Categories
ಇತರೆ

ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಜಾಹೀರಾತು ವಿಭಾಗದ ಮುಖ್ಯಸ್ಥರಾಗಿ ಎಚ್. ಸುಶಾಂತ್ ಆಚಾರ್ ಬೈಂದೂರು ನೇಮಕ

ವಿಶ್ವದ ವಿವಿಧ ಕ್ರೀಡಾಸುದ್ದಿಗಳ ಜೊತೆಗೆ ಕರ್ನಾಟಕ ಟೆನ್ನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲಿಯೇ ಸುಧಾರಣೆಯ ಕ್ರಾಂತಿ ಮೂಡಿಸಿ,ಕರ್ನಾಟಕ ರಾಜ್ಯ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸ್ಥಾಪನೆಯ ಕನಸು
ಹೊತ್ತು,ರಾಜ್ಯದ ಎಲ್ಲಾ ಜಿಲ್ಲೆಗಳ ಹಿರಿಯ ಆಟಗಾರರನ್ನು ಸಂಪರ್ಕಿಸಿ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಹಾಗೂ ರಾಜ್ಯ ಟೆನ್ನಿಸ್ ಕ್ರಿಕೆಟ್ ಗ್ರೂಪನ್ನು ಸೃಷ್ಟಿಸಿ ಹಿರಿಯ-ಕಿರಿಯ ಆಟಗಾರರ ನಡುವೆ ಸಂಪರ್ಕ ಸೇತುವೆ ಸ್ಥಾಪಿಸಿದ ಕೋಟ ರಾಮಕೃಷ್ಣ ಆಚಾರ್ ಇವರ ಸಂಪಾದಕತ್ವದ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಜಾಹೀರಾತು ವಿಭಾಗದ ಮುಖ್ಯಸ್ಥರಾಗಿ ಯುವ ಪತ್ರಕರ್ತರಾದ ಎಚ್ ಸುಶಾಂತ್ ಆಚಾರ್ ಬೈಂದೂರು ನೇಮಕಗೊಂಡಿದ್ದಾರೆ.
ಎಚ್ ಸುಶಾಂತ್ ಆಚಾರ್ ಬೈಂದೂರು ಇವರು ಜೇಸಿಐ ಬೈಂದೂರು ಸಿಟಿಯ ಇದರ ಸಂಸ್ಥಾಪಕ ಕಾರ್ಯದರ್ಶಿಯಾಗಿ, ಶ್ರೀ ವಿಶ್ವಕರ್ಮ ಯುವಕ ಸಂಘ ರಿ ಬೈಂದೂರು ಇದರ ಪ್ರಧಾನ ಕಾರ್ಯದರ್ಶಿಯಾಗಿಯೂ, ವಾಗ್ಯ್ಜೋತಿ ಶ್ರವಣದೋಷವುಳ್ಳವರ ಬೈಂದೂರು ಇದರ ಸಂಚಾಲಕರಾಗಿ, ವಿವಿಧ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ 2019 ರ ಕ್ಷನ್ ರೀಪ್ಲೇ ಮತ್ತು ,2021ರ ಯುಗಾಂತರ ಕಾರ್ಯಕ್ರಮದ ಸಂಯೋಜಕರಾಗಿ ಕಾರ್ಯಕ್ರಮದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಪ್ರಸ್ತುತ ಕನ್ನಡ ಏಶ್ಯಾನೆಟ್ ನ ಕನ್ನಡಪ್ರಭ ಕನ್ನಡ ದಿನ ಪತ್ರಿಕೆಯ ಬೈಂದೂರು ತಾಲೂಕು ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅತ್ಯಂತ ಕಡಿಮೆ ಅವಧಿಯಲ್ಲಿ ಕರ್ನಾಟಕ ರಾಜ್ಯ ಮಾತ್ರವಲ್ಲದೇ ದೇಶ,ವಿದೇಶಗಳಲ್ಲೂ ಜನಪ್ರಿಯತೆ ಗಳಿಸಿದ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನಲ್ಲಿ ಜಾಹೀರಾತು ನೀಡಲಿಚ್ಚಿಸುವವರು ಎಚ್.ಸುಶಾಂತ್ ಬೈಂದೂರು ಇವರ ಮೊಬೈಲ್ ನಂಬರ್-9986176968 ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

two × 2 =