ಕ್ರಿಕೆಟ್ಸೈ ಬಾಯ್ಸ್ ಮಡಿಲಿಗೆ ಕೋಲಾರ ಪ್ರೀಮಿಯರ್‌ ಲೀಗ್ ಪ್ರಶಸ್ತಿ.

ಸೈ ಬಾಯ್ಸ್ ಮಡಿಲಿಗೆ ಕೋಲಾರ ಪ್ರೀಮಿಯರ್‌ ಲೀಗ್ ಪ್ರಶಸ್ತಿ.

-

- Advertisment -spot_img

ಕೋಲಾರ ಅಟ್ಯಾಕರ್ಸ್ ತಂಡದ ವತಿಯಿಂದ ಕಳೆದ ವಾರ ಕೋಲಾರದ ಸರ್.ಎಮ್‌‌.ವಿಶ್ವೇಶ್ವರಯ್ಯ ಸ್ಟೇಡಿಯಂ ನಲ್ಲಿ ನಡೆದ ಹಗಲಿನ 3 ದಿನಗಳ ಎರಡನೇ ಆವೃತ್ತಿಯ “ಕೋಲಾರ ಪ್ರೀಮಿಯರ್‌ ಲೀಗ್-2020” ಪ್ರಶಸ್ತಿಯನ್ನು ಸೈ ಬಾಯ್ಸ್ ಜಯಿಸಿದೆ.

ಕೋಲಾರ ಪರಿಸರದ 16 ಫ್ರಾಂಚೈಸಿಗಳು ಭಾಗವಹಿಸಿದ್ದ ಈ ಪಂದ್ಯಾವಳಿಯ ಲೀಗ್ ಹಂತದ ಹೋರಾಟದ ಬಳಿಕ,
ಸೆಮಿಫೈನಲ್ ನಲ್ಲಿ ಸೈ ಬಾಯ್ಸ್ ವಿಲಾಶ್ ಕ್ರಿಕೆಟರ್ಸ್ ನ್ನು ಹಾಗೂ ಜೆ.ಬಿ.ಅವೆಂಜರ್ಸ್ ಫ್ರೆಂಡ್ಸ್ ಇಲೆವೆನ್ ತಂಡವನ್ನು ಸೋಲಿಸಿ‌ ಫೈನಲ್ ಗೆ ಭಡ್ತಿ ಪಡೆದಿತ್ತು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಜೆ‌.ಬಿ.ಅವೆಂಜರ್ಸ್ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿತ್ತು.ಚೇಸಿಂಗ್ ನಡೆಸಿದ ಸೈ ಬಾಯ್ಸ್ ನ ಅರುಣ್ 26,ಶಂಕರ್ 11 ರನ್ ನೆರವಿನಿಂದ ಕೊನೆಯ ಓವರ್ ನಲ್ಲಿ ಗೆಲುವು ಸಾಧಿಸಿತು.

ಪ್ರಥಮ ಪ್ರಶಸ್ತಿ ವಿಜೇತ ಸೈ ಬಾಯ್ಸ್
1 ಲಕ್ಷ ನಗದು,ರನ್ನರ್ಸ್ ಜೆ.ಬಿ.ಅವೆಂಜರ್ಸ್ 50 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.

ಸೈ ಬಾಯ್ಸ್ ನ ಅರುಣ್ ಕುಮಾರ್ ಫೈನಲ್ ನ ಪಂದ್ಯಶ್ರೇಷ್ಟ,
ಹರಿ‌ ಸರಣಿ ಶ್ರೇಷ್ಟ,ಶ್ರೀನಾಥ್ ಜಾನಿ ಬೆಸ್ಟ್ ಬ್ಯಾಟ್ಸ್‌ಮನ್, ಶಿವು ಜಾನ್ ಬೆಸ್ಟ್ ಫೀಲ್ಡರ್, ವಿನೋದ್ ಬೆಸ್ಟ್ ಬೌಲರ್,ಪಂದ್ಯಾವಳಿಯ ಶಿಸ್ತಿನ ತಂಡ ಪ್ರಶಸ್ತಿಯನ್ನು ವಿಲಾಸ್ ಕ್ರಿಕೆಟರ್ಸ್ ಪಡೆಯಿತು.

ಸಮಾರೋಪ ಸಮಾರೋಪ ಸಮಾರಂಭದಲ್ಲಿ ಜೆ.ಡಿ.ಎಸ್ ನ ಯುವ ಮುಖಂಡ ಸಮೃದ್ಧಿ ಮಂಜುನಾಥ್ ಮಾತನಾಡಿ
“ಕ್ರೀಡಾ ಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕೆಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭ ಅಟ್ಯಾಕರ್ಸ್ ತಂಡದ ನಾಯಕ ಎಲ್.ನಿರಂಜನ್,M.K.S ಗ್ರೂಪ್ ನ ಮಾಲೀಕ ನದೀಮ್ ಅಖ್ತರ್,SAS ಶಾಮೀರ್,
ನಂದೀಶ್,ಮುದುವಾಡಿ ವೇಣು,ಶಿವಕುಮಾರ್,ಜಗನ್ನಾಥ್,ಸಾಗರ್,ಸೂರತ್,ಕಿರಣ್,ಬಾಲನ್,ಅಕಾಲೆ ಮೋನಿಕ್ ದೊರೆ,ಹರಿ,ತಮಟೆ ರಾಮಣ್ಣ ಇನ್ನಿತರ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕೆ.ಪಿ.ಎಲ್ ನ ಆಕ್ಷನ್ ಪ್ರಕ್ರಿಯೆಯನ್ನು ಹಿರಿಯ ವೀಕ್ಷಕ ವಿವರಣೆಕಾರ ಕೋಟ ಶಿವನಾರಾಯಣ ಐತಾಳ್
ಕಳೆದ ತಿಂಗಳು ನಡೆಸಿದ್ದು,
M.Sports ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಿದರೆ,ಪ್ರಸಿದ್ಧ ವೀಕ್ಷಕ ವಿವರಣೆಕಾರ ಪ್ರಶಾಂತ್ ಅಂಬಲಪಾಡಿ ಹಾಗೂ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ಪಂದ್ಯಾವಳಿಯ ಮೆರುಗನ್ನು ಹೆಚ್ಚಿಸಿದರು.
ಆರ್.ಕೆ‌.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen − eight =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you