ಕ್ರಿಕೆಟ್ಸುಧಿತಿ ಫ್ರೆಂಡ್ಸ್ ತಂಡಕ್ಕೆ ಬೀಜಾಡಿ ಟ್ರೋಫಿ-2019

ಸುಧಿತಿ ಫ್ರೆಂಡ್ಸ್ ತಂಡಕ್ಕೆ ಬೀಜಾಡಿ ಟ್ರೋಫಿ-2019

-

- Advertisment -spot_img
ಗೆಳೆಯರ ಬಳಗ ಬೀಜಾಡಿ ತಂಡ ಕಳೆದ ಶನಿವಾರ ಹಾಗೂ ರವಿವಾರದಂದು ಬೀಜಾಡಿ ಪಡುಶಾಲೆಯಲ್ಲಿ ಏರ್ಪಡಿಸಿದ್ದ 40 ಗಜಗಳ ಹೊನಲು ಬೆಳಕಿನ ಪಂದ್ಯಾಕೂಟವನ್ನು ಸುಧಿತಿ ಫ್ರೆಂಡ್ಸ್ ಕುಂಭಾಶಿ ಜಯಿಸಿದೆ.

   

ಶನಿವಾರದಂದು ಸ್ಥಳೀಯ ಆಟಗಾರರನ್ನೊಳಗೊಂಡ 6 ಫ್ರಾಂಚೈಸಿಗಳು, ರವಿವಾರದಂದು ಆಯಾಯ ಊರಿನ ತಂಡಗಳು ಸೆಣಸಾಡಿದ್ದವು. ಲೀಗ್ ಹಂತದ ಹೋರಾಟದ ಬಳಿಕ ಸೆಮಿಫೈನಲ್ ಪ್ರವೇಶಿಸಿದ್ದ ಪ್ಯಾಂಥರ್ಸ್ ಬೀಜಾಡಿ, ಬೀಜಾಡಿ ಬುಲ್ಸ್ ತಂಡವನ್ನು ಸೋಲಿಸಿದರೆ,ಸುಧಿತಿ ಫ್ರೆಂಡ್ಸ್ ,ಗುತ್ತು ಫ್ರೆಂಡ್ಸ್ ಬಲ್ಲಕುಂಜೆ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದವು. ಅಂತಿಮವಾಗಿ ಕುಂಭಾಶಿಯ ತಂಡ ಬಲ್ಲಕುಂಜೆ ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿ ಪಡೆಯಿತು. ವಿಶೇಷವಾಗಿ ನೀಡಲಾದ ಶಿಸ್ತಿನ ತಂಡ ಪ್ರಶಸ್ತಿಯನ್ನು ಗುರುಶ್ರೀ ಗುಂಡಿ ಬೈಲ್ ಹಾಗೂ ಕುಟೀರ ಫ್ರೆಂಡ್ಸ್ ಗಿಳಿಯಾರು ತಂಡ ಪಡೆದುಕೊಂಡಿತು.

ವೈಯಕ್ತಿಕ ಪ್ರಶಸ್ತಿಗಳನ್ನು  ಕ್ರಮವಾಗಿ, ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಸುಧಿತಿ ಫ್ರೆಂಡ್ಸ್ ನ ಪವನ್, ಎಮರ್ಜಿಂಗ್ ಪ್ಲೇಯರ್ ಬ್ಲಾಕ್ ಟೈಗರ್ ನ ಶ್ರೇಯಸ್,ಬೆಸ್ಟ್ ಫೀಲ್ಡರ್ ಚವನ್ ಕುಂಜಿಗುಡಿ,ಬೆಸ್ಟ್ ಕೀಪರ್ ಶ್ರೀಧರ್ ಬೀಜಾಡಿ ಪ್ಯಾಂಥರ್ಸ್, ಬೆಸ್ಟ್ ಬೌಲರ್ ಸುಧಾಕರ್ ಸುಧಿತಿ ಫ್ರೆಂಡ್ಸ್, ಬೆಸ್ಟ್ ಬ್ಯಾಟ್ಸ್‌ಮನ್ ಸಂದೇಶ್ ಬೀಜಾಡಿ ಬುಲ್ಸ್,ಸರಣಿ ಶ್ರೇಷ್ಠ ಅಶ್ವಿನ್ ಸುಧಿತಿ ಫ್ರೆಂಡ್ಸ್ ಪಡೆದುಕೊಂಡರು.

ವಿಜೇತ ತಂಡ‌ 25,555 ನಗದು,ದ್ವಿತೀಯ ಸ್ಥಾನಿ ತಂಡ 15,555 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಿತು.

ಶಿಸ್ತು ಹಾಗೂ ಸಮಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ ಈ ಪಂದ್ಯಾಕೂಟ ಸಮಾಜದ ಅಶಕ್ತರಿಗೆ ಸಹಾಯ ಹಾಗೂ ಗ್ರಾಮೀಣ ಮಟ್ಟದ ಆಟಗಾರರ ಪ್ರತಿಭೆಗಳ ಅನಾವರಣದ ಸದುದ್ದೇಶದಿಂದ ಏರ್ಪಡಿಸಲಾಗಿತ್ತು.

ಸಮಾರೋಪ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಗಣೇಶ್ ಮಾಸ್ಟರ್,ಸಿರಾಜ್ ರಿಧಾ ಅಮೀನ್,ರಾಜೇಶ್ ಪೂಜಾರಿ,ಸುಭಾಷ್ ಕಾಂಚನ್,ಗೆಳೆಯರ ಬಳಗದ ಅಧ್ಯಕ್ಷ ಅಶೋಕ್ ಪೂಜಾರಿ, ಉಪಾಧ್ಯಕ್ಷ ಗಣೇಶ್ ಅಕ್ಷಾಂತರಿಯ, ಮೀನುಗಾರಿಕಾ ಸೊಸೈಟಿ ಉಪಾಧ್ಯಕ್ಷ ನಾಗೇಶ್ ಆಟೋ, ಪಂದ್ಯಾಕೂಟದ ಮುಖ್ಯ ರೂವಾರಿ ಚಾಲೆಂಜ್ ಗಣೇಶ್ ಹಾಗೂ ಸಚಿನ್.ಎಸ್.ಕುಂದರ್
ಉಪಸ್ಥಿತರಿದ್ದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × 2 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you