Categories
ಇತರೆ ಭರವಸೆಯ ಬೆಳಕು ಯಶೋಗಾಥೆ ರಾಜ್ಯ

ಕರಾವಳಿ ಕನ್ನಡಿಗ ಕೋಟ ರಾಮಕೃಷ್ಣ ಆಚಾರ್ಯರಿಗೆ ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಟೆನ್ನಿಸ್ ಬಾಲ್ ಕ್ರಿಕೆಟ್ ಗೆ ಆಟಗಾರರ ಮಧ್ಯೆ ಒಂದು ಸಂಕೋಲೆಯನ್ನು  ಸೃಷ್ಟಿಸಿದ ಕರ್ನಾಟಕದ ಮೊತ್ತ ಮೊದಲ ಕ್ರೀಡಾ ವೆಬ್ ಸೈಟ್ ಎಂಬ ಕೀರ್ತಿಗೆ ಪಾತ್ರವಾಗಿದೆ
ಈ sportskannada.com . ಕೋಟ ರಾಮಕೃಷ್ಣ ಆಚಾರ್ ರವರು ಸತತ 10 ವರ್ಷಗಳ ಅಧ್ಯಯನ ಮತ್ತು ಅವಿರತ ಶ್ರಮದಿಂದ ಕರ್ನಾಟಕದಲ್ಲಿರುವ 1970 ರಿಂದ 2020 ರ ಕಾಲಘಟ್ಟದ ಹಿರಿಯ ಹಾಗೂ ಕಿರಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರರನ್ನು ಅವರಿದ್ದಲ್ಲೇ ಹೋಗಿ ಸಂದರ್ಶಿಸಿ ಅವರ ಬಗೆಗಿನ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಹಿರಿಯ ಆಟಗಾರರ ಅನುಭವಗಳನ್ನು ನಮ್ಮ ಭವಿಷ್ಯದ ಪೀಳಿಗೆಗಳಿಗೆ ಹಂಚಿ ಟೆನ್ನಿಸ್ ಬಾಲ್ ಕ್ರಿಕೆಟ್ ಎಂಬ ಹಳೆಯ ಬೇರು ಹೊಸ ಚಿಗುರೊಡೆಯುದಕ್ಕೊಸ್ಕರ ನೀರೆರೆಯುವ ಪ್ರಯತ್ನವನ್ನ ಮಾಡಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಹಿರಿಯ ಮತ್ತು ಕಿರಿಯ ಆಟಗಾರರನ್ನು “ರಾಜ್ಯ ಟೆನ್ನಿಸ್ ಕ್ರಿಕೆಟ್” ಎಂಬ ಗ್ರೂಪ್ ಮೂಲಕ ಒಗ್ಗೂಡಿಸುವ ಸಫಲ ಪ್ರಯತ್ನವನ್ನು ಮಾಡಿರುವ ಆರ್.ಕೆ sportskannada.com ವೆಬ್ಸೈಟ್ ಗಾಗಿ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದಾರೆ. ವೆಬ್ಸೈಟ್ ಲಾಂಚಿಂಗ್  ಕಾರ್ಯಕ್ರಮದ ಯಶಸ್ಸಿಗೆ  ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳು ಸ್ವಯಂ ಪ್ರೇರಿತರಾಗಿ ಸಹಾಯವನ್ನು ಮಾಡಿರುವರು ಎನ್ನುವುದಕ್ಕೆ ಸಂತಸ ಪಡಬೇಕು ಹಾಗೂ ಯಾವುದೇ ಸಹಾಯಕ್ಕಾಗಿ ಆರ್.ಕೆ ಯವರು ಎಂದಿಗೂ ಕೈ ಚಾಚಿಲ್ಲ ಎಂಬುವುದು ನಾವು ಗಮನಿಸಬೇಕಾದ ಮುಖ್ಯ ವಿಷಯ.
ಕೇವಲ ಮೂರು ವರ್ಷದಲ್ಲೇ ಊಹಿಸಲಸಾಧ್ಯವಾಗುವಷ್ಟು ಸಾಧನೆಗಳನ್ನು ಮಾಡಿದ್ದಾರೆ. ಸುಮಾರು 2000ಕ್ಕಿಂತಲೂ ಹೆಚ್ಚು ಕ್ರೀಡಾಪಟುಗಳನ್ನು ಸಂದರ್ಶನ ನಡೆಸಿ ಅವರ ಬಗೆಗೆನ ಲೇಖನ, ಮಾಹಿತಿಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಗೊಳಿಸಿದ್ದಾರೆ.  ಅಸಂಖ್ಯಾತ ಅಭಿಮಾನಿ ಓದುಗರನ್ನು ಹೊಂದಿದ್ದು ಇದರಲ್ಲಿ ಬರುವ ಕ್ರೀಡಾ ಸುದ್ಧಿಗಳು, ವಿಶೇಷ ವರದಿಗಳು, ಉತ್ತಮ ಅಂಕಣಗಳಿಗೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿನಿತ್ಯ ಈ ವೆಬ್ ಸೈಟ್ನಲ್ಲಿ ಬರುವ ಹೊಸ ವಿಷಯಗಳಿಗಾಗಿ ಕಾದು ಕುಳಿತುಕೊಳ್ಳುವ ಒಂದಷ್ಟು ಜನ ಸಮೂಹವೇ ಇದೆ ಎಂದರೆ ತಪ್ಪಾಗದು.
