ಕ್ರಿಕೆಟ್ಸೈ ಬಾಯ್ಸ್ ಮಡಿಲಿಗೆ ಕೋಲಾರ ಪ್ರೀಮಿಯರ್‌ ಲೀಗ್ ಪ್ರಶಸ್ತಿ.

ಸೈ ಬಾಯ್ಸ್ ಮಡಿಲಿಗೆ ಕೋಲಾರ ಪ್ರೀಮಿಯರ್‌ ಲೀಗ್ ಪ್ರಶಸ್ತಿ.

-

- Advertisment -spot_img

ಕೋಲಾರ ಅಟ್ಯಾಕರ್ಸ್ ತಂಡದ ವತಿಯಿಂದ ಕಳೆದ ವಾರ ಕೋಲಾರದ ಸರ್.ಎಮ್‌‌.ವಿಶ್ವೇಶ್ವರಯ್ಯ ಸ್ಟೇಡಿಯಂ ನಲ್ಲಿ ನಡೆದ ಹಗಲಿನ 3 ದಿನಗಳ ಎರಡನೇ ಆವೃತ್ತಿಯ “ಕೋಲಾರ ಪ್ರೀಮಿಯರ್‌ ಲೀಗ್-2020” ಪ್ರಶಸ್ತಿಯನ್ನು ಸೈ ಬಾಯ್ಸ್ ಜಯಿಸಿದೆ.

ಕೋಲಾರ ಪರಿಸರದ 16 ಫ್ರಾಂಚೈಸಿಗಳು ಭಾಗವಹಿಸಿದ್ದ ಈ ಪಂದ್ಯಾವಳಿಯ ಲೀಗ್ ಹಂತದ ಹೋರಾಟದ ಬಳಿಕ,
ಸೆಮಿಫೈನಲ್ ನಲ್ಲಿ ಸೈ ಬಾಯ್ಸ್ ವಿಲಾಶ್ ಕ್ರಿಕೆಟರ್ಸ್ ನ್ನು ಹಾಗೂ ಜೆ.ಬಿ.ಅವೆಂಜರ್ಸ್ ಫ್ರೆಂಡ್ಸ್ ಇಲೆವೆನ್ ತಂಡವನ್ನು ಸೋಲಿಸಿ‌ ಫೈನಲ್ ಗೆ ಭಡ್ತಿ ಪಡೆದಿತ್ತು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಜೆ‌.ಬಿ.ಅವೆಂಜರ್ಸ್ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿತ್ತು.ಚೇಸಿಂಗ್ ನಡೆಸಿದ ಸೈ ಬಾಯ್ಸ್ ನ ಅರುಣ್ 26,ಶಂಕರ್ 11 ರನ್ ನೆರವಿನಿಂದ ಕೊನೆಯ ಓವರ್ ನಲ್ಲಿ ಗೆಲುವು ಸಾಧಿಸಿತು.

ಪ್ರಥಮ ಪ್ರಶಸ್ತಿ ವಿಜೇತ ಸೈ ಬಾಯ್ಸ್
1 ಲಕ್ಷ ನಗದು,ರನ್ನರ್ಸ್ ಜೆ.ಬಿ.ಅವೆಂಜರ್ಸ್ 50 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.

ಸೈ ಬಾಯ್ಸ್ ನ ಅರುಣ್ ಕುಮಾರ್ ಫೈನಲ್ ನ ಪಂದ್ಯಶ್ರೇಷ್ಟ,
ಹರಿ‌ ಸರಣಿ ಶ್ರೇಷ್ಟ,ಶ್ರೀನಾಥ್ ಜಾನಿ ಬೆಸ್ಟ್ ಬ್ಯಾಟ್ಸ್‌ಮನ್, ಶಿವು ಜಾನ್ ಬೆಸ್ಟ್ ಫೀಲ್ಡರ್, ವಿನೋದ್ ಬೆಸ್ಟ್ ಬೌಲರ್,ಪಂದ್ಯಾವಳಿಯ ಶಿಸ್ತಿನ ತಂಡ ಪ್ರಶಸ್ತಿಯನ್ನು ವಿಲಾಸ್ ಕ್ರಿಕೆಟರ್ಸ್ ಪಡೆಯಿತು.

ಸಮಾರೋಪ ಸಮಾರೋಪ ಸಮಾರಂಭದಲ್ಲಿ ಜೆ.ಡಿ.ಎಸ್ ನ ಯುವ ಮುಖಂಡ ಸಮೃದ್ಧಿ ಮಂಜುನಾಥ್ ಮಾತನಾಡಿ
“ಕ್ರೀಡಾ ಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕೆಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭ ಅಟ್ಯಾಕರ್ಸ್ ತಂಡದ ನಾಯಕ ಎಲ್.ನಿರಂಜನ್,M.K.S ಗ್ರೂಪ್ ನ ಮಾಲೀಕ ನದೀಮ್ ಅಖ್ತರ್,SAS ಶಾಮೀರ್,
ನಂದೀಶ್,ಮುದುವಾಡಿ ವೇಣು,ಶಿವಕುಮಾರ್,ಜಗನ್ನಾಥ್,ಸಾಗರ್,ಸೂರತ್,ಕಿರಣ್,ಬಾಲನ್,ಅಕಾಲೆ ಮೋನಿಕ್ ದೊರೆ,ಹರಿ,ತಮಟೆ ರಾಮಣ್ಣ ಇನ್ನಿತರ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕೆ.ಪಿ.ಎಲ್ ನ ಆಕ್ಷನ್ ಪ್ರಕ್ರಿಯೆಯನ್ನು ಹಿರಿಯ ವೀಕ್ಷಕ ವಿವರಣೆಕಾರ ಕೋಟ ಶಿವನಾರಾಯಣ ಐತಾಳ್
ಕಳೆದ ತಿಂಗಳು ನಡೆಸಿದ್ದು,
M.Sports ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಿದರೆ,ಪ್ರಸಿದ್ಧ ವೀಕ್ಷಕ ವಿವರಣೆಕಾರ ಪ್ರಶಾಂತ್ ಅಂಬಲಪಾಡಿ ಹಾಗೂ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ಪಂದ್ಯಾವಳಿಯ ಮೆರುಗನ್ನು ಹೆಚ್ಚಿಸಿದರು.
ಆರ್.ಕೆ‌.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 × three =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you