6.1 C
London
Wednesday, April 17, 2024
Homeಕ್ರಿಕೆಟ್ಟಿ.ಎಂ.ಎ ಪೈ ಟ್ರೋಫಿ-2020

ಟಿ.ಎಂ.ಎ ಪೈ ಟ್ರೋಫಿ-2020

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img

 

ಶ್ರೀದೇವಿ ಕ್ರಿಕೆಟ್ ಕ್ಲಬ್ ಗುಡ್ಡೆಯಂಗಡಿ, ಹಿರಿಯಡಕ*
ಇವರ ಆಶ್ರಯದಲ್ಲಿ ಮಣಿಪಾಲ ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿ ಅನಾರೋಗ್ಯದಲ್ಲಿರುವ ಕಿರಣ್ ಆಚಾರ್ಯ ಸಹಾಯಾರ್ಥವಾಗಿ ನಡೆಸಿದ ಅಂತರ್ಕಾಲೇಜು ಹಾಗೂ 21ರ ವಯೋಮಿತಿಯ ಕ್ರಿಕೆಟ್ ಪಂದ್ಯಾಕೂಟ 🏆 ಟಿ.ಎಂ.ಎ. ಪೈ ಟ್ರೋಫಿ – 2020 🏆 ಮಣಿಪಾಲದ ಕ್ರೀಡಾಂಗಣದಲ್ಲಿ ದಿನಾಂಕ 26-01-2020 ರಂದು ಯಶಸ್ವಿಯಾಗಿ ನಡೆಯಿತು..

ಫೈನಲ್ ಪಂದ್ಯದಲ್ಲಿ ಬಾಯ್ಸ್ ಚಿಟ್ಪಾಡಿ ಯ ತಂಡ ಎಂ.ಐ.ಟಿ. ಕುಂದಾಪುರ ವನ್ನು ಸೋಲಿಸುವುದರ ಮೂಲಕವಾಗಿ ಪ್ರಶಸ್ತಿಯನ್ನು ಪಡೆದುಕೊಂಡಿತು..


ಅತ್ಯಂತ ಆಕರ್ಷಕವಾದ, ಅತೀ ಎತ್ತರದ ಟ್ರೋಫಿಗಳನ್ನು ಪಂದ್ಯಾಕೂಟದಲ್ಲಿ ನೀಡಿ ಗೌರವಿಸಲಾಯಿತು..
ಬಾಯ್ಸ್ ಚಿಟ್ಪಾಡಿ ತಂಡದ ಸುನಿಲ್ ಬಾಬು ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿ ಪಡೆದರು.
ಅದೇ ತಂಡದ ವಿನೋದ್ ಬೆಸ್ಟ್ ಬೌಲರ್ ಪ್ರಶಸ್ತಿ ಪಡೆದರು. ಎಂ.ಐ.ಟಿ. ಕುಂದಾಪುರದ ಶಶಿ ಉತ್ತಮ ದಾಂಡಿಗ ಪ್ರಶಸ್ತಿ ಪಡೆದರು.

ಸಾಯಿ ಕ್ರಿಕೆಟರ್ಸ್ ಕಾರ್ಕಳ ಶಿಸ್ತಿನ ತಂಡ ಪ್ರಶಸ್ತಿ ಪಡೆಯಿತು

 

ಸಮಾರೋಪ ಸಮಾರಂಭದಲ್ಲಿ ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲ ಪ್ರಶಾಂತ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಅದೇ ಕಾಲೇಜಿನ ಆಟೋಮೊಬೈಲ್ ವಿಭಾಗದ ಮುಖ್ಯಸ್ಥ ರವೀಂದ್ರ ಶೆಣೈ, ಕಾಲೇಜಿನ ಗೌರವ ಉಪನ್ಯಾಸಕರಾದ ಕುಮಾರಸ್ವಾಮಿ , ಪಂದ್ಯಾವಳಿಯ ಪ್ರಮುಖ ದಾನಿಗಳಾದ ಸೌರಭ್ ಬಲ್ಲಾಳ್ , ಸಿರಾಜ್ ಶೇಖ್, ಪರೀಕ್ಷಿತ್ ಅಲೆವೂರು, ಸಿದ್ಧಾಂತ್ ಕದ್ರಿ, ಸುಶ್ಮಿತ್ ಪೂಂಜ ಭಾಗವಹಿಸಿದ್ದರು.

ಪಂದ್ಯದ ತೀರ್ಪುಗಾರರಾಗಿ ವಿಶ್ವನಾಥ್ ನಾಯಕ್ ಪೆಲತ್ತೂರು, ಸಂಪತ್ ಕಣಂಜಾರು, ಸ್ವಸ್ತಿಕ್ ಹಿರಿಯಡಕ, ಪ್ರಜೇಶ್ ಪೆರ್ಡೂರು ಸಹಕರಿಸಿದರು.

ವೀಕ್ಷಕ ವಿವರಣೆಗಾರರಾಗಿ ಪ್ರಕಾಶ್ ಗುಡ್ಡೆಯಂಗಡಿ, ಪ್ರತುಲ್ ಹಿರಿಯಡಕ ಸಹಕರಿಸಿದರು..

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

two × 3 =