Home ಭರವಸೆಯ ಬೆಳಕು ಬೆಂಗಳೂರು-ಸ್ಟಾರ್ ವರ್ಟೆಕ್ಸ್ ನ‌ ಸಂಸ್ಥಾಪಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ “ರೂಪಲಾವಣ್ಯಮ್” ಮಹಿಳಾ ಸಾಧಕಿ ಗೌರವ

ಬೆಂಗಳೂರು-ಸ್ಟಾರ್ ವರ್ಟೆಕ್ಸ್ ನ‌ ಸಂಸ್ಥಾಪಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ “ರೂಪಲಾವಣ್ಯಮ್” ಮಹಿಳಾ ಸಾಧಕಿ ಗೌರವ

ಬೆಂಗಳೂರು-ಸ್ಟಾರ್ ವರ್ಟೆಕ್ಸ್ ನ‌ ಸಂಸ್ಥಾಪಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ “ರೂಪಲಾವಣ್ಯಮ್” ಮಹಿಳಾ ಸಾಧಕಿ ಗೌರವ
ಸ್ಮೃತಿ ಸಾಧನಾ ಮೆಮೊರೀಸ್ ಎಚೀವ್ಮೆಂಟ್ ಮತ್ತು ಎನ್‌.ಆರ್‌.ಫೌಂಡೇಶನ್&ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಯಶವಂತಪುರದ ವಿವಂತ ಹೊಟೇಲ್ ನಲ್ಲಿ ರವಿವಾರ ಮಾರ್ಚ್ 27 ರಂದು ಜರುಗಿದ ಸಾಧಕಿಯರ ಸಮ್ಮೇಳನದಲ್ಲಿ ಸಮಾಜಸೇವಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ “ರೂಪಲಾವಣ್ಯಮ್ ಸೀಸನ್-2″ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೋಲಾರದ ಗಣಿನಾಡಿನ ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿಯಲ್ಲಿ ಹುಟ್ಟಿದ ಗಾಯತ್ರಿ ಮುತ್ತಪ್ಪ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಶ್ರೀನಿವಾಸಪುರದಲ್ಲಿ ಪೂರೈಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾಂ ಇಲ್ಲಿ ಇಂಜಿನಿಯರಿಂಗ್ ಪೂರೈಸಿ, 2011 ರಲ್ಲಿ ಕಾರ್ಯನಿರ್ವಾಹಕ ಹುದ್ದೆಯಲ್ಲಿ ತೊಡಗಿಸಿಕೊಂಡ ಇವರು 2016 ರಲ್ಲಿ ತನ್ನದೇ ನಾಯಕತ್ವದಲ್ಲಿ “ಸ್ಟಾರ್ ವರ್ಟೆಕ್ಸ್” ಅನ್ನುವ ಸ್ವಂತ ಸಂಸ್ಥೆಯನ್ನು ಹುಟ್ಟು ಹಾಕಿ ಅದರಲ್ಲಿ ತನ್ನನ್ನು ತಾನು ತೊಡಗಿಸಿಕೊಂಡರು.
ಕ್ರೀಡೆ ಹಾಗೂ ಸಮಾಜ ಸೇವೆಯಲ್ಲಿ ನಿರಂತರವಾಗಿ
ತನ್ನನ್ನು ತಾನು ತೊಡಗಿಸಿಕೊಂಡ ಇವರು ಕೊರೋನದ ಸಂಕಷ್ಟದ ನಡುವೆಯೂ ಮನೆ ಮನೆಗೆ ತೆರಳಿ ದಿನ ನಿತ್ಯದ ರೇಷನ್ ಸಾಮಗ್ರಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.2019 ರಲ್ಲಿ ಬಾದಾಮಿಯ ನೆರಪೀಡಿತ ಪ್ರದೇಶಕ್ಕೆ ತೆರಳಿ ಸಂತ್ರಸ್ತರಿಗೆ ಸಹಾಯಹಸ್ತ ನೀಡಿರುತ್ತಾರೆ.ಕಳೆದೆರಡು ವರ್ಷಗಳ ಹಿಂದೆ ಟಿ.ವಿ.9 ನಲ್ಲಿ ಪ್ರಸಾರವಾದ ನೆಲಮಂಗಲದ ಗೌರಮ್ಮ ಎನ್ನುವ ಮಹಿಳೆಯ ಸಂಕಷ್ಟಕ್ಕೆ ಮರುಗಿ 3 ತಿಂಗಳ ರೇಷನ್ ಸಾಮಗ್ರಿಗಳನ್ನು ನೀಡಿದ್ದು ಅಲ್ಲದೆ ಅನೇಕ ನೊಂದ ಬಡವರಿಗೆ ಸಹಾಯ ನೀಡುತ್ತಿರುವ ಇವರು ಪ್ರಚಾರ ಬಯಸದೆ ತೆರೆಮರೆಯಲ್ಲಿಯೇ ಕೆಲಸವನ್ನು ಪ್ರೀತಿಯಿಂದ ನಡೆಸಿಕೊಂಡು ಬರುತ್ತಿದ್ದಾರೆ.ಸರಕಾರಿ ಶಾಲೆಗಳಿಗೆ
ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೇಕಾಗುವ ಪುಸ್ತಕ ಮತ್ತು ಕ್ರೀಡಾ ಪರಿಕರಗಳನ್ನು ನೀಡಿ ಸಹಕರಿಸಿದ್ದಾರೆ. ಇವೆಲ್ಲದರ ಜೊತೆಗೆ ನೊಂದ ಅನೇಕರಿಗೆ ತನ್ನ ಸಂಸ್ಥೆಯಲ್ಲಿ ಕೆಲಸ ನೀಡುವ ಮೂಲಕ ಅವರ ಭವಿಷ್ಯಕ್ಕೆ ಸಹಕಾರಿಯಾಗಿದ್ದಾರೆ.
ಇತ್ತೀಚೆಗೆ ಇವರ ಸಮಾಜಮುಖಿ ಕೆಲಸ ಮತ್ತು ತೊಡಗುವಿಕೆಯನ್ನು ಗಮನಿಸಿ “UNIVERSAL DEVELOPMENT COUNCIL ” ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತ್ತು.
ನಿರಂತರವಾಗಿ ತನ್ನನ್ನು ತಾನು ಸಮಾಜಮುಖಿಯಾಗಿ ತೊಡಗಿಸಿಕೊಂಡಿರುವ ಇವರು ಶ್ರೀನಿವಾಸಪುರದ ದಿ‌.ಲಕ್ಷ್ಮಿ ನರಸಮ್ಮ ಮತ್ತು  ಶ್ರೀಯುತ ಮುತ್ತಪ್ಪ ಇವರ ಪುತ್ರಿ.
ಸಮಾಜದಲ್ಲಿ ಇನ್ನೂ ಹೆಚ್ಚಿನ ನಿಮ್ಮ ಸೇವೆಗಳು ಸಿಗುವಂತಾಗಲಿ ಅನ್ನುವ ಶುಭ ಹಾರೈಕೆಯೊಂದಿಗೆ 
ಡಾ. ಗಾಯತ್ರಿ ಮುತ್ತಪ್ಪ ಇವರಿಗೆ  ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ ಹಾರ್ದಿಕ ಶುಭಾಶಯಗಳು.

