ಕ್ರಿಕೆಟ್ಸುಧಿತಿ ಫ್ರೆಂಡ್ಸ್ ತಂಡಕ್ಕೆ ಬೀಜಾಡಿ ಟ್ರೋಫಿ-2019

ಸುಧಿತಿ ಫ್ರೆಂಡ್ಸ್ ತಂಡಕ್ಕೆ ಬೀಜಾಡಿ ಟ್ರೋಫಿ-2019

-

- Advertisment -spot_img
ಗೆಳೆಯರ ಬಳಗ ಬೀಜಾಡಿ ತಂಡ ಕಳೆದ ಶನಿವಾರ ಹಾಗೂ ರವಿವಾರದಂದು ಬೀಜಾಡಿ ಪಡುಶಾಲೆಯಲ್ಲಿ ಏರ್ಪಡಿಸಿದ್ದ 40 ಗಜಗಳ ಹೊನಲು ಬೆಳಕಿನ ಪಂದ್ಯಾಕೂಟವನ್ನು ಸುಧಿತಿ ಫ್ರೆಂಡ್ಸ್ ಕುಂಭಾಶಿ ಜಯಿಸಿದೆ.

   

ಶನಿವಾರದಂದು ಸ್ಥಳೀಯ ಆಟಗಾರರನ್ನೊಳಗೊಂಡ 6 ಫ್ರಾಂಚೈಸಿಗಳು, ರವಿವಾರದಂದು ಆಯಾಯ ಊರಿನ ತಂಡಗಳು ಸೆಣಸಾಡಿದ್ದವು. ಲೀಗ್ ಹಂತದ ಹೋರಾಟದ ಬಳಿಕ ಸೆಮಿಫೈನಲ್ ಪ್ರವೇಶಿಸಿದ್ದ ಪ್ಯಾಂಥರ್ಸ್ ಬೀಜಾಡಿ, ಬೀಜಾಡಿ ಬುಲ್ಸ್ ತಂಡವನ್ನು ಸೋಲಿಸಿದರೆ,ಸುಧಿತಿ ಫ್ರೆಂಡ್ಸ್ ,ಗುತ್ತು ಫ್ರೆಂಡ್ಸ್ ಬಲ್ಲಕುಂಜೆ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದವು. ಅಂತಿಮವಾಗಿ ಕುಂಭಾಶಿಯ ತಂಡ ಬಲ್ಲಕುಂಜೆ ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿ ಪಡೆಯಿತು. ವಿಶೇಷವಾಗಿ ನೀಡಲಾದ ಶಿಸ್ತಿನ ತಂಡ ಪ್ರಶಸ್ತಿಯನ್ನು ಗುರುಶ್ರೀ ಗುಂಡಿ ಬೈಲ್ ಹಾಗೂ ಕುಟೀರ ಫ್ರೆಂಡ್ಸ್ ಗಿಳಿಯಾರು ತಂಡ ಪಡೆದುಕೊಂಡಿತು.

ವೈಯಕ್ತಿಕ ಪ್ರಶಸ್ತಿಗಳನ್ನು  ಕ್ರಮವಾಗಿ, ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಸುಧಿತಿ ಫ್ರೆಂಡ್ಸ್ ನ ಪವನ್, ಎಮರ್ಜಿಂಗ್ ಪ್ಲೇಯರ್ ಬ್ಲಾಕ್ ಟೈಗರ್ ನ ಶ್ರೇಯಸ್,ಬೆಸ್ಟ್ ಫೀಲ್ಡರ್ ಚವನ್ ಕುಂಜಿಗುಡಿ,ಬೆಸ್ಟ್ ಕೀಪರ್ ಶ್ರೀಧರ್ ಬೀಜಾಡಿ ಪ್ಯಾಂಥರ್ಸ್, ಬೆಸ್ಟ್ ಬೌಲರ್ ಸುಧಾಕರ್ ಸುಧಿತಿ ಫ್ರೆಂಡ್ಸ್, ಬೆಸ್ಟ್ ಬ್ಯಾಟ್ಸ್‌ಮನ್ ಸಂದೇಶ್ ಬೀಜಾಡಿ ಬುಲ್ಸ್,ಸರಣಿ ಶ್ರೇಷ್ಠ ಅಶ್ವಿನ್ ಸುಧಿತಿ ಫ್ರೆಂಡ್ಸ್ ಪಡೆದುಕೊಂಡರು.

ವಿಜೇತ ತಂಡ‌ 25,555 ನಗದು,ದ್ವಿತೀಯ ಸ್ಥಾನಿ ತಂಡ 15,555 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಿತು.

ಶಿಸ್ತು ಹಾಗೂ ಸಮಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ ಈ ಪಂದ್ಯಾಕೂಟ ಸಮಾಜದ ಅಶಕ್ತರಿಗೆ ಸಹಾಯ ಹಾಗೂ ಗ್ರಾಮೀಣ ಮಟ್ಟದ ಆಟಗಾರರ ಪ್ರತಿಭೆಗಳ ಅನಾವರಣದ ಸದುದ್ದೇಶದಿಂದ ಏರ್ಪಡಿಸಲಾಗಿತ್ತು.

ಸಮಾರೋಪ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಗಣೇಶ್ ಮಾಸ್ಟರ್,ಸಿರಾಜ್ ರಿಧಾ ಅಮೀನ್,ರಾಜೇಶ್ ಪೂಜಾರಿ,ಸುಭಾಷ್ ಕಾಂಚನ್,ಗೆಳೆಯರ ಬಳಗದ ಅಧ್ಯಕ್ಷ ಅಶೋಕ್ ಪೂಜಾರಿ, ಉಪಾಧ್ಯಕ್ಷ ಗಣೇಶ್ ಅಕ್ಷಾಂತರಿಯ, ಮೀನುಗಾರಿಕಾ ಸೊಸೈಟಿ ಉಪಾಧ್ಯಕ್ಷ ನಾಗೇಶ್ ಆಟೋ, ಪಂದ್ಯಾಕೂಟದ ಮುಖ್ಯ ರೂವಾರಿ ಚಾಲೆಂಜ್ ಗಣೇಶ್ ಹಾಗೂ ಸಚಿನ್.ಎಸ್.ಕುಂದರ್
ಉಪಸ್ಥಿತರಿದ್ದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

19 − 8 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you