Categories
ಕ್ರಿಕೆಟ್

ಭಾರತದ ಸಿಂಹ ಘರ್ಜನೆ; ಇನ್ಕ್ರೆಡಿಬಲ್ ಪರ್ಫಾರ್ಮೆನ್ಸ್

ಏಕದಿನ ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನ ಮಹತ್ವದ ಎನ್‌ಕೌಂಟರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಶುಭಾರಂಭ ಮಾಡಿತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.
ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಸ್ಫೋಟಕ ರೀತಿಯಲ್ಲಿ ಇನ್ನಿಂಗ್ಸ್ ಆರಂಭಿಸಿದರು. ಈ ಅವಧಿಯಲ್ಲಿ, ರೋಹಿತ್ ಶರ್ಮಾ ಮೈದಾನದ ಸುತ್ತಲೂ ಬೌಂಡರಿ ಮತ್ತು ಸಿಕ್ಸರ್ ಬಾರಿಸುವ ಕೆಲಸ ಮಾಡಿದರು. Well Played..ಕ್ಯಾಪ್ಟನ್!  Good start!
 *ಸ್ಫೋಟಕ ಆಟವಾಡಿದ ರೋಹಿತ್:* ರೋಹಿತ್ ಶರ್ಮಾ 29 ಎಸೆತಗಳಲ್ಲಿ 47 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಟಿಮ್ ಸೌದಿ ಬೌಲಿಂಗ್ ನಲ್ಲಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಅವರು ತಮ್ಮ ವಿಕೆಟ್ ಕಳೆದುಕೊಂಡರು. ಡೈವಿಂಗ್ ಮಾಡಿದ ಕೇನ್ ವಿಲಿಯಮ್ಸನ್ ರೋಹಿತ್ ಅವರ ಅದ್ಭುತ ಕ್ಯಾಚ್ ಪಡೆದರು. ಈ ಕ್ಯಾಚ್ ತುಂಬಾ ಕಷ್ಟಕರವಾಗಿತ್ತು ಆದರೆ ವಿಲಿಯಮ್ಸನ್ ಅತ್ಯುತ್ತಮ ಫೀಲ್ಡಿಂಗ್ ಪ್ರದರ್ಶಿಸಿ ಕ್ಯಾಚ್ ಹಿಡಿದರು. ರೋಹಿತ್ ಶರ್ಮಾ ರೂಪದಲ್ಲಿ ಭಾರತಕ್ಕೆ ದೊಡ್ಡ ಆಘಾತವಾಯಿತು. ರೋಹಿತ್ ಶರ್ಮಾ ಔಟಾದ ನಂತರ, ವಾಂಖೆಡೆಯಲ್ಲಿ ಪಿನ್ ಡ್ರಾಪ್ ಮೌನ ಕಂಡುಬಂದಿತು.
 *ಸಚಿನ್ ಸಮ್ಮುಖದಲ್ಲೇ ದಾಖಲೆ ಮುರಿದ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ!  ಶತಕಗಳ ಅರ್ಧಶತಕ! :* ರೋಹಿತ್ ಶರ್ಮಾ ನಂತರ ಮೈದಾನಕ್ಕೆ ಬ್ಯಾಟಿಂಗ್ ಗೆ ಬಂದ ವಿರಾಟ್ ಕೊಹ್ಲಿ ಕೂಡ ಉತ್ತಮ ಹೊಡೆತಗಳನ್ನು ಬಾರಿಸಿದರು. ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ ಶುಭಮನ್ ಗಿಲ್ ಅವರೊಂದಿಗೆ ಉತ್ತಮ ಜೊತೆಯಾಟವಾಡಿದರು. ಈ ಅವಧಿಯಲ್ಲಿ ವಿರಾಟ್ ಕೊಹ್ಲಿ ಕೂಡ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಮಾಡುವಲ್ಲಿ ಯಶಸ್ವಿಯಾದರು. ವಾಸ್ತವವಾಗಿ, ವಿರಾಟ್ ಕೊಹ್ಲಿ ಈ ವಿಶ್ವಕಪ್‌ನಲ್ಲಿ 640 ಕ್ಕೂ ಹೆಚ್ಚು ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ 594 ರನ್ ಗಳಿಸಿದ್ದರು. ಈ ಮೂಲಕ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದಾರೆ. ಮುಂಬೈನಲ್ಲಿ ವಿರಾಟ್ ಅವರ ಅದ್ಭುತ ಪ್ರದರ್ಶನಕ್ಕೆ ಇಡೀ ವಾಂಖೆಡೆ ಸ್ಟೇಡಿಯಂ ಮತ್ತು  ಟೆಲಿವಿಷನ್‌ಗಳಿಗೆ ಅಂಟಿಕೊಂಡಿದ್ದ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದರು. ಕೊಯ್ಲಿ ಆಟಕ್ಕೆ ಅಭಿಮಾನಿಗಳು ಫಿದಾ ಆದರು. ಭಾರತದ ಚೇಸ್ ಮಾಸ್ಟರ್ ಸಚಿನ್ ಅವರ ಮತ್ತೊಂದು ದಾಖಲೆಯನ್ನು ಬೆನ್ನಟ್ಟಿದಾಗ ಇಡೀ ವಾಂಖೆಡೆ ಸ್ಟೇಡಿಯಂ ಹುಚ್ಚೆದ್ದು ಕುಣಿದಾಡಿತು. ಕ್ರಿಕೆಟ್ ದೇವರ ದಾಖಲೆ ಧ್ವಂಸಗೊಳಿಸಿದ ದೊರೆ ಕಿಂಗ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಭಾರತೀಯ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಮೂರು ದಾಖಲೆಗಳನ್ನು ಅಳಿಸಿಹಾಕಿ ಮೂಲೆಗುಂಪು ಮಾಡಿದ್ದಾರೆ.ವಿರಾಟ್ ಕೊಹ್ಲಿ 50 ಏಕದಿನ ಶತಕ ಸಿಡಿಸಿದ ಸಾರ್ವಕಾಲಿಕ ಮೊದಲ ಬ್ಯಾಟರ್ ಆದರು.
 *ಸಾರ್ವಕಾಲಿಕ ಶ್ರೇಷ್ಠ!* 🐐 
 *ಈ ಪೀಳಿಗೆಯ ಶ್ರೇಷ್ಠ ಆಟಗಾರ!* 
 *ಆಡು ಮುಟ್ಟದ ಸೊಪ್ಪಿಲ್ಲ, ಕ್ರಿಕೆಟ್ ನ 🐐 ವಿರಾಟ್ ಕೊಹ್ಲಿ ಅಂದ್ರೂ ತಪ್ಪಿಲ್ಲ* .
ವಿಶ್ವ ಕಪ್‌ನಲ್ಲಿ ವಿರಾಟ್ ಕೊಹ್ಲಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. ವಿಶ್ವಕಪ್ ಇತಿಹಾಸದಲ್ಲಿ ನಾನ್ ಓಪನರ್ ಅಂದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಟೂರ್ನಿಯಲ್ಲಿ ಇಷ್ಟು ರನ್ ಗಳಿಸಿದ್ದು ಇದೇ ಮೊದಲು. ಈ ಹಿಂದೆ, ವಿಶ್ವಕಪ್‌ನಲ್ಲಿ 600 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್ ಗಳಿಸಿದಾಗ, ಆರಂಭಿಕ ಬ್ಯಾಟ್ಸ್‌ಮನ್‌ಗಳು ಅದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ಪರ ಸಚಿನ್ ತೆಂಡೂಲ್ಕರ್ ರನ್ ಗಳಿಸಿದಾಗಲೆಲ್ಲ ತಂಡದ ಪರ ಆರಂಭಿಕ ಬ್ಯಾಟ್ಸ್ ಮನ್ ಆಗಿ ಆಡುತ್ತಿದ್ದರು. ಆದರೆ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಉಳಿದುಕೊಂಡರು.ಇದರೊಂದಿಗೆ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದರು. ಏಕದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿದ್ದಾರೆ.
 ಶ್ರೇಯಸ್ ಅಯ್ಯರ್ ಅವರು ಸದ್ದಿಲ್ಲದೆ ಏಕದಿನ ವಿಶ್ವಕಪ್‌ನಲ್ಲಿ ಸತತ ಎರಡು ಶತಕಗಳನ್ನು ಗಳಿಸಿದ ಮೂರನೇ ಭಾರತೀಯ ಎನಿಸಿಕೊಂಡರು.
