8.7 C
London
Tuesday, April 16, 2024
Homeಭರವಸೆಯ ಬೆಳಕುಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ-ಸೇವಾರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 9 ನೇ...

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ-ಸೇವಾರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 9 ನೇ ಮನೆ ಹಸ್ತಾಂತರ ಕಾರ್ಯಕ್ರಮ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 9 ನೇ ಮನೆಯ ಹಸ್ತಾಂತರ
ಸಮಾಜದ ಬಡ,ಅಶಕ್ತ ಕುಟುಂಬಗಳಿಗೆ ಸೂರು ಇನ್ನಿತರ ಮೂಲಭೂತ ಸೌಕರ್ಯಗಳನ್ನು  ಕಲ್ಪಿಸಿಕೊಡುವ ನಿಟ್ಟಿನಲ್ಲಿ,ಸೇವಾರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ತೀರಾ ಅಗತ್ಯವುಳ್ಳವರಿಗೆ ಶಾಶ್ವತ ಸೂರು ನಿರ್ಮಿಸಿಕೊಡುವ ಕೈಂಕರ್ಯವನ್ನು ನಡೆಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಬೈಂದೂರು ಗಂಗನಾಡು ನೀರೋಡಿ ಸೌಂತ್ ಮನೆ ರಾಮ ಮರಾಠಿ ಇವರ ಶಿಥಿಲಗೊಂಡ ಮನೆಯವರ ಸಂಕಷ್ಟವನ್ನು ಅರಿತು ನೀಡಿದ ಭರವಸೆಯಂತೆ ಟ್ರಸ್ಟ್ ಮೂಲಕ 9 ನೇ ಸುಸಜ್ಜಿತ ಮನೆ ನಿರ್ಮಿಸಲಾಗಿದ್ದು ಪ್ರವೇಶೋತ್ಸವಕ್ಕೆ ಸಜ್ಜಾಗಿದೆ.
ಸೆಪ್ಟೆಂಬರ್ 26 ಸೋಮವಾರ ಬೆಳಿಗ್ಗೆ 10 ಗಂಟೆಗೆ ,ಬೈಂದೂರು ಗಂಗನಾಡು ನೀರೋಡಿ ಯಲ್ಲಿ ನಡೆಯಲಿರುವ 9 ನೇ ಸುಸಜ್ಜಿತ ಮನೆಯ ಹಸ್ತಾಂತರ ಕಾರ್ಯಕ್ರಮ ಬೆಳಗಾಂ ನಿಪ್ಪಾಣಿ ಮಹಾಕಾಳಿ ಸಂಸ್ಥಾನಂ ಸಧರ್ಮ ಓಂಶಕ್ತಿ ಮಠದ ರಸಾಯಿ ಶೇಂಡಾರು ಕ್ಷೇತ್ರದ ಪೀಠಾಧಿಪತಿಗಳಾದ ಶ್ರೀಶ್ರೀಶ್ರೀ ಅರುಣಾನಂದ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಶ್ರೀಯುತ ಅಚ್ಯುತ್ ಕಲ್ಯಾಣ್ ರವರ ಅಮೃತ ಹಸ್ತದಿಂದ ಉದ್ಘಾಟನೆಗೊಳ್ಳಲಿದೆ.
*”ಬಡವರಿಗೊಂದು  ಸೂರು” ನನ್ನ ಕನಸಿನ ಯೋಜನೆ ಪ್ರಗತಿ ಯಲ್ಲಿದ್ದು,ಮುಂದಿನ ದಿನಗಳಲ್ಲಿ ಪ್ರತೀ ತಿಂಗಳು ಒಂದೊಂದು ಮನೆಯ ಉದ್ಘಾಟನೆ ನಡೆಸುವ ಯೋಜನೆ ಹಾಕಿಕೊಂಡಿದ್ದು ಸಾಕಷ್ಟು ಮನೆ ನಿರ್ಮಾಣ ಹಂತದಲ್ಲಿದೆ”ಎಂದು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ನ ಸಂಸ್ಥಾಪಕರು,ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿಯವರು ತಿಳಿಸಿದ್ದಾರೆ.*
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twelve + 12 =