ಕ್ರಿಕೆಟ್ಸುಜಿತ್ ಭರ್ಜರಿ ಬ್ಯಾಟಿಂಗ್- ಎಮ್.ಬಿ.ಸಿ.ಸಿ ಜಯನಗರ ಮಡಿಲಿಗೆ ಸ್ವಾಮಿ ವಿವೇಕಾನಂದ ಕಪ್-2021

ಸುಜಿತ್ ಭರ್ಜರಿ ಬ್ಯಾಟಿಂಗ್- ಎಮ್.ಬಿ.ಸಿ.ಸಿ ಜಯನಗರ ಮಡಿಲಿಗೆ ಸ್ವಾಮಿ ವಿವೇಕಾನಂದ ಕಪ್-2021

-

- Advertisment -spot_img
ಭಾರತೀಯ ಜನತಾ ಪಕ್ಷ,ಬೆಂಗಳೂರು ದಕ್ಷಿಣ ಇವರು ಪ್ರಸ್ತುತ ಪಡಿಸಿದ,ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 158 ನೇ ಜನ್ಮದಿನಾಚರಣೆ ಹಾಗೂ ಯುವಕರ ದಿನಾಚರಣೆಯ ಅಂಗವಾಗಿ ಬಸವನಗುಡಿ ವಿದ್ಯಾಪೀಠ ಸಮೀಪದ ಚೆನ್ನಮ್ಮನ ಕೆರೆ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ 3 ದಿನಗಳ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಸ್ವಾಮಿ ವಿವೇಕಾನಂದ ಕಪ್-2021 ನ್ನು ಎಮ್.ಬಿ.ಸಿ.ಸಿ ಜಯನಗರ ತಂಡ ಜಯಿಸಿದೆ.
ಲೀಗ್ ಹಂತದ ರೋಚಕ ಪಂದ್ಯಗಳ ಬಳಿಕ ಸೆಮಿಫೈನಲ್ಸ್ ನಲ್ಲಿ ನ್ಯಾಶ್ ಬೆಂಗಳೂರು
ಆಟಗಾರರನ್ನೊಳಗೊಂಡ  ನಿತ್ಯ ನಿರಂತರ ಸೇವಾ ಟ್ರಸ್ಟ್ ಗೆ ಆಡಿದ ನ್ಯಾಶ್ ತಂಡ ನವೀನ್ ಫೈಟರ್ಸ್ ತಂಡವನ್ನು,ಎಮ್.ಬಿ‌.ಸಿ.ಸಿ ತಂಡ ಎಮ್‌.ಪಿ.ಥಂಡರ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನಿತ್ಯ ನಿರಂತರ ಸೇವಾ ಟ್ರಸ್ಟ್ ಗೆ ಆಡಿದ ನ್ಯಾಶ್ ತಂಡ 6 ಓವರ್ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 33 ಕಲೆಹಾಕಿತ್ತು.ಸುಲಭ ಸಾಧ್ಯತೆಯ ಗುರಿಯನ್ನು ಬೆನ್ನತ್ತಿದ ಎಮ್.ಬಿ.ಸಿ.ಸಿ ಅಗ್ರಕ್ರಮಾಂಕದ ಆಟಗಾರರ ಸಾಹಸದಿಂದ  ಕೇವಲ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿಯನ್ನು ತಲುಪಿ ಜಯಭೇರಿ ಬಾರಿಸಿತ್ತು.
ಪ್ರಥಮ ಪ್ರಶಸ್ತಿ ರೂಪದಲ್ಲಿ ಎಮ್.ಬಿ.ಸಿ.ಸಿ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ ನಿತ್ಯ ನಿರಂತರ ಸೇವಾ ಟ್ರಸ್ಟ್ ಗೆ ಆಡಿದ ನ್ಯಾಶ್ ತಂಡ,1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.
ಪಂದ್ಯಾಕೂಟದ ಬೆಸ್ಟ್ ಬ್ಯಾಟ್ಸ್‌ಮನ್‌ ಪ್ರಶಸ್ತಿ ನಿತ್ಯ ನಿರಂತರ ಸೇವಾ ಟ್ರಸ್ಟ್ ಗೆ ಆಡಿದ ನ್ಯಾಶ್ ತಂಡದ ನವೀನ್ ಚೂ,ಬೆಸ್ಟ್ ಬೌಲರ್ ಅದೇ ತಂಡದ ಕೃಷ್ಣ ಹಾಗೂ ಲೀಗ್ ಹಂತದಲ್ಲಿ ಭರ್ಜರಿ 7 ಸಿಕ್ಸರ್,4 ಬೌಂಡರಿ ಸಹಿತ (20 ಎಸೆತಗಳಲ್ಲಿ 63 ರನ್) ಆಕರ್ಷಕ ಅರ್ಧಶತಕ ಬಾರಿಸಿ,ಟೂರ್ನಮೆಂಟ್ ನ‌ ಅತ್ಯಧಿಕ ರನ್ ಗಳಿಕೆಯ ಆಟಗಾರನಾಗಿ ಹೊರಹೊಮ್ಮಿದ ಎಮ್.ಬಿ.ಸಿ.ಸಿ ತಂಡದ ಸುಜಿತ್ ಆಚಾರ್ಯ ಸರಣಿ ಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two − 2 =

Latest news

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...
- Advertisement -spot_imgspot_img

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ...

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌...

Must read

- Advertisement -spot_imgspot_img

You might also likeRELATED
Recommended to you