ಕ್ರಿಕೆಟ್ಎಸ್‌ವಿಟಿ ಟ್ರೋಫಿ–2026: ಜಿಎಸ್‌ಬಿ ವಾಲಂಟಿಯರ್ಸ್ ಪ್ರೀಮಿಯರ್ ಲೀಗ್‌ಗೆ ಭರ್ಜರಿ ಸಿದ್ಧತೆ

ಎಸ್‌ವಿಟಿ ಟ್ರೋಫಿ–2026: ಜಿಎಸ್‌ಬಿ ವಾಲಂಟಿಯರ್ಸ್ ಪ್ರೀಮಿಯರ್ ಲೀಗ್‌ಗೆ ಭರ್ಜರಿ ಸಿದ್ಧತೆ

-

- Advertisment -spot_img

ಎಸ್‌ವಿಟಿ ಟ್ರೋಫಿ–2026: ಜಿಎಸ್‌ಬಿ ವಾಲಂಟಿಯರ್ಸ್ ಪ್ರೀಮಿಯರ್ ಲೀಗ್‌ಗೆ ಭರ್ಜರಿ ಸಿದ್ಧತೆ

ಮಂಗಳೂರು: ಕಾರ್‌ಸ್ಟ್ರೀಟ್ ಮಂಗಳೂರು ಮೂಲದ ಎಸ್‌ವಿಟಿ ವಾಲಂಟಿಯರ್ಸ್ ಅಸೋಸಿಯೇಷನ್ ವತಿಯಿಂದ ಪ್ರತಿಷ್ಠಿತ ಎಸ್‌ವಿಟಿ ಟ್ರೋಫಿ–2026 (GSB Volunteers’ Premier League – Season 4) ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಈ ಪಂದ್ಯಾವಳಿ 2026ರ ಜನವರಿ 1, 2 ಹಾಗೂ 3ರಂದು ಡೊಂಗರ್‌ಕೇರಿಯಲ್ಲಿರುವ ಕೆನರಾ ಹೈಸ್ಕೂಲ್ ಸಿಬಿಎಸ್‌ಇ ಮೈದಾನದಲ್ಲಿ ನಡೆಯಲಿದೆ.

ಪಂದ್ಯಾವಳಿ ಫ್ಲಡ್ ಲೈಟ್ ವ್ಯವಸ್ಥೆಯೊಂದಿಗೆಆಕ್ಷನ್ ಆಧಾರಿತವಾಗಿ ನಡೆಯಲಿದ್ದು, ಸಬ್ ಜೂನಿಯರ್ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಒಟ್ಟು 18 ತಂಡಗಳು ಈ ಲೀಗ್‌ನಲ್ಲಿ ಭಾಗವಹಿಸಲಿದ್ದು, ಪ್ರತಿದಿನ ಸಂಜೆ 3.30 ಗಂಟೆಯಿಂದ ಪಂದ್ಯಗಳು ಆರಂಭವಾಗಲಿವೆ.

ಈ ಪ್ರತಿಷ್ಠಿತ ಟೂರ್ನಮೆಂಟ್‌ಗೆ ಅಭರಣ್ (The Original Abharan – Since 1935) ಶೀರ್ಷಿಕೆ ಪ್ರಾಯೋಜಕರಾಗಿ ಬೆಂಬಲ ನೀಡಿದ್ದು, ಪಂದ್ಯಾವಳಿ ಯಶಸ್ವಿಗೆ ಮಹತ್ವದ ಸಹಕಾರ ನೀಡಿದ್ದಾರೆ.

ಎಸ್‌ವಿಟಿ ಟ್ರೋಫಿ ಈಗಾಗಲೇ ಕ್ರೀಡಾಭಿಮಾನಿಗಳಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದ್ದು, ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗುತ್ತಿದೆ. ಕ್ರೀಡಾಸ್ಫೂರ್ತಿ, ಶಿಸ್ತು ಹಾಗೂ ಸಹೋದರತ್ವವನ್ನು ಬೆಳೆಸುವ ಉದ್ದೇಶದಿಂದ ಈ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಜಿಎಸ್‌ಬಿ ಕ್ರಿಕೆಟ್ ಪ್ರೇಮಿಗಳು, ಕ್ರೀಡಾಭಿಮಾನಿಗಳು ಹಾಗೂ ಸ್ಥಳೀಯ ಜಿಎಸ್‌ಬಿ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿಗೆ ಉತ್ತೇಜನ ನೀಡಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

ten + thirteen =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you