ಮುಂಬೈನಲ್ಲಿ ಧೂo ಧಮಾಕ ಬ್ಯಾಟಿಂಗ್ ಮಾಡಿದ ಭಾರತ ಏಕದಿನ ವಿಶ್ವಕಪ್‌  ಇತಿಹಾಸ ನಾಕೌಟ್ ಪಂದ್ಯದಲ್ಲಿ ಗರಿಷ್ಠ ರನ್ ಗಳಿಸಿತು. ವಾಂಖೆಡೆಯಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ವೈಭವದಿಂದಾಗಿ ಕಿವೀಸ್‌ಗೆ ಗೆಲ್ಲಲು 398 ರನ್ ಗಳ  ಬೃಹತ್ ಗುರಿ ನೀಡಿತು. ಉತ್ತರವಾಗಿ  ನ್ಯೂಜಿಲ್ಯಾಂಡ್ ಅಪಾರ ಒತ್ತಡದಲ್ಲಿ ತತ್ತರಿಸಿತು. ಮೊಹಮ್ಮದ್ ಶಮಿ ಅಮೋಘವಾದ ಬೌಲಿಂಗ್‌ನಲ್ಲಿ  ಏಳು ವಿಕೆಟ್‌ಗಳನ್ನು ಪಡೆದರು.
2019ರ ಸೆಮಿಫೈನಲ್ ಸೋಲಿಗೆ ಟೀಮ್ ಇಂಡಿಯಾ ಪ್ರತಿಕಾರ ನೀಡಿ ಫೈನಲ್‌ಗೆ ಲಗ್ಗೆ ಇಟ್ಟಿದೆ ರೋಹಿತ್ ಬಳಗ! ಭಾರತವು ಕಮಾಂಡಿಂಗ್ ಸ್ಥಾನದಲ್ಲಿದೆ ಮತ್ತು ಅಹಮದಾಬಾದ್‌ನ ನರೇಂದ್ರ ಮೋದಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಬ್ಲಾಕ್ ಬಸ್ಟರ್  ಫೈನಲ್‌ನಲ್ಲಿ ತಮ್ಮ ದಿನಾಂಕವನ್ನು ನಿಗದಿಪಡಿಸಿದೆ.
✍🏼ಸುರೇಶ್ ಭಟ್, ಮೂಲ್ಕಿ
ಕ್ರೀಡಾ ಲೇಖಕ
ಸ್ಪೋರ್ಟ್ಸ್ ಕನ್ನಡ
Categories
ಕ್ರಿಕೆಟ್

12 ವರ್ಷಗಳ ನಂತರ ವಿಶ್ವಕಪ್ ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ

ಸತತ 7 ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡವು ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿದೆ.
ಭಾರತ ತಂಡವು ದಕ್ಷಿಣ ಆಫ್ರಿಕಾ ಮತ್ತು ನೆದರ್ಲೆಂಡ್ಸ್ ವಿರುದ್ಧವೂ ಗೆಲ್ಲಲು ಪ್ರಯತ್ನಿಸುತ್ತದೆ. ಭಾರತ ತಂಡ ವಿಶ್ವಕಪ್‌ನಲ್ಲಿ ಇದುವರೆಗೆ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡ ಪ್ರದರ್ಶನ ನೀಡಿದ ರೀತಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
ಈ ಬಾರಿಯ ವಿಶ್ವಕಪ್ ನಲ್ಲಿ ಭಾರತ ತಂಡಕ್ಕೆ ಯಾವುದೇ ತಂಡ ಪೈಪೋಟಿ ನೀಡುತ್ತಿರುವುದು ಕಂಡು ಬರುತ್ತಿಲ್ಲ. ಇಲ್ಲಿಂದ ಯಾರಾದರೂ ಭಾರತವನ್ನು ಸೋಲಿಸಲು ಸಾಧ್ಯವಾದರೆ ಅದು ಭಾರತವೇ. ಆಡುವ ಹನ್ನೊಂದರಲ್ಲಿ ಭಾರತ ತಂಡ ಯಾವುದೇ ತಪ್ಪು ನಿರ್ಧಾರ ತೆಗೆದುಕೊಳ್ಳದಿದ್ದರೆ, ಅವರನ್ನು ತಡೆಯುವುದು ಅಸಾಧ್ಯವೆಂದು ತೋರುತ್ತದೆ. ಮೊಹಮ್ಮದ್ ಶಮಿ ಆಗಮನದಿಂದ ಭಾರತ ತಂಡ ಬಲಿಷ್ಠವಾಗಿದೆ.
