ಅಥ್ಲೆಟಿಕ್ಸ್ನಾಟ್ಯ ಶಾಸ್ತ್ರದ ಮೂಲಕ 8ನೇ ವಿಶ್ವದಾಖಲೆ ನಿರ್ಮಿಸಿದ ಯೋಗ ಸಾಧಕಿ ತನುಶ್ರೀ...

ನಾಟ್ಯ ಶಾಸ್ತ್ರದ ಮೂಲಕ 8ನೇ ವಿಶ್ವದಾಖಲೆ ನಿರ್ಮಿಸಿದ ಯೋಗ ಸಾಧಕಿ ತನುಶ್ರೀ ಪಿತ್ರೋಡಿ

-

- Advertisment -spot_img
ಉಡುಪಿ: ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರು ನಾಟ್ಯ ಶಾಸ್ತ್ರದಲ್ಲಿ 8ನೇ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನಾಟ್ಯಶಾಸ್ತ್ರದಲ್ಲಿ ವಿವರಿಸಿದ 108 ಕರಣಗಳ ಭಂಗಿಗಳನ್ನು 3 ನಿಮಿಷ 29 ಸೆಕೆಂಡ್‌ಸ್‌‌ನಲ್ಲಿ ಪ್ರಸ್ತುತಪಡಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಯಾದರು.
ಕಾಲು, ಕೈಗಳ ಚಲನೆ, ದೇಹದ ಭಂಗಿ ಈ ಮೂರು ಅಂಶಗಳ ಸಂಯೋಜನೆ 108 ಕರಣಗಳಾಗಿವೆ. ಭಗವಂತ ಶಿವ ಕರಣಗಳ ಮೂಲ ಎನ್ನಲಾಗುತ್ತದೆ. ಪ್ರತೀ ಕರಣವನ್ನು ಚಲನೆಯಂತೆ ಅಭ್ಯಾಸ ಮಾಡಲಾಗಿದ್ದು, ಇದು ಕೇವಲ ಭಂಗಿಯಲ್ಲ.
108 ನಾಟ್ಯಶಾಸ್ತ್ರದಲ್ಲಿ ಇದನ್ನು ಕ್ರೋಢಿಕರಿಸಲಾಗಿದೆ ಎಂದು ತನುಶ್ರೀ ಅವರ ಗುರು ಶ್ರೀರಾಮಕೃಷ್ಣ ಕೊಡಂಚ ತಿಳಿಸಿದರು.
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಪ್ರತಿನಿಧಿ ಗೌರವ್ ಮಿತ್ತಲ್ ಅವರು ದಾಖಲೆಯ ಪ್ರಮಾಣಪತ್ರವನ್ನು ತನುಶ್ರೀ ಅವರಿಗೆ ಹಸ್ತಾಂತರಿಸಿದರು. ಈ ಮೂಲಕ ಸೈಂಟ್ ಸಿಸಿಲಿ ಪ್ರೌಢಶಾಲೆಯ ವಿದ್ಯಾರ್ಥಿನಿ ತನುಶ್ರೀ ಪಿತ್ರೋಡಿ ಅವರು 8ನೇ ವಿಶ್ವ ದಾಖಲೆಯನ್ನು ಮುಡಿಗೇರಿಸಿಕೊಂಡಿದ್ದು, ಒಂದು ಗಿನ್ನೆಸ್ ರೆಕಾರ್ಡ್, 7 ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತಮ್ಮ ಸಾಧನೆಯನ್ನು ಮಾಡಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 − 1 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you