Categories
ಕ್ರಿಕೆಟ್

BCCI U19 ಕ್ರಿಕೆಟ್ ಸಂಭಾವ್ಯರ ಪಟ್ಟಿಯಲ್ಲಿ ಉಡುಪಿಯ ಯುವತಿ ವೈಷ್ಣವಿ ಆಚಾರ್ಯ ಕಡಿಯಾಳಿ ಆಯ್ಕೆ

2023-24ರ ಸಾಲಿನಲ್ಲಿ ನಡೆಯುವ  19 ವರ್ಷದೊಳಗಿನ ಮಹಿಳಾ ಕ್ರಿಕೆಟ್  ಏಕದಿನ ತಂಡದ ಸಂಭವನೀಯರಲ್ಲಿ ಉಡುಪಿಯ ವೈಷ್ಣವಿ ಆಚಾರ್ಯ ಕಡಿಯಾಳಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 25 ಜನ ಆಟಗಾರರ ಪಟ್ಟಿಯನ್ನು ಇಂದು ಪ್ರಕಟಿಸಿದ್ದು ಉಡುಪಿಯ ವೈಷ್ಣವಿ ಆಚಾರ್ಯ ಕಡಿಯಾಳಿ  ಬೌಲರ್ ಕಂ ಬ್ಯಾಟರ್ ಆಗಿ ಶಿಬಿರದಲ್ಲಿ ಭಾಗವಹಿಸಲು 25 ಸಂಭಾವ್ಯರ ಪೈಕಿ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ ನಿಂದ ಭಾರತದಲ್ಲಿ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಡೆಯಲಿದ್ದು, ಆ ಟೂರ್ನಿಯಲ್ಲಿ ಇವರು ಭಾಗವಹಿಸುವ ವಿಶ್ವಾಸದಲ್ಲಿದ್ದಾರೆ. 2022ರಲ್ಲಿ ಕೆಎಸ್‌ಸಿಎ ಅಂಡರ್-19 ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ವೈಷ್ಣವಿ, 2023-24ರ ಅಂಡರ್-19 ಏಕದಿನ ಸಂಭಾವ್ಯ ತಂಡಕ್ಕೂ ಆಯ್ಕೆಯಾಗಿದ್ದಾರೆ.
ಉಡುಪಿಯವರಾದ ಇವರು ತಮ್ಮ ಪ್ರದೇಶದಲ್ಲಿ ಕ್ರಿಕೆಟ್‌ಗೆ ಪರಿಚಯವಾಗಿ ಆಟದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಆ ಹಂತದಲ್ಲಿ ಆಕೆಗೆ ಕ್ರಿಕೆಟ್ ಅನ್ನು ವೃತ್ತಿಯಾಗಿ ತೆಗೆದುಕೊಳ್ಳುವ ಯಾವುದೇ ಸುಳಿವು ಇರಲಿಲ್ಲ. ಎಲ್ಲಾ ವಿರೋಧಾಭಾಸಗಳನ್ನು ಎದುರಿಸಿ, ಅವರು ತಮ್ಮ ಆಟವನ್ನು ಸುಧಾರಿಸಲು ಬೆಂಗಳೂರಿನ ಜಸ್ಟ್ ಕ್ರಿಕೆಟ್ ಅಕಾಡೆಮಿಗೆ ಸೇರಿಕೊಂಡರು, ಕ್ರಿಕೆಟ್ ತರಬೇತಿಯನ್ನು ಪಡೆದರು ಮತ್ತು ಅಂಡರ್-19 ತಂಡಕ್ಕೆ ಆಡಲು ಫಿಟ್ ಆಗಲು ತಮ್ಮ ಸರದಿಯನ್ನು ಕಾಯುತ್ತಿದ್ದರು. ತನ್ನ ತಂಡಕ್ಕೆ  ಬೌಲಿಂಗ್ ನಲ್ಲಿ ಅಪಾರ ಕೊಡುಗೆ ನೀಡುವ ಮೂಲಕ ಇಂದು  ಅವರು ಅಂಡರ್-19 ಪಂದ್ಯಾವಳಿಯಲ್ಲಿ ಆಡಲು ಸಮರ್ಥರಾಗಿದ್ದಾರೆ. ಅವರ ಪ್ರದರ್ಶನವನ್ನು ಪರಿಗಣಿಸಿ, ಅವರನ್ನು ಬಿಸಿಸಿಐ ರಾಜ್ಯ ಮಟ್ಟದ ಪಂದ್ಯಗಳಿಗೆ  ಸುಧಾರಿತ ತರಬೇತಿ ಶಿಬಿರಕ್ಕೆ ಅಗ್ರ 25 ಆಟಗಾರರಲ್ಲಿ ಬಲಗೈ ಮಾಧ್ಯಮ  ವೇಗದ  ಬೌಲರ್ ಆಗಿ ಆಯ್ಕೆ ಮಾಡಲಾಗಿದೆ.
ಈ ಯುವ ಪ್ರತಿಭೆಯ ಬಗ್ಗೆ ಸ್ಪೋರ್ಟ್ಸ್ ಕನ್ನಡ ಹೆಮ್ಮೆಪಡುತ್ತದೆ. ಸ್ಪೋರ್ಟ್ಸ್ ಕನ್ನಡದ ಪ್ರವರ್ತಕರು ಕೋಟ ರಾಮಕೃಷ್ಣ ಆಚಾರ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ, ಇನ್ನೂ ಹೆಚ್ಚಿನ ಸಾಧನೆ ಮಾಡಿ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದ್ದಾರೆ.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಉಡುಪಿಯ ಪ್ರತಿಭಾನ್ವಿತ ಮಹಿಳಾ ಕ್ರಿಕೆಟ್ ಆಟಗಾರ್ತಿ ವೈಷ್ಣವಿ ಆಚಾರ್ಯ ಕಡಿಯಾಳಿ…!!!

