5.4 C
London
Wednesday, April 17, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಬೈಂದೂರು-ತಾಲೂಕು ಮಟ್ಟದಲ್ಲಿ ಮಿಂಚಿದ ಆಟಗಾರರಿಗೆ ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲಾ ತಂಡದಲ್ಲಿ ಅವಕಾಶ-ಗೌತಮ್ ಶೆಟ್ಟಿ

ಬೈಂದೂರು-ತಾಲೂಕು ಮಟ್ಟದಲ್ಲಿ ಮಿಂಚಿದ ಆಟಗಾರರಿಗೆ ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲಾ ತಂಡದಲ್ಲಿ ಅವಕಾಶ-ಗೌತಮ್ ಶೆಟ್ಟಿ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಟೆನಿಸ್ಬಾಲ್ ಕ್ರಿಕೆಟ್ ನ 50 ವರ್ಷಗಳ ಇತಿಹಾಸದ ಹಿರಿಯ ಸಂಸ್ಥೆ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ಇವರ ಆಶ್ರಯದಲ್ಲಿ ಬೈಂದೂರಿನ ಗಾಂಧಿ ಮೈದಾನದಲ್ಲಿ
2 ದಿನಗಳ ಕಾಲ T.C.A ಪ್ರಾಯೋಜಿತ ದ್ವಿತೀಯ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು.
10 ಓವರ್-90 ಗಜಗಳ ಕ್ರಿಕೆಟ್ ಪಂದ್ಯಾಟದಲ್ಲಿ ಬೈಂದೂರು ತಾಲೂಕಿನ 6 ತಂಡಗಳು ಭಾಗವಹಿಸಿದ್ದವು.
ಅಂತಿಮವಾಗಿ ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಹೊಳೆಬಾಗಿಲು ಬೈಂದೂರು ತಂಡ ನಿಗದಿತ 10 ಓವರ್ ಗಳಲ್ಲಿ 52 ರನ್ ಗಳಿಸಿತ್ತು.ಸವಾಲನ್ನು ಅನಾಯಾಸವಾಗಿ ಬೆಂಬತ್ತಿದ 8 ಸ್ಟಾರ್ ನಾವುಂದ 6.3 ಓವರ್ ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ ಗುರಿಯನ್ನು ತಲುಪಿ ಹೊಳೆಬಾಗಿಲು ಬೈಂದೂರು ತಂಡದ ವಿರುದ್ಧ 7 ವಿಕೆಟ್ ಗಳ ಗೆಲುವು ದಾಖಲಿಸಿದರು.
ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿ 8 ಸ್ಟಾರ್ ನಾವುಂದ ತಂಡದ ನಾಗರಾಜ್,ಟೂರ್ನಮೆಂಟ್ ಬೆಸ್ಟ್
ಬ್ಯಾಟ್ಸ್‌ಮನ್‌ 8 ಸ್ಟಾರ್ ನ ಪ್ರದೀಪ್,ಬೆಸ್ಟ್ ಬೌಲರ್
ವಸಂತ ಹೊಳೆಬಾಗಿಲು,ಬೆಸ್ಟ್ ಕೀಪರ್ ಜೆ.ಡಿ.ಸಂತೋಷ ಪೂಜಾರಿ ಮತ್ತು ಸರಣಿಶ್ರೇಷ್ಟ ಪ್ರಶಸ್ತಿ ದೇವರಾಜ್ ಆಚಾರ್ ವಂಡ್ಸೆ ಪಡೆದರು.
