9 C
London
Wednesday, April 17, 2024
Homeಕ್ರಿಕೆಟ್ನವೆಂಬರ್ 28ರಿಂದ ಡಿಸೆಂಬರ್ 1ರ ದಾವಣಗೆರೆಯಲ್ಲಿ ಎಸ್.ಎಸ್.ಶ್ಯಾಮನೂರು ಡೈಮಂಡ್, ಶಿವಗಂಗಾ ಕಪ್-2019

ನವೆಂಬರ್ 28ರಿಂದ ಡಿಸೆಂಬರ್ 1ರ ದಾವಣಗೆರೆಯಲ್ಲಿ ಎಸ್.ಎಸ್.ಶ್ಯಾಮನೂರು ಡೈಮಂಡ್, ಶಿವಗಂಗಾ ಕಪ್-2019

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img

ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ, ದಾವಣಗೆರೆ ವಿಧಾನ‌ಸಭಾ ಸದಸ್ಯ ಶ್ಯಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ದಿ||ಪಾರ್ವತಮ್ಮ ರವರ ಸವಿನೆನಪಿನ ಅಂಗವಾಗಿ, ಶಿವಗಂಗಾ ಟ್ರಾನ್ಸ್ ಪೋರ್ಟ್ ಮಾಲಿಕ ಶ್ರೀನಿವಾಸ್ ಶಿವಗಂಗಾ ಪ್ರಾಯೋಜಕತ್ವದಲ್ಲಿ, ಮುನ್ಸಿಪಾಲಿಟಿ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, M.L.A ಆಪ್ತಕಾರ್ಯದರ್ಶಿ ಕುರುಡಿ ಗಿರೀಶ್ ರವರ ಸಹಕಾರದೊಂದಿಗೆ ದಾವಣಗೆರೆ ತಂಡದ ಮಾಲೀಕ, ಕ್ರೀಡಾ ಪ್ರೋತ್ಸಾಹಕ ಜಯಪ್ರಕಾಶ್ ಗೌಡರ ದಕ್ಷ ಸಾರಥ್ಯದಲ್ಲಿ, ನಾಯಕ ಹಾಲಪ್ಪ ಸಾರಥಿ ಹಾಗೂ ತಂಡದ ಸಹಕಾರದೊಂದಿಗೆ ದಾವಣಗೆರೆಯ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನವೆಂಬರ್ 28 ರಿಂದ ಡಿಸೆಂಬರ್ 1 ರ ತನಕ 4 ದಿನಗಳ ಹೊನಲು ಬೆಳಕಿನ ಪಂದ್ಯಾಕೂಟ ನಡೆಯಲಿದೆ.

ಸತತ 12 ನೇ ಬಾರಿಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಈ ಪಂದ್ಯಾಕೂಟ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತ್ಯಂತ ವಿಜೃಂಭಣೆ ಹಾಗೂ ವ್ಯವಸ್ಥಿತ ಪಂದ್ಯಾಕೂಟವೆಂದು ಪರಿಗಣಿಸಲ್ಪಡುತ್ತಿದೆ.ಕಳೆದ ಒಂದು ತಿಂಗಳಿನಿಂದ ಪಿಚ್ ಹಾಗೂ ಸುಸಜ್ಜಿತ ಕ್ರೀಡಾಂಗಣದ ನಿರ್ಮಾಣಕ್ಕಾಗಿ ದಾವಣಗೆರೆಯ ತಂಡ ಬಹಳಷ್ಟು ಶ್ರಮಿಸುತ್ತಿದೆ.

ಪ್ರಥಮ‌ ಸ್ಥಾನಿ ತಂಡ 3,55,000 ನಗದು,ದ್ವಿತೀಯ 2,25,000 ಹಾಗೂ ತೃತೀಯ ಸ್ಥಾನಿ ತಂಡ 1,25,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ‌. ಜೊತೆಯಾಗಿ ವೈಯಕ್ತಿಕ ಪ್ರಶಸ್ತಿ ವಿಜೇತರಿಗೆ ನಗದು ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಗುತ್ತಿದೆ.

ಈ ಪಂದ್ಯಾಕೂಟದ ನೇರ ಪ್ರಸಾರವನ್ನು M.Sports ಬಿತ್ತರಿಸಲಿದ್ದು, ವೀಕ್ಷಕ ವಿವರಣೆಕಾರರಾಗಿ ರಾಜ್ಯದ ಪ್ರಸಿದ್ಧ ಕಾಮೆಂಟೇಟರ್ಸ್ ಪ್ರಶಾಂತ್ ಅಂಬಲಪಾಡಿ ಹಾಗೂ ವಿನಯ್ ಉದ್ಯಾವರ ಭಾಗವಹಿಸಲಿದ್ದಾರೆಂದು ಟೂರ್ನಮೆಂಟ್ ನ ಮೀಡಿಯಾ ಪಾರ್ಟ್ನರ್ “ಸ್ಪೋರ್ಟ್ಸ್ ಕನ್ನಡ”ಕ್ಕೆ ತಿಳಿಸಿದ್ದಾರೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

20 + twelve =