ಉಡುಪಿ-ನಾವು ಭಾರತೀಯರು ಕ್ರಿಕೆಟ್ ಆಟವನ್ನು ಧರ್ಮದಂತೆ ಆಚರಿಸುತ್ತೇವೆ, ಏಕೆಂದರೆ ಕ್ರಿಕೆಟ್‌ಗೆ ಹೆಚ್ಚಿದ ಗೌರವ ಮತ್ತು ಪ್ರೋತ್ಸಾಹದಿಂದಾಗಿ. ಇತ್ತೀಚೆಗೆ ದೇಶದಾದ್ಯಂತ ಕ್ರಿಕೆಟ್ ಪರ ಜೋರಾದ ಗಾಳಿ ಬೀಸುತ್ತಿದೆ.
ಇದು ಇಂದಿನ ದಿನಗಳಲ್ಲಿ ಪುರುಷರಷ್ಟೇ ಅಲ್ಲ ಮಹಿಳೆಯರೂ  ಕೂಡಾ ಆಡುವ ಕ್ರೀಡೆಯಾಗಿದೆ. ಇತ್ತೀಚಿನ ದಿನಗಳನ್ನು  ‘ ದಿ ಗೋಲ್ಡನ್ ಏರಾ ಆಫ್  ದಿ ಇಂಡಿಯನ್ ವಿಮೆನ್’ಸ್ ಕ್ರಿಕೆಟ್ ‘ ಎಂದು ಹೇಳಬಹುದು..  ಇದೀಗ ಭಾರತ ಮಹಿಳಾ ತಂಡದಲ್ಲಿ ಹೊಸ ತಾರೆಯರು ಹುಟ್ಟಿಕೊಳ್ಳುತ್ತಿದ್ದು, ಹೊಸ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ. 
 
