಿರಿಯರು ಮತ್ತು ಕಿರಿಯ ಶ್ರೇಷ್ಠಮಟ್ಟದ ಆಟಗಾರರ ಆಟದ ಮತ್ತು ದಾಖಲೆಗಳ ಸುದ್ದಿಯನ್ನು ಎಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಪ್ರಿಯರಿಗೆ ತಲುಪಿಸುವುದು ಇವರ ಗುರಿಯಾಗಿತ್ತು.
 ಜೊತೆಗೆ ಹಿರಿಯರು ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಬಹುದೊಡ್ಡ ಕಾರ್ಯಕ್ಕೆ ಮುನ್ನುಡಿ ಬರೆಯಲೆ ಬೇಕು ಎನ್ನುವ ಸಂಕಲ್ಪ ತೊಟ್ಟ ಕೆ ಆರ್ ಕೆ ಕನಸಿನ ಮೂಟೆ ಹೊತ್ತು ಸುಮ್ಮನೇ ಕೂರಲಿಲ್ಲ.
ಜುಲೈ 7 ಟೆನ್ನಿಸ್ ಬಾಲ್ ಕ್ರಿಕೆಟ್ ಕಾಶಿ ಎಂದೆ ಪ್ರಸಿದ್ಧಿ ಹೊಂದಿರುವ ಕುಂದಾಪುರದ ಕಡಲ ಕಿನಾರೆಯ ಕ್ರಿಕೆಟ್ ಅಂಗಳ ಅರಿದ್ರ ಮಳೆಯ ಬಿರುಸಿಗೆ ತೆವಗೊಂಡು ಮಲಗಿದರೆ ಬ್ಯಾಟು ಬಾಲುಗಳು ನಿದ್ರಾವಸ್ಥೆಗೆ ಜಾರಿದ್ದವು  ಜಿಟಿ ಜಿಟಿ ಮಳೆಯಲ್ಲೂ ತೆವಗೊಂಡ ಮೈದಾನದಲ್ಲಿ ಪುಟ್ಟ ಮಕ್ಕಳ ಕ್ರಿಕೆಟ್ ಆಟದ ಕಲರವ ಮಾತ್ರ ಮುಗಿಲು ಮುಟ್ಟಿತ್ತು ಈ ಸಂಧರ್ಭದಲ್ಲೆ ಮೈ ಕೊಡವಿದ  ಕೆ ಆರ್ ಕೆ ತಮ್ಮ ಕನಸನ್ನು ನನಸಾಗಿಸುವ ಕಾರ್ಯಕ್ಕೆ ಕೈ ಹಾಕಿಯೆ ಬಿಟ್ಟರು…
ಕರಾವಳಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಅಂಗಳದಿಂದ ರಾಜ್ಯ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಅಂಗಳದ ವರೆಗೆ ಆಟಗಾರರನ್ನು ಪರಿಚಯಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ  ವೇದಿಕೆಯನ್ನು ಹುಟ್ಟು ಹಾಕಲು ಮನಸ್ಸು ಮಾಡಿದ ಕೆ ಆರ್ ಕೆ  ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾದರು.
ಕಳೆದ ಮೂರು ವರ್ಷಗಳ ಹಿಂದೆ ಅಂದರೆ ದಿನಾಂಕ 07/07/2019 ರಂದು ಮಳೆಯ ಬಿರುಸು ತಣ್ಣಗೆ ಬಿಸುವ ಗಾಳಿಗೆ ಕೊರೆವ ಚಳಿಯಲ್ಲೆ  ಜನಿಸಿದ ಕೂಸೆ *”ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್”* ಒಳ್ಳೆಯ ಉದ್ದೇಶದ ಕನಸಿಟ್ಟುಕೊಂಡು ಲೋಕಾರ್ಪಣೆಗೊಂಡ ಜಾಲತಾಣವೆ  www.sportskannada.com . ಕುಂದಾಪುರದ ಬಡಗುಪೇಟೆಯಲ್ಲಿರುವ ಕಛೇರಿಯಿಂದ ಪುಟ್ಟ ಪುಟ್ಟ ಹೆಜ್ಜೆಯೊಂದಿಗೆ ಇಂದು  ಮೂರು ವರ್ಷಗಳನ್ನು ತುಂಬಿ ಯಶಸ್ಸಿನ ಹಾದಿಯಲ್ಲಿ ದಿಟ್ಟ ಹೆಜ್ಜೆಯನೀಡುತ್ತಿದೆ ಇದು ಪ್ರತಿಯೊಬ್ಬ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರನಿಗೆ ಹೆಮ್ಮೆಯ ವಿಷಯವಾಗಿದೆ .
ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರರ ಮತ್ತು  ಕ್ರಿಕೆಟ್ ಪ್ರೇಮಿಗಳ ಹೆಮ್ಮೆಯ ವೇದಿಕೆಯಾಗಿರುವ ಕೆ ಆರ್ ಕೆ ಅವರ ಕನಸಿನ ಕೂಸಾದ ಸ್ಪೋರ್ಟ್ಸ್ ಕನ್ನಡ ಜಾಲತಾಣ ಇನ್ನಷ್ಟು ಎತ್ತರಕ್ಕೆ ಬೆಳೆಯುವಂತಾಗಲಿ .
ನಿಮ್ಮೆಲ್ಲ ಕನಸುಗಳು ನನಸಾಗಲಿ ಶುಭವಾಗಲಿ ಸಹೋದರ ರಾಮಕೃಷ್ಣ ಆಚಾರ್ಯ ( ಕೆ ಆರ್ ಕೆ )
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

one × 3 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you