ಭರವಸೆಯ ಬೆಳಕುತನುಶ್ರೀ ಸಾಧನೆಯ ಹಿಂದಿರುವ ಶಕ್ತಿ ಆಕೆಯ ಮುಗ್ಧತೆ-ಉದ್ಯಾವರ ನಾಗೇಶ್ ಕುಮಾರ್

ತನುಶ್ರೀ ಸಾಧನೆಯ ಹಿಂದಿರುವ ಶಕ್ತಿ ಆಕೆಯ ಮುಗ್ಧತೆ-ಉದ್ಯಾವರ ನಾಗೇಶ್ ಕುಮಾರ್

-

- Advertisment -spot_img
ಯಾವುದೇ ಮಕ್ಕಳು ಯಾವುದಾದರೂ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದಾಗ ಅವರಿಗೆ ಸಿಗುವ ಹೊಗಳಿಕೆ, ಪ್ರಚಾರ ಇವುಗಳನ್ನು ತಲೆಗೇರಿಸಿಕೊಂಡು ತಲೆ ಭುಜದ ಮೇಲಿರದೆ ಕಾಲು ನೆಲದ ಮೇಲಿರದೆ ಅಹಂನಿಂದ ಬೀಗುವುದನ್ನು ನೋಡಿದ್ದೇನೆ.
ಆದರೆ ಯೋಗದಲ್ಲಿ ಏಳು ವಿಶ್ವ ದಾಖಲೆಯನ್ನು ಬರೆದ ಕು| ತನುಶ್ರೀ ಪಿತ್ರೋಡಿ ಪ್ರಥಮ ದಾಖಲೆಯನ್ನು ಬರೆದ ಹೊತ್ತಿನ ಮುಗ್ಧತೆಯನ್ನೇ ಉಳಿಸಿಕೊಂಡ ಕಾರಣ ಇವತ್ತು ಆಕೆ ಒಂದು ಗಿನ್ನೀಸ್ ಬುಕ್ ಆಫ್ ರೆಕಾರ್ಡ್ ಮತ್ತು ಆರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ನಲ್ಲಿ ತನ್ನ ಹೆಸರನ್ನು ಸೇರಿಸಲು ಸಾಧ್ಯವಾಯಿತು. ಹಾಗಾಗಿ  ಅವೆಲ್ಲಾ ಸಾಧನೆಗಳಿಗೆ ಆಕೆಯ ಮುಗ್ದತೆ, ಅಹಂಕಾರ ರಹಿತ ನಡೆ ಮುಖ್ಯ ಕಾರಣ. ತನುಶ್ರೀಯ ದೊಡ್ಡ ಶಕ್ತಿ ಆಕೆಯ ತಂದೆ ಉದಯ ಕುಮಾರ್ ಮತ್ತು ತಾಯಿ ಸಂಧ್ಯಾ ಉದಯ್. ಮಗಳ ಸಾಧನೆಯ ಹಿಂದೆ ಅವರ ಪ್ರೋತ್ಸಾಹ ಮಕ್ಕಳಿಗೆ ತಂದೆ ತಾಯಿ ಕೊಡುವ ಕೇವಲ ಪ್ರೋತ್ಸಾಹದ ಹಾಗೆ ಇರದೆ ಅದೊಂದು ವೃತದಂತೆ, ನೇಮದಂತೆ ಇದೆ. ಅವರ ಈ ಬದ್ದತೆಯೇ ತನುಶ್ರೀಯನ್ನು ಬೆಳೆಸಿದೆ. ಈ ಮಗು ಯೋಗ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಲಿ ಎಂದು ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್‌ರವರು ಒಂದು ಗಿನ್ನೀಸ್ ಬುಕ್ ಆಫ್ ರೆಕಾರ್ಡ್ ಸಹಿತ ಏಳು ಗೋಲ್ಡನ್ ಬುಕ್ ರೆಕಾರ್ಡ್ನಲ್ಲಿ ಯೋಗದಲ್ಲಿ ಹೆಸರು ದಾಖಲಿಸಿದ ಚಿನ್ನದ ಹುಡುಗಿ ಕು| ತನುಶ್ರೀ ಪಿತ್ರೋಡಿಯವರನ್ನು ಅವರ ಮನೆಯಲ್ಲಿ ಉದ್ಯಾವರ ಮುಸ್ಲಿಂ ಯುನಿಟಿ ಯು.ಎ.ಇ. ಪರವಾಗಿ ಸಂಮಾನಿಸಿ ನುಡಿದರು.