ಉಡುಪಿ ಮಹಿಳಾ ತಂಡದ ಶ್ರೇಷ್ಠ ಆಟಗಾರ್ತಿಯ ಪರಿಚಯ ಇಲ್ಲಿದೆ.  ಸ್ನೇಹಿತರೇ, ಇಂದು ನಾವು ಉಡುಪಿಯ  ಮಹಿಳಾ ಯುವ ಕ್ರಿಕೆಟ್ ಪ್ರತಿಭೆ  ವೈಷ್ಣವಿ ಆಚಾರ್ಯ ಕಡಿಯಾಳಿ ಬಗ್ಗೆ ಹೇಳಲಿದ್ದೇವೆ. ಈ ಹೆಸರು ಅನೇಕ ಜನರಿಗೆ ಗೊತ್ತಿರಲಿಕ್ಕಿಲ್ಲ ಹೌದು!  ಉಡುಪಿ ಕ್ರಿಕೆಟ್ ಅಸೋಸಿಯೇಷನ್ ನ ಸ್ಟಾರ್ ಮಹಿಳಾ ಆಟಗಾರ್ತಿ ವೈಷ್ಣವಿ ಆಚಾರ್ಯ ಮಹಿಳಾ ಕ್ರಿಕೆಟಿಗರಲ್ಲಿ ಒಬ್ಬರು.  ಆರಂಭದ ದಿನಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಗ ಕಟಪಾಡಿಯ ಕೆ ಆರ್ ಎಸ್  ಅಕಾಡೆಮಿಯ ಉದಯ ಕುಮಾರ್ ಕಟಪಾಡಿ ಆಕೆಯ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದವರು. ಇತ್ತೀಚಿನ ದಿನಗಳಲ್ಲಿ ಉಡುಪಿ ಕ್ರಿಕೆಟ್ ಅಸೋಸಿಯೇಷನ್ ನ ಮುಖ್ಯ ತರಬೇತುದಾರ ಶ್ರೀ ಪ್ರಭಾಕರ್ ಶೆಟ್ಟಿ  ಅವರ ಅಡಿಯಲ್ಲಿ ನಿಯಮಿತವಾಗಿ ಅಭ್ಯಾಸ ಮಾಡುತ್ತಿದ್ದಾಳೆ, ಇವರು ತಮ್ಮ ವೇಗದ ಬೌಲಿಂಗ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ನಿಂದ  ಗಮನ ಸೆಳೆದವರು. ಬಲಗೈ ಬ್ಯಾಟರ್ ಆಗಿರುವ ಇವರು ಬಲಗೈನಲ್ಲಿ ಬೌಲಿಂಗ್‌ ಮಾಡುತ್ತಾರೆ. 18 ವರ್ಷ ಪ್ರಾಯದ ವೈಷ್ಣವಿ ಆಚಾರ್ಯ ಪ್ರತಿಷ್ಠಿತ ವನಿತಾ ಕ್ರಿಕೆಟ್ ಕೂಟದಲ್ಲಿ ಭಾಗವಹಿಸುತ್ತಿರುವ  ಆಟಗಾರ್ತಿ. ರಾಜ್ಯದಲ್ಲಿ ನಡೆದ ಅನೇಕ ಮಹಿಳಾ ಕ್ರಿಕೆಟ್ ನಲ್ಲಿ  ಕಾಣಿಸಿಕೊಂಡಿದ್ದಾರೆ. ಅವರು ತನ್ನ ಆಲ್ ರೌಂಡ್  ಪ್ರದರ್ಶನದಿಂದಲೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ವೇಗದಲ್ಲಿ ಬೌಲಿಂಗ್‌ ಮಾಡುವ ಸಾಮರ್ಥ್ಯ ಹೊಂದಿರುವ ಅವರ ಬೌಲಿಂಗ್ ಶೈಲಿಗೆ ಅಭಿಮಾನಿಗಳು ಫಿದಾ ಆಗಿದ್ದು, ಇವರು ಭವಿಷ್ಯದ ಭರವಸೆಯ ಬೌಲರ್‌ ಎನಿಸಿದ್ದಾರೆ. ಜೊತೆಗೆ ಅವರ ಬ್ಯಾಟಿಂಗ್ ಸೆನ್ಸ್ ಅದ್ಭುತವಾಗಿದೆ. ಅಮೋಘ ಕ್ರಿಕೆಟ್ ಪ್ರದರ್ಶನಕ್ಕಾಗಿ ಹಲವಾರು ಮಹಿಳಾ ಕ್ರಿಕೆಟಿಗ ಪ್ರಶಸ್ತಿಯನ್ನು ಪಡೆದಿದ್ದಾರೆ. ಕ್ರಿಕೆಟ್ ವಿಷಯ ಬಂದಾಗ ಈಕೆಯ ಆಟಕ್ಕೆ ಅನೇಕರು ಮನಸೋತಿದ್ದುಂಟು. 
 
