Action Replayಆಗಸ್ಟ್ 15 ರಿಂದ 18ರ ತನಕ ಕೋಲಾರ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ...

ಆಗಸ್ಟ್ 15 ರಿಂದ 18ರ ತನಕ ಕೋಲಾರ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ “ಶ್ರೀನಿವಾಸಪುರ ಪ್ರಿಮಿಯರ್ ಲೀಗ್ M.K.S CUP-2019”

-

- Advertisment -spot_img

ಚಿನ್ನದ ನಾಡು,ಮಾವಿನ ಬೀಡು ಕೋಲಾರ ಜಿಲ್ಲೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅತ್ಯಂತ ಅದ್ಧೂರಿಯ ಪಂದ್ಯಾಕೂಟ “ಶ್ರೀನಿವಾಸಪುರ ಪ್ರಿಮಿಯರ್ ಲೀಗ್ M.K.S CUP-2019” ಇದೇ ಬರುವ ಆಗಸ್ಟ್ 15 ರಿಂದ 18 ರ ತನಕ 4 ದಿನಗಳ ಕಾಲ ಹಗಲಿನಲ್ಲಿ ಕೋಲಾರದ ರಿಜ್ವಾನ್ ಮ್ಯಾಂಗೋ ಯಾರ್ಡ್ ಗ್ರೌಂಡ್ ನಲ್ಲಿ ನಡೆಯಲಿದೆ.

ಈ ವ್ಯವಸ್ಥಿತ ಪಂದ್ಯಾಕೂಟದಲ್ಲಿ ಕೋಲಾರದ 10 ಫ್ರಾಂಚೈಸಿಗಳು ಭಾಗವಹಿಸಲಿದ್ದು.ಕರ್ನಾಟಕ ರಾಜ್ಯದ ಪ್ರತಿಷ್ಟಿತ ತಂಡಗಳಾದ ಜೈ ಕರ್ನಾಟಕ ತಂಡದ ಸಚಿನ್,ಮಾರ್ಕ್ ಮಹೇಶ್,ಮೊಹ್ಸಿನ್, ಫ್ರೆಂಡ್ಸ್ ತಂಡದಿಂದ ಸಾಗರ್ ಭಂಡಾರಿ, ಪ್ರಸಾದ್ ನೇರಳಕಟ್ಟೆ, ಸೀನ, ನವೀನ, ನ್ಯಾಶ್ ನ ಪುರುಷಿ, ಜಾನ್, ಮಹೇಶ್, ಶ್ರೀಕಾಂತ್, ಸಂದೀಪ್ ಕೀನ್ಯಾ ಎಸ್.ಝಡ್,ಸಿ.ಸಿ ತಂಡದಿಂದ ಅಜರ್, ಸುಜಯ್, ಸ್ವಸ್ತಿಕ್ ಹಾಗೂ ಅಶೋಕ್ ಪಿಳ್ಳೆ ಐಕಾನ್ ಆಟಗಾರರ ರೂಪದಲ್ಲಿ ಪ್ರತಿ ಫ್ರಾಂಚೈಸಿಯಲ್ಲೂ 2 ಆಟಗಾರರು ಹಾಗೂ ಕೋಲಾರ ಜಿಲ್ಲೆಯ 3 ಐಕಾನ್ ಆಟಗಾರರು ಹಾಗೂ ಸ್ಥಳೀಯ ಆಟಗಾರರು ಪ್ರತಿಷ್ಟಿತ ಪಂದ್ಯಾಕೂಟದಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದ್ದಾರೆ.

ಪಂದ್ಯಾಕೂಟದ ವಿಜೇತ ತಂಡ 1,55,555 ನಗದು ಹಾಗೂ ಆಕರ್ಷಕ ಟ್ರೋಫಿ ಹಾಗೂ ರನ್ನರ್ಸ್ ತಂಡ 77,777 ನಗದು ಹಾಗೂ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ಬೆಸ್ಟ್ ಬ್ಯಾಟ್ಸ್‌ಮನ್, ಬೆಸ್ಟ್ ಬೌಲರ್, ಸರಣಿ ಶ್ರೇಷ್ಠ, ಪಂದ್ಯಶ್ರೇಷ್ಟ, ಹ್ಯಾಟ್ರಿಕ್ ಸಿಕ್ಸ್ ಹಾಗೂ ಹ್ಯಾಟ್ರಿಕ್ ಬೌಂಡರಿಗಳಿಗೆ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುವುದು.

ಈ ಪ್ರತಿಷ್ಟಿತ ಪಂದ್ಯಾಕೂಟ ಶ್ರೀಯುತ ನದೀಮ್ ಅಖ್ತರ್ ರವರ ದಕ್ಷ ಸಾರಥ್ಯದಲ್ಲಿ,ಚಂದು ಮಾಲೂರು,ನೀಲು, ಕಾರ್ತಿಕ್ (ರಾಕರ್ಸ್) ರವರ ಸಹಕಾರದೊಂದಿಗೆ ನಡೆಯಲಿದ್ದು, ಸಚಿನ್ ಮಹಾದೇವ್ ನೇತೃತ್ವದ M Sports ನೇರ ಪ್ರಸಾರ ಬಿತ್ತರಿಸಲಿದ್ದು,ರಾಜ್ಯದ ಪ್ರಸಿದ್ಧ ವೀಕ್ಷಕ ವಿವರಣೆಕಾರರಾದ ಪ್ರಶಾಂತ್ ಅಂಬಲಪಾಡಿ,ಹಿಂದಿಯ ಪ್ರಸಿದ್ಧ ಹಿರಿಯ ವೀಕ್ಷಕ ವಿವರಣೆಕಾರ ಮಾಧವ ಶ್ಯಾನುಭೋಗ್ ಹಾಗೂ ತೀರ್ಪುಗಾರರಾಗಿ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ಹಾಗೂ ಸಂಗಡಿಗರು ಪಂದ್ಯಾಕೂಟಕ್ಕೆರಂಗೇರಿಸಲಿದ್ದಾರೆ.

ಕಳೆದವಾರ ಆಟಗಾರರ ಆಕ್ಷನ್ ಪ್ರಕ್ರಿಯೆಯನ್ನು ಹಿರಿಯ ಅನುಭವಿ ವೀಕ್ಷಕ ವಿವರಣೆಕಾರ ಶಿವನಾರಾಯಣ್ ಐತಾಳ್ ಕೋಟ ನಡೆಸಿದ್ದರು.

ಭಾಗವಹಿಸುವ ಫ್ರಾಂಚೈಸಿಗಳು ಹಾಗೂ ಆಟಗಾರರ ವಿವರ ಈ ಕೆಳಗಿನಂತಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × four =

Latest news

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...
- Advertisement -spot_imgspot_img

ಸಾಲಿಗ್ರಾಮದಲ್ಲಿ “ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ

ಸಾಲಿಗ್ರಾಮದಲ್ಲಿ “ ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ ಕ್ರೀಡಾಭಿಮಾನಿಗಳಿಗೆ ರೋಮಾಂಚನ ಮೂಡಿಸುವ ಕ್ರಿಕೆಟ್...

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಒಗ್ಗಟ್ಟನ್ನು ಒಂದೇ ವೇದಿಕೆಯಲ್ಲಿ ಆಚರಿಸುವ ಮಹತ್ವದ...

Must read

- Advertisement -spot_imgspot_img

You might also likeRELATED
Recommended to you