LEAVE A REPLY

Please enter your comment!
Please enter your name here

five × 1 =

ಬೆಂಗಳೂರು-ಸ್ಟಾರ್ ವರ್ಟೆಕ್ಸ್ ನ‌ ಸಂಸ್ಥಾಪಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ "ರೂಪಲಾವಣ್ಯಮ್" ಮಹಿಳಾ ಸಾಧಕಿ ಗೌರವ

ಸ್ಮೃತಿ ಸಾಧನಾ ಮೆಮೊರೀಸ್ ಎಚೀವ್ಮೆಂಟ್ ಮತ್ತು ಎನ್‌.ಆರ್‌.ಫೌಂಡೇಶನ್&ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಯಶವಂತಪುರದ ವಿವಂತ ಹೊಟೇಲ್ ನಲ್ಲಿ ರವಿವಾರ ಮಾರ್ಚ್ 27 ರಂದು ಜರುಗಿದ ಸಾಧಕಿಯರ ಸಮ್ಮೇಳನದಲ್ಲಿ ಸಮಾಜಸೇವಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ "ರೂಪಲಾವಣ್ಯಮ್ ಸೀಸನ್-2"ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೋಲಾರದ ಗಣಿನಾಡಿನ ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿಯಲ್ಲಿ ಹುಟ್ಟಿದ ಗಾಯತ್ರಿ ಮುತ್ತಪ್ಪ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಶ್ರೀನಿವಾಸಪುರದಲ್ಲಿ ಪೂರೈಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾಂ ಇಲ್ಲಿ ಇಂಜಿನಿಯರಿಂಗ್ ಪೂರೈಸಿ, 2011 ರಲ್ಲಿ ಕಾರ್ಯನಿರ್ವಾಹಕ ಹುದ್ದೆಯಲ್ಲಿ ತೊಡಗಿಸಿಕೊಂಡ ಇವರು 2016 ರಲ್ಲಿ ತನ್ನದೇ ನಾಯಕತ್ವದಲ್ಲಿ "ಸ್ಟಾರ್ ವರ್ಟೆಕ್ಸ್" ಅನ್ನುವ ಸ್ವಂತ ಸಂಸ್ಥೆಯನ್ನು ಹುಟ್ಟು ಹಾಕಿ ಅದರಲ್ಲಿ ತನ್ನನ್ನು ತಾನು ತೊಡಗಿಸಿಕೊಂಡರು. ಕ್ರೀಡೆ ಹಾಗೂ ಸಮಾಜ ಸೇವೆಯಲ್ಲಿ ನಿರಂತರವಾಗಿ ತನ್ನನ್ನು ತಾನು ತೊಡಗಿಸಿಕೊಂಡ ಇವರು ಕೊರೋನದ ಸಂಕಷ್ಟದ ನಡುವೆಯೂ ಮನೆ ಮನೆಗೆ ತೆರಳಿ ದಿನ ನಿತ್ಯದ ರೇಷನ್ ಸಾಮಗ್ರಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.2019 ರಲ್ಲಿ ಬಾದಾಮಿಯ ನೆರಪೀಡಿತ ಪ್ರದೇಶಕ್ಕೆ ತೆರಳಿ ಸಂತ್ರಸ್ತರಿಗೆ ಸಹಾಯಹಸ್ತ

Send this to a friend