5.4 C
London
Wednesday, April 17, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್T.C.A ಉಡುಪಿ ಜಿಲ್ಲೆ ಇವರ ಆಯೋಜನೆಯಲ್ಲಿ ಪ್ರಥಮ ಬಾರಿಗೆ- ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಮೆಂಟ್ 2021-2022

T.C.A ಉಡುಪಿ ಜಿಲ್ಲೆ ಇವರ ಆಯೋಜನೆಯಲ್ಲಿ ಪ್ರಥಮ ಬಾರಿಗೆ- ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಮೆಂಟ್ 2021-2022

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಅಳಿವಿನಂಚಿನಲ್ಲಿರುವ ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಟೊಂಕ ಕಟ್ಟಿ ನಿಂತಿರುವ ಉಡುಪಿ ಜಿಲ್ಲೆಯ ಹಿರಿಯ ಆಟಗಾರರ ಸಮಾಗಮದಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಯಾದ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಜಿಲ್ಲೆ ಇವರ ಆಯೋಜನೆಯಲ್ಲಿ ಪ್ರಥಮ ಬಾರಿಗೆ “ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಮೆಂಟ್ 2021-22” ನಡೆಯಲಿದೆ.
ತಾಲ್ಲೂಕು ಮಟ್ಟದಿಂದ ಪ್ರಾರಂಭಗೊಂಡು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲೂ ಕ್ರಾಂತಿಕಾರಿ ಸಂಚಲನ ಮೂಡಿಸಲಿರುವ ಟೆನ್ನಿಸ್ಬಾಲ್ ಕ್ರಿಕೆಟ್ ಉಡುಪಿ ಜಿಲ್ಲಾ ಅಸೋಸಿಯೇಷನ್ ಆಯೋಜಿಸುವ
ಪಂದ್ಯಾಕೂಟದ ವಿವರ ಈ ಕೆಳಗಿನಂತಿದೆ.
1)ಪಂದ್ಯಾಕೂಟವು ಬೈಂದೂರು,ಕುಂದಾಪುರ, ಬ್ರಹ್ಮಾವರ,ಉಡುಪಿ,ಕಾಪು,ಹೆಬ್ರಿ,
ಕಾರ್ಕಳ ಹೀಗೆ  7 ತಾಲೂಕುಗಳ ವಿಭಾಗಗಳಾಗಿರುತ್ತದೆ.
2)7 ತಾಲೂಕುಗಳಲ್ಲಿ 7 ಟೂರ್ನಮೆಂಟ್ ಗಳು ನಡೆಯುತ್ತದೆ.
3)ತಾಲ್ಲೂಕು ಮತ್ತು ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದ ಪಂದ್ಯಾಟಗಳನ್ನು ಅಸೋಸಿಯೇಷನ್ ಮೂಲಕವೇ ನಡೆಸಲಾಗುವುದು.
4)ಹೆಸರು ನೋಂದಣಿ ಮಾಡಿದ ಆಟಗಾರರ ಸಾಮರ್ಥ್ಯಕ್ಕನುಗುಣವಾಗಿ ತಂಡವನ್ನು ಅಸೋಸಿಯೇಷನ್ ಮೂಲಕವೇ ತಂಡ ರಚಿಸಲಾಗುವುದು.
5)ಹೆಸರು ನೋಂದಾವಣೆಗೆ ಯಾವುದೇ ಶುಲ್ಕ ಇರುವುದಿಲ್ಲ.
6)ತಾಲೂಕು ತಂಡಗಳ ಆಟಗಾರರ ಉತ್ತಮ ಪ್ರದರ್ಶನಗಳನ್ನು ನೋಡಿ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ತಂಡ ರಚಿಸಲಾಗುವುದು.
7)ಆಟಗಾರರು ಒಂದು ಫೋಟೋ ವಾಟ್ಸಪ್ ಮೂಲಕ ಕಳುಹಿಸಬೇಕು.ಆಟಗಾರರು ತಮ್ಮ ಹೆಸರು ನೋಂದಣಿಗೆ 30-09-2021 ಕೊನೆಯ ದಿನಾಂಕವಾಗಿರುತ್ತದೆ.
8)ಟೂರ್ನಮೆಂಟ್ ನ ದಿನಾಂಕ ಮತ್ತು ಸ್ಥಳದ ವಿವರ ಅತಿ ಶೀಘ್ರದಲ್ಲಿ ತಿಳಿಸಲಾಗುತ್ತದೆ.ಆಟಗಾರರಿಗೆ ಪಂದ್ಯಾಟದ ದಿನ ಮಧ್ಯಾಹ್ನದ ಊಟ ಮತ್ತು ಜೆರ್ಸಿಯನ್ನು ನೀಡಲಾಗುತ್ತದೆ.
9)ಆಟಗಾರರು ಈ ಮೊದಲು ಆಡಿದ ತಂಡದ ಹೆಸರು
ನಮೂದಿಸಬೇಕು.
10)ಪಂದ್ಯಾಕೂಟದ ಎಲ್ಲಾ ಪಂದ್ಯಗಳು 10 ಓವರ್ ಗಳದ್ದಾಗಿರುತ್ತದೆ.
11)ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನದೊಂದಿಗೆ ಶಾಶ್ವತ ಫಲಕಗಳನ್ನು ನೀಡಿ ಗೌರವಿಸಲಾಗುತ್ತದೆ.
ಆಡಲಿಚ್ಚಿಸುವವರು 7483431596  ಈ ವಾಟ್ಸಪ್ ನಂಬರ್ ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

9 − three =