ಉಡುಪಿಯ ಸ್ನೇಹ  ಟ್ಯೂಟೋರಿಯಲ್  ಕಾಲೇಜಿನಲ್ಲಿ  ದ್ವಿತೀಯ ಪಿ ಯು ಸಿ  ಓದುತ್ತಿರುವ ವೈಷ್ಣವಿ ಆಚಾರ್ಯ 19 ವರ್ಷದೊಳಗಿನ ಕರ್ನಾಟಕ ಮಹಿಳಾ ಟಿ 20 ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗುವ ಅವಕಾಶ ಪಡೆದಿದ್ದರು.  2022 ರಲ್ಲಿ  ಮೊದಲ ಬಾರಿಗೆ ಅಂಡರ್ 19 ರಾಜ್ಯ ಸಂಭಾವ್ಯರ ಪಟ್ಟಿಯಲ್ಲಿ ಆಡುವ ಅರ್ಹತೆ ಸಂಪಾದಿಸಿದರು.  19 ವರ್ಷದೊಳಗಿನ ಟಿ 20 ತಂಡದ ಪಂದ್ಯಕ್ಕೆ  ಆಯ್ಜೆಯಾಗಿದ್ದ ವೈಷ್ಣವಿ ಆಚಾರ್ಯ, ಇವರು  ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರು ಎಂದೂ ಸಹ ಗುರುತಿಸಲ್ಪಟ್ಟಿದ್ದಾರೆ. ವನಿತಾ ವಿಭಾಗದಲ್ಲಿ ನಾಮ ನಿರ್ದೇಶನಗೊಂಡ ವೈಷ್ಣವಿ ಆಚಾರ್ಯ ರಾಜ್ಯ ವಲಯ ಸ್ಥಳೀಯ ಮಹಿಳಾ ಕ್ರಿಕೆಟ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು.. ರಾಜ್ಯಾದ್ಯಂತ ನಡೆದ ಹಲವು ಟೂರ್ನಮೆಂಟ್  ನಲ್ಲಿ ಪ್ರಮುಖ ಪಾತ್ರ ವಹಿಸಿ ಹಲವಾರು ಪಂದ್ಯಾವಳಿಗಳಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
 
 
ಇದುವರೆಗಿನ ಸಾಧನೆ:
 
2022ರ  ಅಕ್ಟೋಬರ್ ನಲ್ಲಿ ಅಂಡರ್ 19 ಕರ್ನಾಟಕ  ತಂಡಕ್ಕೆ ಸೆಲೆಕ್ಟ್ ಆದ ವೈಷ್ಣವಿ ಆಚಾರ್ಯ  19 ವರ್ಷದೊಳಗಿನ ರಾಜ್ಯ ಸಂಭವನೀಯರು ಪಂದ್ಯದಲ್ಲಿ ರಾಜ್ಯ ಕ್ರಿಕೆಟ್‌ಗೆ ಚೊಚ್ಚಲ ಪ್ರವೇಶ ಮಾಡಿದರು.
 
