ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಟಿ‌.ಎ.ಪೈ ಪ್ರೌಢಶಾಲೆ ಮಡಿಲಿಗೆ ಟಿ‌‌.ಸಿ.ಎ ಹೈಸ್ಕೂಲ್ ವಿಭಾಗದ ಪ್ರಶಸ್ತಿ

ಟಿ‌.ಎ.ಪೈ ಪ್ರೌಢಶಾಲೆ ಮಡಿಲಿಗೆ ಟಿ‌‌.ಸಿ.ಎ ಹೈಸ್ಕೂಲ್ ವಿಭಾಗದ ಪ್ರಶಸ್ತಿ

-

- Advertisment -spot_img
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಹೈಸ್ಕೂಲ್ ವಿಭಾಗದ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿಯ ಟಿ.ಎ.ಪೈ‌.ಇ.ಎಮ್.ಹೆಚ್.ಎಸ್ ತಂಡ ಪ್ರಶಸ್ತಿ ಜಯಿಸಿದೆ.
ಹೈಸ್ಕೂಲ್ ವಿಭಾಗದಲ್ಲಿ ಒಟ್ಟು ಎಂಟು ತಂಡಗಳ ನಡುವೆ ಲೀಗ್ ಹಂತದಲ್ಲಿ ರೋಚಕ ಹಣಾಹಣಿ ಸಾಗಿತ್ತು.ಉಪಾಂತ್ಯ ಪಂದ್ಯದಲ್ಲಿ
ಗ್ರೀನ್ ಪಾರ್ಕ್ ಹಿರಿಯಡ್ಕ-ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯನ್ನು ಹಾಗೂ ಟಿ.ಎ.ಪೈ-ಸೈಲಸ್ ಉಡುಪಿ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.
*ವೈದಿಕ್ ಶೆಟ್ಟಿ ಸಮಯೋಚಿತ ಆಟ-ಟಿ.ಎ ಪೈ ತಂಡ ಚಾಂಪಿಯನ್*
ಫೈನಲ್ ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ ಗ್ರೀನ್ ಪಾರ್ಕ್ ಹೈಸ್ಕೂಲ್ ಹಿರಿಯಡ್ಕ
ಪವನ್ 34 ರನ್ ನೆರವಿನಿಂದ ನಿಗದಿತ 10 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 68 ರನ್ ಕಲೆ ಹಾಕಿತ್ತು.
‌ಇದಕ್ಕುತ್ತರವಾಗಿ ಟಿ‌.ಎ ಪೈ ತಂಡ ವೈದಿಕ್ ಶೆಟ್ಟಿ ಅಜೇಯ 35   ಗಳ ಜವಾಬ್ದಾರಿಯುತ ಆಟದ ನೆರವಿನಿಂದ ಕೊನೆಯ ಓವರ್ ನಲ್ಲಿ ಜಯ ಸಾಧಿಸಿತು.
ಸೈಲಸ್ ಉಡುಪಿ ಮತ್ತು ಗುರುಕುಲ ವಕ್ವಾಡಿ ತಂಡ ಮೂರನೇ ಸ್ಥಾನ ಪಡೆದುಕೊಂಡರು.
ಫೈನಲ್ ನ ಪಂದ್ಯಶ್ರೇಷ್ಟ ಮತ್ತು ಬೆಸ್ಟ್ ಬ್ಯಾಟರ್ ಪ್ರಶಸ್ತಿ ವೈದಿಕ್ ಶೆಟ್ಟಿ, ಗ್ರೀನ್ ಪಾರ್ಕ್ ನ ಮಾಝಿನ್ ಬೆಸ್ಟ್ ಬೌಲರ್ ಹಾಗೂ ಪವನ್ ಗ್ರೀನ್ ಪಾರ್ಕ್ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.
ಬಹುಮಾನ ವಿತರಣಾ ಸಮಾರಂಭದಲ್ಲಿ ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ, ರಮೇಶ್  ಶೆಟ್ಟಿ, ಮನೋಜ್ ನಾಯರ್,ಕೆ.ಪಿ ಸತೀಶ್,ನಾರಾಯಣ ಶೆಟ್ಟಿ, ರಾಘವೇಂದ್ರ ಚರಣ್ ನಾವಡ,ನಾರಾಯಣ ಶೆಟ್ಟಿ ಮಾರ್ಕೋಡು,ಭಾಸ್ಕರ ಆಚಾರ್,ನಾಗೇಶ್ ನಾವಡ,
ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,ಶಿವನಾರಾಯಣ ಐತಾಳ್ ಕೋಟ,ಟಿ‌.ಸಿ.ಎ ಪದಾಧಿಕಾರಿಗಳು,ಸದಸ್ಯರು ಮತ್ತು ಪಂದ್ಯಾಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಪೋರ್ಟ್ಸ್ ಕನ್ನಡ ಟಿ.ವಿ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಂಡಿತು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × two =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you