ಇತ್ತೀಚೆಗೆ ರಾಯಚೂರು ಜಿಲ್ಲೆಯಲ್ಲಿ ಕಲಾ ಸಂಕುಲ ಸಂಸ್ಥೆ (ರಿ) ರಾಯಚೂರು ಇವರ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಆರ್ ಕೆ.ಯವರ ಮೇಲಿನ ಅಭಿಮಾನ ಇನ್ನಷ್ಟು ಇಮ್ಮಡಿಯಾಗಿದೆ. ಇದೇ ಬರುವ 28-11-2020ರಂದು ರಾಯಚೂರುನಲ್ಲಿ ನಡೆಯಲಿರುವ ಈ ಕಲ್ಯಾಣ ಕರ್ನಾಟಕ ಉತ್ಸವ್ದಲ್ಲಿ ವಿವಿಧ ಸಾಹಿತಿಗಳು,ಸಂಸದರು, ಶಾಸಕರು ಉಪಸ್ಥಿತರಿರುವ ವೇಧಿಕೆಯಲ್ಲಿ ಕ್ರೀಡ ಕ್ಷೇತ್ರಕ್ಕೆ ವಿಶಿಷ್ಟ ಸಾಧನೆಗೈದ ಸಾಮಾನ್ಯ ಯುವಕನೊಬ್ಬನು ಸನ್ಮಾನಿಸಲ್ಪಡುತ್ತಿರುವುದು ನಿಜಕ್ಕೂ ಸಂತಸದ ವಿಷಯ. ಇಷ್ಟೊಂದು ಸಾಧಿಸಿದರೂ, ಕಳೆದ 2 ವರ್ಷಗಳಲ್ಲಿ ಪ್ರಶಸ್ತಿಗಳ ಸಾಲೇ ಹರಿದು ಬಂದರೂ ಕ್ರೀಡಾಲೋಕದ ಮೇಲಿರುವ ಆರ್.ಕೆ ಯ ಕನಸು ಬೆಟ್ಟದಷ್ಟಿದೆ. ಇದು ಕೇವಲ ಆರಂಭ,ತಲುಪಬೇಕಾದ ಹಾದಿ ಬಲುದೂರವಿದೆ.
ಯಾವುದೇ ಸರಕಾರದ ಅಕಾಡೆಮಿಗಳ ನೆರವುಗಳಿಲ್ಲದೆ ತನ್ನ ಸ್ವಂತ ಪ್ರಯತ್ನದಲ್ಲಿ ಕ್ರೀಡಾರಂಗಕ್ಕೋಸ್ಕರ, ಕ್ರೀಡಾಪಟುಗಳಿಗೋಸ್ಕರ, ಹಿರಿಯ ನಿವೃತ್ತ ಆಟಗಾರರಿಗೊಸ್ಕರ, ಮುಂದಿನ ಯುವ ಪೀಳಿಗೆಗೊಸ್ಕರ ದುಡಿಯುತ್ತಿರುವ ನಮ್ಮ ಆರ್.ಕೆ ಗೆ ನಮ್ಮೆಲ್ಲರ ಪ್ರೊತ್ಸಾಹದ ಅಗತ್ಯವಿದೆ. ಆಶೀರ್ವಾದದ ಅಗತ್ಯವಿದೆ. ಆರ್ ಕೆ. ಯವರ ಕನಸಿನಂತೆ ನಮ್ಮ ರಾಜ್ಯದಲ್ಲೊಂದು ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಸ್ಥಾಪನೆಗೊಳ್ಳಲಿ.  ಸಮಾಜದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯನಂತೆ ಬದುಕಿ ಅಸಾಮಾನ್ಯ ರೀತಿಯ ಸಾಧನೆಯನ್ನು ಮಾಡಿದ ನಮ್ಮ ಆರ್ ಕೆ ಯವರಿಗೆ ಸರಕಾರದ ವಿವಿಧ ಪ್ರಶಸ್ತಿಗಳು ದೊರಕಲಿ. ಅವರ ಕಾರ್ಯಕ್ಕೆ ಸರಕಾರದ ಬೆಂಬಲ ಸಿಗಲಿ. ಅದರಿಂದ ಅವರ ಈ ಒಂದು ವಿಭಿನ್ನ ಪ್ರಯತ್ನ ಇನ್ನಷ್ಟು ಉತ್ತುಂಘ ಶಿಖರವನ್ನೇರಲಿ. ಆರ್.ಕೆ ಯಂತವರ ಪ್ರಯತ್ನದಿಂದ ನಮ್ಮ ಊರಿನ ಮಕ್ಕಳು ಮುಂದೆ ರಾಷ್ಟ್ರ – ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ. ಆರ್.ಕೆ ಯ ಕನಸು ನನಸಾಗಲಿ ಎಂದು ನಾವೆಲ್ಲ ಹಾರೈಸೋಣ.
ದಿನೇಶ ಆಚಾರ್ಯ ಸಾಲಿಗ್ರಾಮ
Categories
ಕ್ರಿಕೆಟ್