ನಂತರ ರಾಜ್ಯ ವಲಯ ಸ್ಥಳೀಯ  ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದು, ಎರಡು ಬಾರಿ ಅವರು ಪ್ರತಿನಿಧಿಸಿದ ತಂಡ ವಿಜೇತರಾಗಿ  ಹೊರಹೊಮ್ಮಿತು. ಬೌಲಿಂಗ್‌ನಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದ ವೈಷ್ಣವಿ ಆಚಾರ್ಯ ನಂತರ ಆಲ್‌ರೌಂಡರ್‌ ಆಗಿ ಮಿಂಚುತ್ತಿದ್ದಾರೆ.
 
2022 ರಲ್ಲಿ ನೆನಪು ಟ್ರೋಫಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಆಡಿ ಇವರ ತಂಡ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
 
ಮೈಸೂರ್ ನಲ್ಲಿ ನಡೆದ ಮಾಫ್ಯೂಸಿಲ್ ವಿಮೆನ್’ಸ್ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅತ್ಯಧಿಕ ವಿಕೆಟ್‌ಗಳ  ಸಾಧನೆಗೈದು  ವುಮನ್  ಆಫ್  ದಿ ಮ್ಯಾಚ್ ಪ್ರಶಸ್ತಿಯನ್ನು  ಗಿಟ್ಟಿಸಿಕೊಂಡರು. 
 
ಸಿ  ಸಿ ಎಲ್ 2023 ರಲ್ಲಿ ರನ್ನರ್ ಅಪ್ ಪ್ರಶಸ್ತಿ
 
ಸಿ ಪಿ ಎಲ್ 2023 ರಲ್ಲೂ ಬ್ಯಾಕ್ ಟು ಬ್ಯಾಕ್ 5 ಬೌಂಡರಿಗಳನ್ನು ಬಾರಿಸಿ, ಅತ್ಯಧಿಕ ರನ್‌ ಹೊಡೆದು ವುಮನ್  ಆಫ್  ದಿ ಮ್ಯಾಚ್ ಪ್ರಶಸ್ತಿ  ಗಳಿಸಿದರು.
 
ಉಡುಪಿ ಸಿಂಗರ್ಸ್ ಟ್ರೋಫಿ 2023 ರಲ್ಲಿ ವಿನ್ನರ್ಸ್
 
ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ‌ ಹೊಂದಿದ್ದು ಸ್ಥಳೀಯ ಮಟ್ಟದ ಟೂರ್ನಿಗಳಲ್ಲಿ ಮಿಂಚುತ್ತಿರುವ ಯುವ ವೇಗದ ಬೌಲರ್‌.
 
 
” ಕ್ರಿಕೆಟ್ ಮೇಲಿನ ಆಸಕ್ತಿಯಿಂದ, ಕಠಿಣ ಪರಿಶ್ರಮದಿಂದ ಮತ್ತು  ಹಿರಿಯರ ಪ್ರೇರಣೆ, ಹಾಗೂ ಕೋಚ್ ಗಳ ಮಾರ್ಗದರ್ಶನದಿಂದ ಕ್ರಿಕೆಟ್‌ಪಟು ಆಗಿದ್ದೇನೆ. ಕ್ರಿಕೆಟ್  ಪ್ರತಿಭೆಗಳಿಗೆ  ಪ್ರೋತ್ಸಾಹ ಸಿಕ್ಕರೆ ಖಂಡಿತವಾಗಿಯೂ  ಹೆಚ್ಚಿನ ಸಾಧನೆಗೆ ಅನುಕೂಲವಾಗುತ್ತದೆ. ಸಾಧನೆಗೆ  ನಿರಂತರ ಅಭ್ಯಾಸ  ಹಾಗೂ ಶ್ರಮ ಮುಖ್ಯ. ಮೊದಲ ಬಾರಿ ಅಂಡರ್ 19 ರಾಜ್ಯ ತಂಡದ ಪಂದ್ಯದಲ್ಲಿಆಯ್ಕೆ ಆದಾಗ ಬಹಳಷ್ಟು ಸಂತಸ ತಂದಿತ್ತುಎಂದು ವೈಷ್ಣವಿ ಹೇಳಿದರು. ರಾಜ್ಯ  ತಂಡಕ್ಕೆ ಆಯ್ಕೆಯಾಗುವ ಗುರಿ ಹೊಂದಿದ್ದು, ಹಲವು ಟೂರ್ನಿಗಳಲ್ಲಿಉತ್ತಮ ಪ್ರದರ್ಶನ ನೀಡುತ್ತಿದ್ದೇನೆ ”  ಎಂದು ಸ್ಪೋರ್ಟ್ಸ್ ಕನ್ನಡದ ಜೊತೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.
 
