ಕ್ರಿಕೆಟ್ಎಸ್‌.ಎಸ್.ಸಿ.ಸಿ ಮುಕ್ಕ ತಂಡಕ್ಕೆ-ಸೈಮಂಡ್ಸ್ "ಗಣರಾಜ್ಯೋತ್ಸವ ಕಪ್-2020"

ಎಸ್‌.ಎಸ್.ಸಿ.ಸಿ ಮುಕ್ಕ ತಂಡಕ್ಕೆ-ಸೈಮಂಡ್ಸ್ “ಗಣರಾಜ್ಯೋತ್ಸವ ಕಪ್-2020”

-

- Advertisment -spot_img

ಎಸ್‌.ಎಸ್.ಸಿ.ಸಿ ಮುಕ್ಕ ತಂಡಕ್ಕೆ-ಸೈಮಂಡ್ಸ್ “ಗಣರಾಜ್ಯೋತ್ಸವ ಕಪ್-2020”

 

ಸೈಮಂಡ್ಸ್ ಕ್ರಿಕೆಟ್ ಕ್ಲಬ್
ಕಡಿಯಾಳಿ ಇವರ ಆಶ್ರಯದಲ್ಲಿ

“ಸ್ಪಂದನ ಬುದ್ಧಿಮಾಂದ್ಯ ಶಾಲೆಗೆ ಆರ್ಥಿಕ ಕೊಡುಗೆ ಹಾಗೂ ಅನಾರೋಗ್ಯ ಪೀಡಿತರಿಗೆ ಧನಸಹಾಯದ ಸದುದ್ದೇಶದಿಂದ
ಉಡುಪಿಯ ಎಮ್.ಜಿ.ಎಮ್ ಕಾಲೇಜ್ ಅಂಗಣದಲ್ಲಿ ಏರ್ಪಡಿಸಲಾಗಿದ್ದಮೂರು ದಿನಗಳ ಲೀಗ್ ಮಾದರಿಯ
ಅತ್ಯಂತ ಶಿಸ್ತುಬದ್ಧ ಪಂದ್ಯಾವಳಿ “ಗಣರಾಜ್ಯೋತ್ಸವ ಕಪ್-2020” ಎಸ್‌.ಎಸ್.ಸಿ.ಸಿ ಮುಕ್ಕ ತಂಡ ಜಯಿಸಿದೆ.

ವಲಯ ಮಟ್ಟದ ಆಹ್ವಾನಿತ 20 ತಂಡಗಳು ಭಾಗವಹಿಸಿದ್ದ ಈ ಟೂರ್ನಿಯ ಲೀಗ್ ಹಂತದ ಪ್ರಬಲ ಪೈಪೋಟಿಗಳ ಬಳಿಕ
ಉಳ್ಳಾಲ,ಬ್ರಹ್ಮಾವರ,ಎಸ್.ಎಸ್.ಸಿ‌.ಸಿ,ನೇಜಾರ್ ಹಾಗೂ ಕೆ.ಕೆ‌.ಕೆ
ತಂಡಗಳು ಕ್ವಾಲಿಫೈಯರ್ ಹಂತದಲ್ಲಿ ಮುಖಾಮುಖಿಯಾಗಿದ್ದರು.


ಅಂತಿಮವಾಗಿ ಎಸ್.ಎಸ್.ಸಿ.ಸಿ ಮುಕ್ಕ ಹಾಗೂ ಬ್ರಹ್ಮಾವರ ಫ್ರೆಂಡ್ಸ್ ಫೈನಲ್ ಟಿಕೆಟ್ ಪಡೆದಿದ್ದರು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮುಕ್ಕ ತಂಡ ಯತೀಶ್ 18 ರನ್ ಸಹಾಯದಿಂದ 6 ಓವರ್ ಗಳಲ್ಲಿ 38 ರನ್ ಗಳ ಗುರಿಯನ್ನು
ಎದುರಾಳಿ ತಂಡಕ್ಕೆ ನೀಡಿತ್ತು.
ರನ್ ಚೇಸಿಂಗ್ ವೇಳೆ ನಾಟಕೀಯ ಕುಸಿತ ಕಂಡ ಬ್ರಹ್ಮಾವರ ಫ್ರೆಂಡ್ಸ್ 7 ವಿಕೆಟ್ ನಷ್ಟಕ್ಕೆ ಕೇವಲ 25 ರನ್ ಗಳಿಸಲಷ್ಟೇ ಶಕ್ತವಾಯಿತು.

ಪ್ರಥಮ ಪ್ರಶಸ್ತಿ ರೂಪದಲ್ಲಿ ಎಸ್.ಎಸ್.ಸಿ.ಸಿ ತಂಡ 50 ಸಾವಿರ ನಗದು,ರನ್ನರ್ಸ್ ಬ್ರಹ್ಮಾವರ ಫ್ರೆಂಡ್ಸ್ 30 ಸಾವಿರ ನಗದು ಸಹಿತ ಮಿರುಗುವ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.
ಅತ್ಯುತ್ತಮ ಸಮವಸ್ತ್ರ ಧರಿಸಿದ ತಂಡಕ್ಕಾಗಿ ಕೊಡಮಾಡಿದ ವಿಶೇಷ ಪ್ರಶಸ್ತಿಗಳು ಫ್ರೆಂಡ್ಸ್ ಕಲ್ಮಾಡಿ,ಫ್ರೆಂಡ್ಸ್ ಉಳ್ಳಾಲ ಹಾಗೂ ಫ್ರೆಂಡ್ಸ್ ಪರ್ಕಳ ಪಾಲಾಯಿತು.