ಜಾಕಿ ಕ್ರಿಕೆಟ್ ಕ್ಲಬ್(ಜೆ.ಸಿ.ಸಿ) ಮುಡಿಗೆ ಶ್ರೀನಿವಾಸಪುರ ಪ್ರೀಮಿಯರ್ ಲೀಗ್-2020 ಕಿರೀಟ

ಮಾವಿನ ಹಣ್ಣಿನ ಬೃಂದಾವನವೆಂದೇ ಖ್ಯಾತಿ ಪಡೆದ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಪ್ರಸಿದ್ಧ ಉದ್ಯಮಿ M.K.S ಗ್ರೂಪ್ ನ ಮಾಲೀಕ ನದೀಮ್ ಅಖ್ತರ್ ಹಾಗೂ S.A.S ಗ್ರೂಪ್ ನ ಮಾಲೀಕ ಶಾಮೀರ್ ಎಸ್.ಎ ಸಾರಥ್ಯದಲ್ಲಿ ನಡೆದ ಶ್ರೀನಿವಾಸಪುರ ಪ್ರೀಮಿಯರ್ ಲೀಗ್ ಸೀಸನ್ 2 ರ ಪ್ರಶಸ್ತಿಯನ್ನು ಕಾರ್ತಿಕ್ ರೆಡ್ಡಿ ಜಾಕಿ ನೇತೃತ್ವದ ಜಾಕಿ ಕ್ರಿಕೆಟ್ ಕ್ಲಬ್ ಜಯಿಸಿದೆ.

ಸತತ ಮೂರು ದಿನಗಳ ಕಾಲ ಹೊನಲು ಬೆಳಕಿನಲ್ಲಿ ಸಾಗಿದ ಅತ್ಯಂತ ಅದ್ಧೂರಿಯ ಪಂದ್ಯಾವಳಿಯಲ್ಲಿ
ಬಲಿಷ್ಠ 8 ಫ್ರಾಂಚೈಸಿಗಳು ಪ್ರಶಸ್ತಿಗಾಗಿ ಸೆಣಸಾಡಿದ್ದು, ಲೀಗ್ ಹಂತದ ಪ್ರಬಲ ಪೈಪೋಟಿಗಳ ಬಳಿಕ ಉಪಾಂತ್ಯ ಪಂದ್ಯಗಳಲ್ಲಿ ನದೀಮ್ ಅಖ್ತರ್ ಮಾಲೀಕತ್ವದ ಸೈ ಬಾಯ್ಸ್ ತಂಡ ಫ್ರೆಂಡ್ಸ್ ಕ್ರಿಕೆಟರ್ಸ್ ನ್ನು ಹಾಗೂ ಜೆ.ಸಿ.ಸಿ ತಂಡ ಶಾಮೀರ್ ಮಾಲೀಕತ್ವದ ರೈಸಿಂಗ್ ಸ್ಟಾರ್ಸ್ ತಂಡವನ್ನು ಸೋಲಿಸಿ ಫೈನಲ್ ಗೆ ನೆಗೆದೇರಿತ್ತು.

