ಕ್ರಿಕೆಟ್ಶೀಘ್ರದಲ್ಲೇ ಶಿವಮೊಗ್ಗದಲ್ಲಿ ದುರ್ಗಿಗುಡಿ ಸಂಸ್ಥೆಯ ಅತಿ ದೊಡ್ಡ T20 ಕ್ರಿಕೆಟ್...

ಶೀಘ್ರದಲ್ಲೇ ಶಿವಮೊಗ್ಗದಲ್ಲಿ ದುರ್ಗಿಗುಡಿ ಸಂಸ್ಥೆಯ ಅತಿ ದೊಡ್ಡ T20 ಕ್ರಿಕೆಟ್ ಕಾರ್ನಿವಲ್

-

- Advertisment -spot_img
ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಅಮೃತ ಮಹೋತ್ಸವ ಸಂಭ್ರಮದ ಸಲುವಾಗಿ “DCA PLATINUM JUBILEE T-20 ಕ್ರಿಕೆಟ್ ಟೂರ್ನಮೆಂಟ್’’ ಜನವರಿ 2023ರ ದಿನಾಂಕ 13, 14,15ರಂದು ಶಿವಮೊಗ್ಗದ ಮೂರು ಕ್ರೀಡಾಂಗಣಗಳಲ್ಲಿ ಸತತ ಮೂರು ದಿನಗಳ ಕಾಲ ನಡೆಯಲಿದೆ.
ದುರ್ಗಿ ಗುಡಿ ಕ್ರಿಕೆಟ್ ಅಸೋಸಿಯೇಷನ್ 1945ರಲ್ಲಿ ಸ್ಥಾಪಿತವಾಗಿದ್ದು, ಕ್ರಿಕೆಟ್‌ನ ಅವಧಿಯನ್ನು ನೋಡಿದರೆ, DCA ಶಿವಮೊಗ್ಗ ಉತ್ತಮ ಮೈಲಿಗಲ್ಲುಗಳನ್ನು ಸಾಧಿಸಿದೆ, ಇದು ನಿಜವಾಗಿಯೂ ಅದ್ಭುತ ಮತ್ತು ಶ್ಲಾಘನೀಯ, ಸಂಸ್ಥೆಯು ಸ್ಥಾಪನೆಯದಾಗಿನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ನಿರಂತರ ನಡೆಸುತ್ತ ಬಂದಿದೆ. ಇದೀಗ 75 ವರ್ಷ ಪೂರೈಸಿದ ಶಿವಮೊಗ್ಗದ ಈ ಹಿರಿಯ ಸಂಸ್ಥೆ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲು ಸಜ್ಜಾಗಿದೆ.
ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರಿನ 12 ಕ್ಲಬ್ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು,
ಈ ಲೀಗ್ ಕಮ್ ನಾಕೌಟ್ T20 ಪಂದ್ಯಾವಳಿಯನ್ನು ಗೆಲ್ಲುವ ತಂಡ  ಆಕರ್ಷಕ ಟ್ರೋಫಿಯೊಂದಿಗೆ 50,000 ರೂಪಾಯಿಗಳ ನಗದು ಬಹುಮಾನವನ್ನು ಗೆಲ್ಲಲಿದ್ಧಾರೆ. ದ್ವಿತೀಯ ಸ್ಥಾನದ ತಂಡವು ರನ್ನರ್ ಅಪ್ ಟ್ರೋಫಿಯೊಂದಿಗೆ 25,000 ರೂಪಾಯಿಗಳನ್ನು ಪಡೆಯಲಿದೆ. ಇವು ಮಾತ್ರವಲ್ಲದೆ  ಮೂರನೆಯ ಮತ್ತು ನಾಲ್ಕನೆಯ ಸ್ಥಾನಕ್ಕೆ ಟ್ರೋಫಿಗಳು ಇರುತ್ತವೆ. ಅದೇ ರೀತಿ ಅತ್ಯುತ್ತಮ ಬ್ಯಾಟ್ಸ್‌ಮನ್, ಅತ್ಯುತ್ತಮ ಬೌಲರ್, ಅತ್ಯುತ್ತಮ ಆಲ್ ರೌಂಡರ್, ಸರಣಿಯ ಪುರುಷ ಮತ್ತು ಪಂದ್ಯಶ್ರೇಷ್ಠ ಮುಂತಾದ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತದೆ.
ಎಲ್ಲಾ ತಂಡದ ಆಟಗಾರರಿಗೆ  ಜೆರ್ಸಿಯನ್ನು ನೀಡಲಾಗುವುದು. KSCA ಮ್ಯಾಚ್ ಆಫೀಶಿಯಲ್ಸ್ ಪಂದ್ಯಾವಳಿಯ ತೀರ್ಪುಗಾರರಾಗಿ  ಹಾಗೂ  ಸ್ಕೋರರ್ ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಸುರೇಶ ಭಟ್ ಮುಲ್ಕಿ, ರಾಘವೇಂದ್ರ ಸಾಗರ್ ಹಾಗೂ ಇನ್ನಿತರರು ಕಾಮೆಂಟ್ರಿಯಲ್ಲಿ ಭಾಗವಹಿಸಲಿದ್ದು ಪಂದ್ಯಗಳ ನೇರ ಪ್ರಸಾರವು ಯೂ ಟ್ಯೂಬ್‌ನಲ್ಲಿ ನೀಡುವ ಯೋಜನೆಗಳು ಕೂಡ ಇವೆ ಎಂದು ಸಂಘಟಕರ ಪರವಾಗಿ  ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಐಡಿಯಲ್ ಗೋಪಿ ಇವರು ಸ್ಪೋರ್ಟ್ಸ್ ಕನ್ನಡಕ್ಕೆ ತಿಳಿಸಿದ್ಧಾರೆ.
ಅಮೃತ ಮಹೋತ್ಸವ ಆಚರಿಸುವ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಗೆ ಸ್ಪೋರ್ಟ್ಸ್ ಕನ್ನಡ  ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಈ ಪಂದ್ಯಾವಳಿಯು ಬಹಳಷ್ಟು ಯಶಸ್ವಿಯಾಗಿ, ಅದ್ದೂರಿಯಾಗಿ ಜರುಗಲಿಯೆಂದು ಶುಭಾಶಯಗಳನ್ನು ನೀಡುತ್ತಿದೆ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

thirteen + 6 =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you