ಅವರು ಮುಂದುವರಿಯುತ್ತಾ ಈ ಕಾಲಘಟ್ಟದಲ್ಲಿ ಈ ಸಂಮಾನ ತುಂಬಾ ಮಹತ್ವವನ್ನು ಪಡೆಯುತ್ತಿದೆ. ಒಂದು ಮುಸ್ಲಿಂ ಸಂಘಟನೆ ಈ ಸಂಮಾನವನ್ನು ಹಮ್ಮಿಕೊಂಡು ಧರ್ಮ ಸಾಮರಸ್ಯಕ್ಕೊಂದು ಹೊಸ ಭಾಷ್ಯವನ್ನು ಬರೆದಂತಾಗಿದೆ ಎಂದರು.
ಹತ್ತು ಸಾವಿರ ರೂಪಾಯಿ ನಗದಿನ ಸಹಿತ, ಶಾಲು, ಪುಷ್ಪಗುಚ್ಚ, ಹಣ್ಣು ಹಂಪಲು ಸಹಿತ ತನುಶ್ರೀಯನ್ನು ಸಂಮಾನಿಸಲಾಯಿತು.
ಉದ್ಯಾವರ ಮುಸ್ಲಿಂ ಯುನಿಟಿ ಯು.ಎ.ಇ. ಅಧ್ಯಕ್ಷ ಶ್ರೀ ಖಾಲಿಖ್ ಹೈದರ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ರಿಯಾಝ್ ಪಳ್ಳಿಯವರು ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು. ವೇದಿಕೆಯಲ್ಲಿ ಉದ್ಯಾವರ ಜಾಮಿಯಾ ಮಸೀದಿ ಅಧ್ಯಕ್ಷರಾದ ಶ್ರೀ ಅಬ್ದುಲ್ ಸತ್ತಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉದ್ಯಾವರ ಮುಸ್ಲಿಂ ಯುನಿಟಿ ಯು.ಎ.ಇ. ಸಲಹೆಗಾರರಾದ ಶ್ರೀ ಫಿರೋಝ್ ಶರೀಫ್, ಸದಸ್ಯರಾದ ಶ್ರೀ ಸಲಾಂ ಮಜೀದ್, ಶ್ರೀ ಸತ್ತಾರ್ ಗೌಸ್ , ಶ್ರೀ ನಯಾಜ್ ಪಳ್ಳಿ, ಶ್ರೀ ನಾಸಿರ್ ಇಬ್ರಾಹಿಂ, ಜಾಮಿಯಾ ಮಸೀದಿ ಸದಸ್ಯರಾದ ಶ್ರೀ ಇಮ್ತಿಯಾಝ್ ಬಾಷಾ, ಶ್ರೀ ಇಸ್ತಿಯಾಕ್ ಲತೀಫ್, ಆಯ್ಮಾನ್ ಖಾಲಿಖ್, ಶ್ರೀ ಉಮೈಝ್ ಖಾಲಿಖ್, ಮಹಮ್ಮದ್ ಆಸಿಫ್, ಪಿತ್ರೋಡಿ ಶ್ರೀ ವೆಂಕಟರಮಣ ಭಜನಾ ಮಂಡಳಿ ಅಧ್ಯಕ್ಷರಾದ ಶ್ರೀ ಗಂಗಾಧರ, ತನುಶ್ರೀ ಹೆತ್ತವರಾದ ಶ್ರೀ ಉದಯ ಕುಮಾರ್, ಶ್ರೀಮತಿ ಸಂಧ್ಯಾ ಉದಯ್, ದೊಡ್ಡಪ್ಪ ವಿಜಯ ಪೂಜಾರಿ ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

18 + eleven =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you