ಫೈನಲ್ ನಲ್ಲಿ ಜಾಕಿ‌ ಕ್ರಿಕೆಟ್ ಕ್ಲಬ್ ನ‌ ಸಂಘಟಿತ ಹೋರಾಟದ ಫಲವಾಗಿ‌ ಸೈ ಬಾಯ್ಸ್ ತಂಡಕ್ಕೆ ಸೋಲುಣಿಸಿ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು.

ಪ್ರಥಮ ಪ್ರಶಸ್ತಿ ರೂಪದಲ್ಲಿ ಜೆ.ಸಿ.ಸಿ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ ಸೈ ಬಾಯ್ಸ್ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರೆ,ಟೂರ್ನಿಯ ಬೆಸ್ಟ್ ಬ್ಯಾಟ್ಸ್‌ಮನ್ ಜಾನ್, ಬೆಸ್ಟ್ ಬೌಲರ್ ಮಾರ್ಕ್ ಮಹೇಶ್, ಫೈನಲ್ ನ ಪಂದ್ಯಶ್ರೇಷ್ಟ ಸ್ವಸ್ತಿಕ್ ಹಾಗೂ ಸರಣಿಯುದ್ದಕ್ಕೂ ಶ್ರೇಷ್ಠ ಸವ್ಯಸಾಚಿ ನಿರ್ವಹಣೆ ತೋರಿದ ಸಾಗರ್ ಭಂಡಾರಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಪಂದ್ಯಾವಳಿಗೆ ಕರ್ನಾಟಕ ವಿಧಾನ ಸಭಾ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಚಿತ್ರನಟರಾದ ಅಂಜಾನ್,ಡಾಲಿ ಧನಂಜಯ್,ಕೆ.ಜಿ.ಎಫ್ ಖ್ಯಾತಿಯ ಗರುಡಾ ರಾಮ್,ಇಂಡೋರ್ ನ ಖ್ಯಾತ ಉದ್ಯಮಿ ಹ್ಯಾಪಿ,ಶ್ರೀನಿವಾಸಪುರದ ವೃತ್ತ ನಿರೀಕ್ಷಕರು

ರಾಘವೇಂದ್ರ,ರಾಜಕೀಯ ಧುರೀಣರಾದ ಕೆ.ಕೆ.ಮಂಜು, ಪ್ರಸಿದ್ಧ ಡ್ರಮ್ಮರ್ ದೇವಾ ಪಂದ್ಯಾವಳಿಯ ರಂಗನ್ನು ಹೆಚ್ಚಿಸಿದ್ದರು.

  

ಅತ್ಯಂತ ಯಶಸ್ಸು ಕಂಡ ಶ್ರೀನಿವಾಸಪುರದ ಈ ಪಂದ್ಯಾಕೂಟಕ್ಕಾಗಿ ಐ.ಪಿ.ಎಲ್,ಪ್ರೊ ಕಬಡ್ಡಿ ಕಾಮೆಂಟೇಟರ್ ನವೀನ್ ಶೌರಿ,ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ,ಹಿರಿಯ ಪ್ರಸಿದ್ಧ ಕನ್ನಡ ವೀಕ್ಷಕ ವಿವರಣೆಕಾರ ಕೋಟ ಶಿವನಾರಾಯಣ ಐತಾಳ್,ಹಿಂದಿ ಕಾಮೆಂಟೇಟರ್ ಸ್ಟಾರ್ ನವಾಝ್,ಸೈಯದ್ ಗುರುಕಂಬ್ಳ ಸ್ಪೋರ್ಟ್ಸ್ ಕನ್ನಡ ಸಂಚಾಲಕ ಕೋಟ ರಾಮಕೃಷ್ಣ ಆಚಾರ್ಯ ಭಾಗವಹಿಸಲಿದ್ದರು.

ಸಚಿನ್ ಮಹಾದೇವ್ ಮಾಲೀಕತ್ವದ M.Sports ಯೂ ಟ್ಯೂಬ್ ಚಾನೆಲ್ ನ ಪ್ರಮುಖ ಟೆಕ್ನಿಷಿಯನ್
ಓಂಕಾರ್ ಪಾಟೀಲ್ ಸಾರಥ್ಯದಲ್ಲಿ ನಡೆದ ಪಂದ್ಯಾವಳಿಯ ನೇರ ಪ್ರಸಾರವನ್ನು ಸಹಸ್ರಾರು ಕ್ರೀಡಾಭಿಮಾನಿಗಳು ವೀಕ್ಷಿಸಿದರು.