ಭರವಸೆಯ ಬೆಳಕುಬೆಂಗಳೂರು-ಸ್ಟಾರ್ ವರ್ಟೆಕ್ಸ್ ನ‌ ಸಂಸ್ಥಾಪಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ "ರೂಪಲಾವಣ್ಯಮ್" ಮಹಿಳಾ...

ಬೆಂಗಳೂರು-ಸ್ಟಾರ್ ವರ್ಟೆಕ್ಸ್ ನ‌ ಸಂಸ್ಥಾಪಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ “ರೂಪಲಾವಣ್ಯಮ್” ಮಹಿಳಾ ಸಾಧಕಿ ಗೌರವ

-

- Advertisment -spot_img
ಸ್ಮೃತಿ ಸಾಧನಾ ಮೆಮೊರೀಸ್ ಎಚೀವ್ಮೆಂಟ್ ಮತ್ತು ಎನ್‌.ಆರ್‌.ಫೌಂಡೇಶನ್&ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಯಶವಂತಪುರದ ವಿವಂತ ಹೊಟೇಲ್ ನಲ್ಲಿ ರವಿವಾರ ಮಾರ್ಚ್ 27 ರಂದು ಜರುಗಿದ ಸಾಧಕಿಯರ ಸಮ್ಮೇಳನದಲ್ಲಿ ಸಮಾಜಸೇವಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ “ರೂಪಲಾವಣ್ಯಮ್ ಸೀಸನ್-2″ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೋಲಾರದ ಗಣಿನಾಡಿನ ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿಯಲ್ಲಿ ಹುಟ್ಟಿದ ಗಾಯತ್ರಿ ಮುತ್ತಪ್ಪ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಶ್ರೀನಿವಾಸಪುರದಲ್ಲಿ ಪೂರೈಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾಂ ಇಲ್ಲಿ ಇಂಜಿನಿಯರಿಂಗ್ ಪೂರೈಸಿ, 2011 ರಲ್ಲಿ ಕಾರ್ಯನಿರ್ವಾಹಕ ಹುದ್ದೆಯಲ್ಲಿ ತೊಡಗಿಸಿಕೊಂಡ ಇವರು 2016 ರಲ್ಲಿ ತನ್ನದೇ ನಾಯಕತ್ವದಲ್ಲಿ “ಸ್ಟಾರ್ ವರ್ಟೆಕ್ಸ್” ಅನ್ನುವ ಸ್ವಂತ ಸಂಸ್ಥೆಯನ್ನು ಹುಟ್ಟು ಹಾಕಿ ಅದರಲ್ಲಿ ತನ್ನನ್ನು ತಾನು ತೊಡಗಿಸಿಕೊಂಡರು.
ಕ್ರೀಡೆ ಹಾಗೂ ಸಮಾಜ ಸೇವೆಯಲ್ಲಿ ನಿರಂತರವಾಗಿ
ತನ್ನನ್ನು ತಾನು ತೊಡಗಿಸಿಕೊಂಡ ಇವರು ಕೊರೋನದ ಸಂಕಷ್ಟದ ನಡುವೆಯೂ ಮನೆ ಮನೆಗೆ ತೆರಳಿ ದಿನ ನಿತ್ಯದ ರೇಷನ್ ಸಾಮಗ್ರಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.2019 ರಲ್ಲಿ ಬಾದಾಮಿಯ ನೆರಪೀಡಿತ ಪ್ರದೇಶಕ್ಕೆ ತೆರಳಿ ಸಂತ್ರಸ್ತರಿಗೆ ಸಹಾಯಹಸ್ತ ನೀಡಿರುತ್ತಾರೆ.ಕಳೆದೆರಡು ವರ್ಷಗಳ ಹಿಂದೆ ಟಿ.ವಿ.9 ನಲ್ಲಿ ಪ್ರಸಾರವಾದ ನೆಲಮಂಗಲದ ಗೌರಮ್ಮ ಎನ್ನುವ ಮಹಿಳೆಯ ಸಂಕಷ್ಟಕ್ಕೆ ಮರುಗಿ 3 ತಿಂಗಳ ರೇಷನ್ ಸಾಮಗ್ರಿಗಳನ್ನು ನೀಡಿದ್ದು ಅಲ್ಲದೆ ಅನೇಕ ನೊಂದ ಬಡವರಿಗೆ ಸಹಾಯ ನೀಡುತ್ತಿರುವ ಇವರು ಪ್ರಚಾರ ಬಯಸದೆ ತೆರೆಮರೆಯಲ್ಲಿಯೇ ಕೆಲಸವನ್ನು ಪ್ರೀತಿಯಿಂದ ನಡೆಸಿಕೊಂಡು ಬರುತ್ತಿದ್ದಾರೆ.ಸರಕಾರಿ ಶಾಲೆಗಳಿಗೆ
ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೇಕಾಗುವ ಪುಸ್ತಕ ಮತ್ತು ಕ್ರೀಡಾ ಪರಿಕರಗಳನ್ನು ನೀಡಿ ಸಹಕರಿಸಿದ್ದಾರೆ. ಇವೆಲ್ಲದರ ಜೊತೆಗೆ ನೊಂದ ಅನೇಕರಿಗೆ ತನ್ನ ಸಂಸ್ಥೆಯಲ್ಲಿ ಕೆಲಸ ನೀಡುವ ಮೂಲಕ ಅವರ ಭವಿಷ್ಯಕ್ಕೆ ಸಹಕಾರಿಯಾಗಿದ್ದಾರೆ.
ಇತ್ತೀಚೆಗೆ ಇವರ ಸಮಾಜಮುಖಿ ಕೆಲಸ ಮತ್ತು ತೊಡಗುವಿಕೆಯನ್ನು ಗಮನಿಸಿ “UNIVERSAL DEVELOPMENT COUNCIL ” ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತ್ತು.
ನಿರಂತರವಾಗಿ ತನ್ನನ್ನು ತಾನು ಸಮಾಜಮುಖಿಯಾಗಿ ತೊಡಗಿಸಿಕೊಂಡಿರುವ ಇವರು ಶ್ರೀನಿವಾಸಪುರದ ದಿ‌.ಲಕ್ಷ್ಮಿ ನರಸಮ್ಮ ಮತ್ತು  ಶ್ರೀಯುತ ಮುತ್ತಪ್ಪ ಇವರ ಪುತ್ರಿ.
ಸಮಾಜದಲ್ಲಿ ಇನ್ನೂ ಹೆಚ್ಚಿನ ನಿಮ್ಮ ಸೇವೆಗಳು ಸಿಗುವಂತಾಗಲಿ ಅನ್ನುವ ಶುಭ ಹಾರೈಕೆಯೊಂದಿಗೆ 
ಡಾ. ಗಾಯತ್ರಿ ಮುತ್ತಪ್ಪ ಇವರಿಗೆ  ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ ಹಾರ್ದಿಕ ಶುಭಾಶಯಗಳು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × 4 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you