Site icon SportsKannada ಸ್ಪೋರ್ಟ್ಸ್ ಕನ್ನಡ

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್



ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ.

ಈ ಟೂರ್ನಮೆಂಟ್ ಡಾ. ಜಯರಾಮ್ ಅವರ ಸ್ಮರಣಾರ್ಥವಾಗಿ ಡಾ. ಪುನೀತ್  ಕುಮಾರ್ ಕಪ್ ರೂಪದಲ್ಲಿ ನಡೆಯಲಿದ್ದು, ಡಿಸೆಂಬರ್ 25 ರಿಂದ 28, 2025ರವರೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ, ತುಮಕೂರು ನಲ್ಲಿ  ಜರುಗಲಿದೆ.

ಈ ಪಂದ್ಯಾವಳಿ ರಾಜ್ಯದ ವಿವಿಧ ಭಾಗಗಳಿಂದ ಯುವ ಕ್ರಿಕೆಟಿಗರನ್ನು ಒಂದೇ ವೇದಿಕೆಯಲ್ಲಿ ತರಲಿದ್ದು, ಪ್ರತಿಭಾವಂತರಿಗೆ ತಮ್ಮ ಕೌಶಲ್ಯ ಪ್ರದರ್ಶಿಸಲು ಸುವರ್ಣಾವಕಾಶ ಒದಗಿಸುತ್ತದೆ.

ಪ್ರಥಮ ಬಹುಮಾನವಾಗಿ ₹5 ಲಕ್ಷ ನಗದು, ದ್ವಿತೀಯ ಬಹುಮಾನ ₹2.5 ಲಕ್ಷ, ಹಾಗೂ ಉತ್ತಮ ಬ್ಯಾಟ್ಸ್‌ಮನ್ ಮತ್ತು ಬೌಲರ್ ಪ್ರಶಸ್ತಿಗಳಿಗೆ ತಲಾ ₹50,000 ನಗದು ಬಹುಮಾನ ನೀಡಲಾಗುವುದು.

ಟೂರ್ನಮೆಂಟ್‌ನ ಪ್ರಮುಖ ಉದ್ದೇಶ — ಕ್ರೀಡಾ ಸ್ಪೂರ್ತಿ, ಶಿಸ್ತು ಹಾಗೂ ಸಹಕಾರದ ಮನೋಭಾವ ಬೆಳೆಸುವುದು. ಕಾರ್ಯಕ್ರಮದ ಆಯೋಜಕರು ತಿಳಿಸಿರುವಂತೆ, ಡಿಸೆಂಬರ್ 16ರೊಳಗೆ ತಂಡಗಳ ನೋಂದಣಿ ಪೂರ್ಣಗೊಳಿಸಬೇಕು.

ಈ ಕ್ರೀಡಾ ಉತ್ಸವಕ್ಕೆ ರಾಜ್ಯದ ಎಲ್ಲಾ ಕ್ರೀಡಾಭಿಮಾನಿಗಳು, ತಂಡಗಳು ಹಾಗೂ ಯುವಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಘದವರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಲು:
ಪ್ರಕಾಶ್ ಚಕ್ರವರ್ತಿ – 9845895324
ರವಿ – 9620995156
ಯಶ್ – 7349653896


Exit mobile version