ಮುಂಬರುವ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ತಂಡವನ್ನು ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಬೇಕಾಗುತ್ತದೆ. ಅದರಲ್ಲೂ ನಾಯಕ ರೋಹಿತ್ ಶರ್ಮಾ ಅವರ ಜವಾಬ್ದಾರಿ ಸೆಮಿಫೈನಲ್ ಪಂದ್ಯದಲ್ಲಿ ಸಾಕಷ್ಟು ಹೆಚ್ಚಲಿದೆ.  2019ರ ವಿಶ್ವಕಪ್‌ನಲ್ಲೂ ಭಾರತ ಇದೇ ರೀತಿಯ ಸಾಧನೆ ಮಾಡಿತ್ತು. ಗ್ರೂಪ್ ಹಂತದಲ್ಲಿ ಭಾರತ ತಂಡ ಸತತ ಪಂದ್ಯಗಳನ್ನು ಗೆದ್ದಿತ್ತು. ಆದರೆ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲನ್ನು ಎದುರಿಸಬೇಕಾಯಿತು. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈ ವರ್ಷ ಯಾವುದೇ ತಪ್ಪು ಮಾಡಲು ಇಷ್ಟಪಡುವುದಿಲ್ಲ. ರೋಹಿತ್ ಶರ್ಮಾ ಸೆಮಿಫೈನಲ್‌ಗೆ ಮೊದಲು ಎಲ್ಲಾ  ಆಟಗಾರರ ಪ್ರದರ್ಶನದ ಮೇಲೆ ನಿಗಾ ಇಡಬೇಕಾಗುತ್ತದೆ.
 ಭಾರತ ತಂಡವು ಶ್ರೇಯಸ್ ಅಯ್ಯರ್‌ಗೆ ನಿರಂತರವಾಗಿ ಅವಕಾಶಗಳನ್ನು ನೀಡುತ್ತಿದೆ. ಅಯ್ಯರ್ ಶ್ರೀಲಂಕಾ ವಿರುದ್ಧ ಅವಕಾಶವನ್ನು ಬಳಸಿಕೊಂಡು ಉತ್ತಮ
ಆಟಗಾರ ಎಂದು ಸಾಬೀತುಪಡಿಸಿದರು.
ವಾಂಖೆಡೆ ಪಿಚ್‌ನಲ್ಲಿ 82 ರನ್‌ಗಳ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಕೌಶಲ್ಯವನ್ನು ತೋರಿಸಿದ್ದಾರೆ. ಭಾರತ ತಂಡ ಹೆಚ್ಚಾಗಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೇಲೆ ಅವಲಂಬಿತವಾಗಿದೆ.
ಭಾರತ ತಂಡ ಸೆಮಿಫೈನಲ್‌ನಲ್ಲಿ ಗೆಲ್ಲುವ ಮೂಲಕ ಈ ವರ್ಷ ವಿಶ್ವಕಪ್‌ನಲ್ಲಿ ಫೈನಲ್‌ಗೆ ತಲುಪುವ ಅವಕಾಶವನ್ನು ಹೊಂದಿದೆ. ಭಾರತ ಕೊನೆಯ ಬಾರಿಗೆ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಶ್ರೀಲಂಕಾ ವಿರುದ್ಧದ ಫೈನಲ್ ಪಂದ್ಯವನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿದೆ. 12 ವರ್ಷಗಳ ನಂತರ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಲು ಬಯಸಿದೆ. ಆದರೆ ಭಾರತ ಸೆಮಿಫೈನಲ್ ಪಂದ್ಯವನ್ನು ಅತ್ಯಂತ ಎಚ್ಚರಿಕೆಯಿಂದ ಆಡಬೇಕಿದೆ. ಐಸಿಸಿ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ಗಳು ಭಾರತದ ದುರ್ಬಲತೆಯಾಗಿದೆ.
✍️ ಸುರೇಶ್ ಭಟ್, ಮೂಲ್ಕಿ
ಕ್ರೀಡಾ ಬರಹಗಾರರು
ಟೀಂ ಸ್ಪೋರ್ಟ್ಸ್ ಕನ್ನಡ