4.9 C
London
Thursday, March 28, 2024
Homeಕ್ರಿಕೆಟ್ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ ವತಿಯಿಂದ ಪಿ.ಪಿ.ಎಲ್-13 ಹಾಗೂ ಪ್ರತಿಭಾನ್ವೇಷಣೆ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ ವತಿಯಿಂದ ಪಿ.ಪಿ.ಎಲ್-13 ಹಾಗೂ ಪ್ರತಿಭಾನ್ವೇಷಣೆ

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...

ಮಂಗಳೂರು: ಪದುವ ಶಿಕ್ಷಣ ಸಂಸ್ಥೆ ಮತ್ತು ಜುಗಲ್ ಸ್ಪೋರ್ಟ್ಸ್ ಕ್ಲಬ್ (ರಿ) ನ ಲೆದರ್ ಬಾಲ್ ಕ್ರಿಕೆಟ್ ಕೋಚಿಂಗ್ ಕ್ಯಾಂಪ್

ಮಂಗಳೂರು: : ಪದುವ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್  ವತಿಯಿಂದ  ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್...
spot_imgspot_img
2020 ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ) ಪ್ರೀಮಿಯರ್‌ ಲೀಗ್ ನ ಯಶಸ್ವಿ 13 ನೇ ವರ್ಷದ ಸಂಭ್ರಮದ ಪ್ರಯುಕ್ತ ಡಿಸೆಂಬರ್ 13 ರ ರವಿವಾರ ಉದ್ಯಾವರ ಗ್ರಾಮ‌ ಪಂಚಾಯತ್ ಮೈದಾನದಲ್ಲಿ ವೆಂಕಟರಮಣ ತಂಡದ ಸದಸ್ಯರಿಗಾಗಿ ಪಿ.ಪಿ.ಎಲ್-13 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದಾರೆ.
*ಶಿಸ್ತಿಗಾಗಿ ಕ್ರಿಕೆಟ್,ಸಮಾಜಕ್ಕಾಗಿ ತಂಡ*
ಪಿ.ಪಿ.ಎಲ್ ನ ಉದ್ಘಾಟನಾ ಸಮಾರಂಭ ಬೆಳಿಗ್ಗೆ ಸರಿಯಾಗಿ 8.30 ಗೆ ನಡೆಯಲಿದ್ದು‌.ಈ ಸಂದರ್ಭ ತಂಡದ ಪ್ರತಿಯೊಬ್ಬ ಸದಸ್ಯರಿಗೂ ಪ್ರಕೃತಿ ಉಳಿಸುವ ಸಲುವಾಗಿ ಗಿಡ ವಿತರಣೆ,ತಂಡದ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ,ತಂಡದ ವತಿಯಿಂದ ನಡೆಯುವ ಆನ್ಲೈನ್ ಸ್ಪರ್ಧೆ(ಚಿತ್ರಕಲೆ,ನೃತ್ಯ, ಸಂಗೀತ) ಬಹುಮಾನ ವಿತರಣೆ,ಅಭೂತಪೂರ್ವ ಸಾಧನೆ ಮಾಡಿದ ವಿದ್ಯಾರ್ಥಿಗೆ ಸನ್ಮಾನ,ವಿಶೇಷ ಚೇತನ ಚಿತ್ರ ಕಲಾವಿದ ಶಿರ್ವದ ಗಣೇಶ್ ಪಂಜಿಮಾರು ಇವರಿಗೆ ಗೌರವಪೂರ್ಣ ಅಭಿನಂದನಾ ಕಾರ್ಯಕ್ರಮ,ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನಿ ಸದಸ್ಯರಿಗೆ ಜೀವರಕ್ಷಕ ಗೌರವ ಪ್ರಶಸ್ತಿ,ಹಿರಿಯ ಸಕ್ರಿಯ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಧ್ಯಮುಕ್ತ ಸಮಾಜ,ರಕ್ತದಾನದ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ.
ವೆಂಕಟರಮಣ ಪಿತ್ರೋಡಿಯ ಆಟಗಾರರನ್ನೊಳಗೊಂಡ 6 ತಂಡಗಳಾದ 1)ವಿ.ಎಸ್.ಸಿ ಪ್ರೆಸಿಡೆಂಟ್ ಇಲೆವೆನ್,2)ವಿ.ಎಸ್.ಸಿ ರಾಕ್ ಸ್ಟಾರ್ಸ್,3)ವಿ.ಎಸ್.ಸಿ ಸನ್ ರೈಸರ್ಸ್,4)ವಿ.ಎಸ್.ಸಿ ವೆಂಕಿ ಇಲೆವೆನ್,5)ವಿ.ಎಸ್.ಸಿ ಯು.ಆರ್ ಬಾಯ್ಸ್ 6)ವಿ.ಎಸ್.ಸಿ ಚಾಂಪಿಯನ್ಸ್ ತಂಡಗಳು ಪಿ.ಪಿ.ಎಲ್-13 ರ ಪ್ರಶಸ್ತಿಗಾಗಿ ಸೆಣಸಾಡಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

1 + eleven =