Categories
ಅಥ್ಲೆಟಿಕ್ಸ್

ಯೋಗಪಟು ಕುಮಾರಿ ಕವನ ಆಚಾರ್ಯ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್‍ಪ್ರೈಸಸ್ ಹೋಟೆಲ್‍ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಯೋಗಪಟು ಕುಮಾರಿ ಕವನ ಆಚಾರ್ಯ ಇವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.
 ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ, ಕರ್ನಾಟಕದ ಸಾರ್ವಜನಿಕ ಗೃಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸ್ಮನಿ, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ ತಾಲೂಕಾ ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಚಿತ್ರನಟಿ ಮೀನಾ, ಹಿರಿಯ ಪತ್ರಕರ್ತ ರಹಮತ್ ಕಂಚಗಾರ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಹಿರೀಯ ಪತ್ರಕರ್ತ ಮಾರುತಿ ಬಡಿಗೇರ, ಸ್ನೇಹಯುವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ರಂಜಿತಕುಮಾರ್, ಮತ್ತಿತರರು ಉಪಸ್ಥಿತರಿದ್ದರು.
Categories
ಅಥ್ಲೆಟಿಕ್ಸ್

ಪಂಚಮ ವಿಶ್ವದಾಖಲೆಯ ಗುರಿಯತ್ತ “ತನುಶ್ರೀ ಪಿತ್ರೋಡಿ”

 

ಮನಸ್ಸು,ಶರೀರ ಮತ್ತು ಆತ್ಮದ ಒಂದು ಕನ್ನಡಿಯಾಗಿ ವರ್ತಿಸುವ ಒಂದು ಮಾಧ್ಯಮ ಯೋಗ.
ಭಾರತವು ವಿಶ್ವಕ್ಕೆ ನೀಡಿದ ಮಹಾನ್ ಕೊಡುಗೆಗಳಲ್ಲಿ ಯೋಗವೂ ಒಂದು.

ಯೋಗದ ಮೂಲಕ ತನು ಮತ್ತು ಮನದ ಆರೋಗ್ಯವನ್ನು ಕಾಪಾಡುವ ಯೋಗ ಭಾಗ್ಯವನ್ನು ನಮ್ಮ ಹಿರಿಯರು ನಮಗೆ ನೀಡಿದ್ದಾರೆ.ಇಂತಹ ವರಪ್ರದವಾದ ಶಕ್ತಿ ಸಂಚಯನದ ದಿವ್ಯ ಪ್ರಭೆಯ ಯೋಗಾಭ್ಯಾಸವನ್ನು ಕಲಿಯುತ್ತಿರುವ ಪ್ರತಿಭೆ “ಯೋಗ ರತ್ನ” ತನುಶ್ರೀ ಪಿತ್ರೋಡಿ.

ಈಗಾಗಲೇ ಯೋಗಾಸನದ ಮೂಲಕ ನಾಲ್ಕು ವಿಶ್ವದಾಖಲೆಗಳನ್ನು ಹೊಂದಿರುವ ತನುಶ್ರೀ ತನ್ನ 5 ನೇ ವಿಶ್ವದಾಖಲೆಯಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ “ಚಕ್ರಾಸನ ರೇಸ್” ವಿಭಾಗದಲ್ಲಿ ದಿನಾಂಕ 22.2.2020 ರಂದು ಸಂಜೆ 4.30 ಕ್ಕೆ ಉದ್ಯಾವರದ ಗ್ರಾಮ ಪಂಚಾಯತ್ ಮೈದಾನದಲ್ಲಿ ಪ್ರಯತ್ನಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸಂದರ್ಭ ತನುಶ್ರೀ ಪಿತ್ರೋಡಿ,ತಂದೆ ಉದಯ್ ಕುಮಾರ್ ಹಾಗೂ ವಿಜಯ್ ಕೋಟ್ಯಾನ್ ಹಾಗೂ ರತನ್ ಉದ್ಯಾವರ ಉಪಸ್ಥಿತರಿದ್ದರು.