*ವರ್ಣರಂಜಿತ ಸಮಾರೋಪ ಸಮಾರಂಭ*
ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ T.C.A ಉಡುಪಿ ಅಧ್ಯಕ್ಷ ಗೌತಮ್ ಶೆಟ್ಟಿ “ಒಂದು ತಂಡದಲ್ಲಿ 11-15 ಆಟಗಾರರ ಪ್ರದರ್ಶನವೂ ಅತ್ಯಮೂಲ್ಯ,ಉಡುಪಿ ತಾಲೂಕು ಮಟ್ಟದಲ್ಲಿ ಮಿಂಚಿದ ಆಟಗಾರರಿಗೆ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಆಡುವ ಅವಕಾಶ ನೀಡಲಾಗುತ್ತದೆ ಎಂದರು ಹಾಗೂ ವಿಕ್ರಮ್ ಬೈಂದೂರು ತಂಡದ ಕಾರ್ಯವೈಖರಿಯನ್ನು ಶ್ಲಾಘಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿಕ್ರಮ್ ಬೈಂದೂರಿನ ಗೌರವಾಧ್ಯಕ್ಷರಾದ ಗಿರೀಶ್ ಬೈಂದೂರು “T.C.A ಯುವ ಪ್ರತಿಭಾನ್ವಿತ ಆಟಗಾರರಿಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗಪಡಿಸಿಕೊಳ್ಳಿ ಹಾಗೂ ವಿಕ್ರಮ್ ಸ್ಪೋರ್ಟ್ಸ್ ಕ್ಲಬ್ ಸದ್ಯದಲ್ಲಿಯೇ ಬೈಂದೂರಿನಲ್ಲಿ ಲೆದರ್ ಬಾಲ್ ಕ್ರಿಕೆಟ್ ಕೋಚಿಂಗ್ ಅಕಾಡೆಮಿಯನ್ನು ಸ್ಥಾಪಿಸಲಿದೆ ಎಂದರು.T.C.A ಬೈಂದೂರು ತಂಡದ ಪರವಾಗಿ ಉಡುಪಿ ಜಿಲ್ಲಾ ಅಸೋಸಿಯೇಷನ್ ಗೆ ಪ್ರಾಥಮಿಕ ನೆರವಿನ ನಿಧಿರೂಪದಲ್ಲಿ 50,000 ರೂಪಾಯಿಯನ್ನು ಗೌತಮ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು.
ಸಭೆಯಲ್ಲಿ ಉದ್ಯಮಿಗಳಾದ ಮನೀಶ್ ಶೆಟ್ಟಿ, ಬಿ.ಎಸ್.ಸುರೇಶ್ ಶೆಟ್ಟಿ, ಧನುಷ್ ಶೆಟ್ಟಿ,ಪಾಂಡುರಂಗ ಪಡಿಯಾರ್,ಸುಜಯ್ ಶೆಟ್ಟಿ, ನಾಗರಾಜ್ ಗಾಣಿಗ,ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,
ವಿಕ್ರಮ್ ಸಂಸ್ಥೆಯ ಹಿರಿಯ ಆಟಗಾರರಾದ ಸದಾನಂದ ಉಡುಪಿ,ನಾಗರಾಜ್ ಶೆಟ್ಟಿ ನಾಕಟ್ಟೆ,ದಿನೇಶ್ ಗಾಣಿಗ ಬೈಂದೂರು,ನಾರಾಯಣ ಕೆರೆಕಟ್ಟೆ,ಮಹಾಬಲ ದೇವಾಡಿಗ,ಸದಾಶಿವ ಪಡುವರಿ,ರಾಜೇಶ್ ಆಚಾರ್ಯ,ಚರಣ್ ಬೈಂದೂರು ಇನ್ನಿತರರು ಉಪಸ್ಥಿತರಿದ್ದರು.
ಇಬ್ರಾಹಿಂ ಆತ್ರಾಡಿ,ರಾಘು ಬ್ರಹ್ಮಾವರ ಮತ್ತು ವಿನೀತ್ ಬ್ರಹ್ಮಾವರ ತೀರ್ಪುಗಾರರಾಗಿ, ಅರವಿಂದ್
ಮಣಿಪಾಲ್ ಮತ್ತು ಅಜಯ್ ರಾಜ್ ಮಂಗಳೂರು ವೀಕ್ಷಕ ವಿವರಣೆಯಲ್ಲಿ ಸಹಕರಿಸಿದರೆ,ಸೌಜನ್ ಪಡುಬಿದ್ರಿ ನೇತೃತ್ವದಲ್ಲಿ M9 ಸ್ಪೋರ್ಟ್ಸ್ ಪಂದ್ಯಾವಳಿಯ ನೇರಪ್ರಸಾರವನ್ನು ಬಿತ್ತರಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

6 − one =