ವೈಯಕ್ತಿಕ ಪ್ರಶಸ್ತಿಯಾಗಿ ಬೆಸ್ಟ್ ಬ್ಯಾಟ್ಸ್‌ಮನ್ ದಿವೇಶ್ ಸಾಲ್ಯಾನ್,ಬೆಸ್ಟ್ ಬೌಲರ್ ಯತೀಶ್ ಸುರತ್ಕಲ್,ಬೆಸ್ಟ್ ಕೀಪರ್ ರಿಜ್ವಾನ್,ಬೆಸ್ಟ್ ಫೀಲ್ಡರ್ ಫಯಾಜ್ ಉಳ್ಳಾಲ,ಬೆಸ್ಟ್ ಕ್ಯಾಚ್ ಪ್ರಸನ್ನ ಕೊರಂಗ್ರಪಾಡಿ ಹಾಗೂ ಪಂದ್ಯಾವಳಿಯುದ್ದಕ್ಕೂ ಸರ್ವಾಂಗೀಣ ಶ್ರೇಷ್ಟ ನಿರ್ವಹಣೆ ತೋರಿದ ಆರಿಫ್ ಮುಕ್ಕ ಸರಣಿ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.

ಸಮಾರೋಪ ಸಮಾರಂಭದಲ್ಲಿ ಎಮ್.ಜಿ.ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ವಿಜಯ್,ಬಿ.ಜೆ‌.ಪಿ‌ ಮುಖಂಡರು ಹಾಗೂ ಕಿಣಿ ಕನ್ಸ್ಟ್ರಕ್ಷನ್ ಮಾಲೀಕರು ರಾಘವೇಂದ್ರ ಕಿಣಿ,ಸೈಮಂಡ್ಸ್ ನ ಗೌರವಾಧ್ಯಕ್ಷ ವಸಂತ ರಾವ್ ದಾನಾ ಜ್ಯುವೆಲ್ಲರ್ಸ್,ಅಧ್ಯಕ್ಷ‌ ನರಸಿಂಹ ಕಿಣಿ,
ಅಮರ್ ನಾಥ್ ಭಟ್,
ಡಾವಿನೋದ್,ಶಶಿಭೂಷಣ್,ಚರಣ್ ಹೆಬ್ಬಾರ್,ಚೇತನ್,ಭಾಸ್ಕರ್ ಆಚಾರ್ಯ ಇನ್ನಿತರರು ಉಪಸ್ಥಿತರಿದ್ದರು.
ಈ ಸಂದರ್ಭ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.

ಪಂದ್ಯಾವಳಿಯ ನೇರ ಪ್ರಸಾರವನ್ನು
M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ಬಿತ್ತರಿಸಿದರೆ,ವೀಕ್ಷಕ ವಿವರಣೆಯಲ್ಲಿ ರಾಜ್ಯದ ಪ್ರಸಿದ್ಧ ವೀಕ್ಷಕ ವಿವರಣೆಕಾರ ಪ್ರಶಾಂತ್ ಅಂಬಲಪಾಡಿ ಹಾಗೂ ರಾಘವೇಂದ್ರ ಮಟಪಾಡಿ ಉಪಸ್ಥಿತರಿದ್ದರು.
‌‌‌‌‌ ಆರ್.ಕೆ.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

ten + 18 =

Latest news

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...
- Advertisement -spot_imgspot_img

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

ಫ್ರೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–1ಕ್ಕೆ ಸಿದ್ಧತೆ ; ಬಕ್ಕರ್ ಮೆಮೋರಿಯಲ್ ಕ್ರಿಕೆಟ್ ಟೂರ್ನಮೆಂಟ್‌ಗೆ ಶ್ರೀನಿವಾಸಪುರ ಸಜ್ಜು

ಫ್ರೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–1ಕ್ಕೆ ಸಿದ್ಧತೆ ; ಬಕ್ಕರ್ ಮೆಮೋರಿಯಲ್ ಕ್ರಿಕೆಟ್ ಟೂರ್ನಮೆಂಟ್‌ಗೆ ಶ್ರೀನಿವಾಸಪುರ ಸಜ್ಜು ಶ್ರೀನಿವಾಸಪುರ: ಶ್ರೀನಿವಾಸಪುರದ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸುತ್ತಿರುವ ಫ್ರೆಂಡ್ಸ್ ಕ್ರಿಕೆಟ್ ಲೀಗ್...

Must read

- Advertisement -spot_imgspot_img

You might also likeRELATED
Recommended to you