Categories
ಕ್ರಿಕೆಟ್

44+ ಹಿರಿಯ ಆಟಗಾರರಿಗಾಗಿ ಸೃಷ್ಟಿ ಸೀನಿಯರ್ಸ್ ಕಪ್-2022

ಬೆಂಗಳೂರು-ಅವಿಘ್ನ ಸೃಷ್ಟಿ ಬೆಂಗಳೂರು ತಂಡದ ಆಶ್ರಯದಲ್ಲಿ ರಾಜ್ಯ ಮಟ್ಟದ 44+ ಹಿರಿಯ ಆಟಗಾರರಿಗಾಗಿ “ಸೃಷ್ಟಿ ಸೀನಿಯರ್ಸ್ ಕಪ್-2022” ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಅಕ್ಟೋಬರ್ ದಿನಾಂಕ 12 ರಿಂದ 16 ರ ತನಕ ಮಾಕಳಿ ಸೃಷ್ಟಿ ಹುಲ್ಲು ಹಾಸಿನ ಮೈದಾನದಲ್ಲಿ ಸಂಜೆ 4 ರಿಂದ ರಾತ್ರಿ 11 ಗಂಟೆಯವರೆಗೆ ಹೊನಲು ಬೆಳಕಿನಲ್ಲಿ ಪಂದ್ಯಾಟ ಸಾಗಲಿದೆ.
ಡಿಸೆಂಬರ್ 31-1978 ಒಳಗಡೆ ಜನಿಸಿದ ಆಟಗಾರರಿಗೆ ಮಾತ್ರ ಆಡಲು ಅವಕಾಶವಿದ್ದು,16 ತಂಡಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಸಾಗಲಿರುವ ಈ ಪಂದ್ಯಾವಳಿಯ
ಪ್ರವೇಶ ಶುಲ್ಕ 10 ಸಾವಿರ ನಗದು,ಪ್ರಥಮ ಬಹುಮಾನ 50 ಸಾವಿರ,ದ್ವಿತೀಯ 25 ಸಾವಿರ,ತೃತೀಯ 15 ಸಾವಿರ ಮತ್ತು ಚತುರ್ಥ 10 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9900513229,
9008862827,9986668288,9019888898 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

13 − 6 =