 
ಕಳೆದ ಎರಡು ವರ್ಷಗಳಿಂದ ವಿವಿಧ ವಯೋಮಿತಿಯ  ಟೂರ್ನಿಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ವೇಗಿ ವೈಷ್ಣವಿ ರಾಜ್ಯ ಕಿರಿಯರ ತಂಡದ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದಾರೆ.  ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದ ಅವರ ತಂದೆ ಸತೀಶ್ ಆಚಾರ್ಯ ಅಕ್ಕಸಾಲಿಗರಾಗಿದ್ದಾರೆ ಮತ್ತು ಅವರ ತಾಯಿ ಗೀತಾ ಎಸ್ ಆಚಾರ್ಯ ಅವರು ಟೈಲರಿಂಗ್ ಅಂಗಡಿಯನ್ನು ನಡೆಸುತ್ತಿದ್ದಾರೆ.  ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುವ ಆಸೆ ಅವಳಲ್ಲಿ ಬೇರೂರಿದೆ.  ಮುಂದೆ ಬೆಂಗಳೂರಿನ ಪ್ರಸಿದ್ಧ ಕ್ರಿಕೆಟ್ ಸಂಸ್ಥೆಗಳಲ್ಲಿ ಒಂದಾದ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ವೃತ್ತಿಪರ ಕ್ರಿಕೆಟ್ ತರಬೇತಿ ಪಡೆಯುವ ಆಸೆ ಇದ್ದು, ಸೂಕ್ತ ಪ್ರೋತ್ಸಾಹದ ನಿರೀಕ್ಷೆಯಲ್ಲಿದ್ದಾರೆ . ಉಡುಪಿಯ ಈ  ಮಹಿಳಾ ಕ್ರಿಕೆಟ್  ಪ್ರತಿಭೆಗೆ ಈಗ ನೆರವಿನ ಹಸ್ತ ಬೇಕಿದೆ .  
 
ವೈಷ್ಣವಿ ಆಚಾರ್ಯ ಸಾಧನೆಗೆ ಸ್ಪೋರ್ಟ್ಸ್ ಕನ್ನಡದ ಪ್ರವರ್ತಕರಾದ ಕೆ ಆರ್  ಕೆ ಆಚಾರ್ಯ ಅಭಿನಂದಿಸಿದ್ದು, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಸಾಧನೆ ತೋರಿ, ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ, ತಾರೆಯಾಗಿ ಬೆಳೆದು ಉಡುಪಿ ಜಿಲ್ಲೆಯ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರಿಸುವ ಸಾಧನೆ ಮಾಡುವಂತೆ ಹಾರೈಸಿದ್ದಾರೆ.
 
ವೈಷ್ಣವಿ ಬೌಲಿಂಗ್ ವೀಡಿಯೋ

 
 
ಆಲ್ ದಿ ಬೆಸ್ಟ್  ವೈಷ್ಣವಿ ಆಚಾರ್ಯ…
 
 
ಸುರೇಶ್ ಭಟ್ ಮೂಲ್ಕಿ  &
ಟೀಮ್ ಸ್ಪೋರ್ಟ್ಸ್ ಕನ್ನಡ