Categories
ಕ್ರಿಕೆಟ್

ಶ್ರೀರಂಗಪಟ್ಟಣ-ಸಂಘಟಿತ ಹೋರಾಟ-ಜೈ ಕರ್ನಾಟಕ ಬೆಂಗಳೂರು ಮುಡಿಗೆ A.S.R ಕಪ್ ಕಿರೀಟ

ಶ್ರೀರಂಗಪಟ್ಟಣದ ಶಾಸಕರು ಶ್ರೀ.ಎ.ಎಸ್.ರವೀಂದ್ರ ಶ್ರೀಕಂಠಯ್ಯ ಇವರ ನೇತೃತ್ವದಲ್ಲಿ ಶ್ರೀರಂಗಪಟ್ಟಣದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಹೊನಲು ಬೆಳಕಿನ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟ ASR ಕಪ್-2021 ಪ್ರಶಸ್ತಿಯನ್ನು ಜೈ ಕರ್ನಾಟಕ ಬೆಂಗಳೂರು ತಂಡ ಜಯಿಸಿದೆ.
ಲೀಗ್ ಹಂತದ ರೋಚಕ ಹಣಾಹಣಿಗಳ ಬಳಿಕ ಫೈನಲ್ ನಲ್ಲಿ ಜೈ ಕರ್ನಾಟಕ ತಂಡದ ಆಟಗಾರರ ಸಂಘಟಿತ ಹೋರಾಟದ ಫಲವಾಗಿ ಬಲಿಷ್ಠ ಫ್ರೆಂಡ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ 2 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಯನ್ನು ಪಡೆದುಕೊಂಡರು.ಜೈ ಕರ್ನಾಟಕ ಬೆಂಗಳೂರು ತಂಡದ ಮಾರ್ಕ್ ಮಹೇಶ್ ಬೆಸ್ಟ್ ಬ್ಯಾಟ್ಸ್‌ಮನ್ ಮತ್ತು ಫ್ರೆಂಡ್ಸ್ ಬೆಂಗಳೂರಿನ‌ ಧೀರಜ್ ಅಲೆವೂರು ಬೆಸ್ಟ್ ಬೌಲರ್ ಗೌರವಕ್ಕೆ ಪಾತ್ರರಾದರು.
ಯಾಸೀನ್ ನೇತೃತ್ವದಲ್ಲಿ Y.Sports ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಿದರು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

six − 4 =