ಕ್ರಿಕೆಟ್ಉಡುಪಿಯಲ್ಲಿ ಕೀರ್ತಿಶೇಷ ಶ್ರೀಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಸ್ಮರಣಾರ್ಥ ರಾಜ್ಯಮಟ್ಟದ ಲೆಜೆಂಡ್ಸ್ ಕಪ್ ಕ್ರಿಕೆಟ್...

ಉಡುಪಿಯಲ್ಲಿ ಕೀರ್ತಿಶೇಷ ಶ್ರೀಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಸ್ಮರಣಾರ್ಥ ರಾಜ್ಯಮಟ್ಟದ ಲೆಜೆಂಡ್ಸ್ ಕಪ್ ಕ್ರಿಕೆಟ್ ಪಂದ್ಯಾಟ

-

- Advertisment -spot_img

ಉಡುಪಿಯಲ್ಲಿ ಕೀರ್ತಿಶೇಷ ಶ್ರೀಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಸ್ಮರಣಾರ್ಥ ರಾಜ್ಯಮಟ್ಟದ ಲೆಜೆಂಡ್ಸ್ ಕಪ್ ಕ್ರಿಕೆಟ್ ಪಂದ್ಯಾಟ

ಆತ್ಮೀಯರೇ
ಇದೇ ಬರುವ 2025 ಡಿಸೆಂಬರ್ ತಿಂಗಳ 19,20,21ರಂದು ಶುಕ್ರವಾರದಿಂದ ಭಾನುವಾರದವರೆಗೆ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಧರ್ಮ, ಸಾಹಿತ್ಯ, ಕಲೆ, ಕ್ರೀಡೆಯ ಮಹಾನ್ ಪೋಷಕರಾಗಿದ್ದ ಶ್ರೀಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ ಉಡುಪಿಯಲ್ಲಿ ರಾಜ್ಯಮಟ್ಟದಲ್ಲಿ ಲೆಜೆಂಡ್ಸ್ ಕಪ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಬೇಕೆಂದು ನೂರಾರು ಕ್ರೀಡಾಭಿಮಾನಿಗಳು ಜೊತೆಗೂಡಿ ಸಂಕಲ್ಪಿಸಿದ್ದಾರೆ.

ಟೆನಿಸ್ ಬಾಲ್ ಕ್ರಿಕೆಟ್ ನಲ್ಲಿ 80,90 ದಶಕದಲ್ಲಿ ಮಿಂಚಿದ, ಅಪ್ರತಿಮ ಸಾಧನೆಗೈದ ರಾಜ್ಯದ ಪ್ರಸಿದ್ಧ ಕ್ರಿಕೆಟ್ ಆಟಗಾರರ ಕೂಡುವಿಕೆಯಲ್ಲಿ ಉಡುಪಿಯಲ್ಲಿ ಮೊತ್ತಮೊದಲ ಭಾರಿಗೆ ಲೆಜೆಂಡ್ಸ್ ಕಪ್ ಕ್ರಿಕೆಟ್ ಪಂದ್ಯಾಟವು ಜರಗುತ್ತಿದೆ.

ಬೆಂಗಳೂರು, ಮೈಸೂರು, ಕೋಲಾರ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರತಿಭಾನ್ವಿತ ತಂಡಗಳು ಈ ಸ್ಪರ್ಧಾಕೂಟದಲ್ಲಿ ಪಾಲ್ಗೊಳ್ಳುತ್ತಿವೆ.

ವಿಜೇತರಿಗೆ ಶ್ರೀಲಕ್ಷ್ಮೀವರತೀರ್ಥಶ್ರೀ ಟ್ರೋಫಿ ನಗದು ಹಾಗೂ ಆಕರ್ಷಕ ಪಾರಿತೋಷಕಗಳು ಒಲಿಯಲಿದೆ.

ಉಡುಪಿಯ ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆಯ ಮಾರ್ಗದ ಬಳಿಯ ಉಡುಪಿ ನಗರಸಭೆಯ ಮಹಾತ್ಮಗಾಂಧಿ ಬಯಲು ರಂಗಮಂದಿರದ ಮೈದಾನದಲ್ಲಿ ಈ ಪಂದ್ಯಾಕೂಟ ಆಯೋಜನೆಗೊಂಡಿದೆ.

ಕನ್ನಡನಾಡಿನ ಪ್ರಸಿದ್ಧ ಕ್ರೀಡಾವಾಹಿನಿಯಾದ ಸ್ಪೋರ್ಟ್ಸ್ ಕನ್ನಡ ಚಾನೆಲ್ ಹಾಗೂ ಶ್ರೀಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಅಭಿಮಾನಿಗಳ-ಸಾರಥ್ಯದಲ್ಲಿ ಮೂಡಿಬರಲಿರುವ ಈ ಮಹೋನ್ನತ ಕ್ರೀಡಾಉತ್ಸವದಲ್ಲಿ ಎಲ್ಲಾ ಕ್ರೀಡಾಭಿಮಾನಿಗಳು ಪಾಲ್ಗೊಂಡು ಹೃತ್ಪೂರ್ವಕವಾದ ಸಹಕಾರ ಸಹಾಯದೊಂದಿಗೆ ರಾಜ್ಯಮಟ್ಟದ ಈ ಕ್ರಿಕೆಟ್ ಪಂದ್ಯಾವಳಿಯನ್ನು ಅಭೂತಪೂರ್ವವಾಗಿ ನಡೆಸಿಕೊಡಬೇಕೆಂದು ಪ್ರೀತಿ-ಅಭಿಮಾನಪೂರ್ವಕವಾಗಿ ಕೇಳಿಕೊಳ್ಳುತ್ತಿದ್ದೇವೆ.

ನಿಮ್ಮ ವಿಶ್ವಾಸಿ.

ಮುಖ್ಯಸ್ಥರು.

ಸ್ಪೋರ್ಟ್ಸ್ ಕನ್ನಡ ಚಾನೆಲ್
ಉಡುಪಿ.

LEAVE A REPLY

Please enter your comment!
Please enter your name here

one × 1 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you