19.7 C
London
Saturday, May 18, 2024
Homeಅಥ್ಲೆಟಿಕ್ಸ್ವಿಶ್ವ ದಾಖಲೆಯ ಕುವರಿ ತನುಶ್ರೀ ಪಿತ್ರೋಡಿಯವರ ಮುಡಿಗೆ ಸೇರಲಿದೆ ಇನ್ನೊಂದು ಹೆಮ್ಮೆಯ ಗರಿ

ವಿಶ್ವ ದಾಖಲೆಯ ಕುವರಿ ತನುಶ್ರೀ ಪಿತ್ರೋಡಿಯವರ ಮುಡಿಗೆ ಸೇರಲಿದೆ ಇನ್ನೊಂದು ಹೆಮ್ಮೆಯ ಗರಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು ಇದರ ಶತಮಾನೋತ್ಸವದ ಸವಿನೆನಪಿನೊಂದಿಗೆ  ಈಗಾಗಲೇ ಏಳು ವಿಶ್ವದಾಖಲೆಗಳನ್ನು ತಮ್ಮದಾಗಿಸಿಕೊಂದಿರುವ ನಾಟ್ಯಮಯೂರಿ ಎಂಬ ಬಿರುದಾಂಕಿತ, “ಯೋಗಶ್ರೀ” ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಯೋಗರತ್ನ ತನುಶ್ರೀ ಪಿತ್ರೋಡಿ ತಮ್ಮ ಗುರುಗಳಾದ ಶ್ರೀ ರಾಮಕೃಷ್ಣ ಕೊಡಂಚ ಇವರ ಮಾರ್ಗದರ್ಶನದಲ್ಲಿ  ಎಂಟನೆಯ ವಿಶ್ವ ದಾಖಲೆಯ ಪ್ರಯತ್ನವಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ನಾಟ್ಯ ಶಾಸ್ತ್ರದ 108 ಕರಣಗಳನ್ನು  ಪ್ರದರ್ಶಿಸಲಿದ್ದಾರೆ.
ಏಪ್ರಿಲ್ 4ರಂದು ಶ್ರೀ ನಾರಾಯಣಗುರು ಆಡಿಟೋರಿಯಂ ಬನ್ನಂಜೆ ಉಡುಪಿಯಲ್ಲಿ ಸಂಜೆ 4 ಗಂಟೆಯಿಂದ  ಈ ಕಾರ್ಯಕ್ರಮ ನೆರವೇರಲಿದೆ.
         ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತಿಗೆ ತಕ್ಕುದಾಗಿ ತನುಶ್ರೀಯವರು ತಮ್ಮ ಪ್ರತಿಭೆಯ ಮೂಲಕ ಎಲ್ಲೆಡೆ ಚಿರಪರಿಚಿತರು.ಉದಯ್ ಕುಮಾರ್ ಹಾಗೂ ಸಂದ್ಯಾ ದಂಪತಿಗಳ ಹೆಮ್ಮೆಯ ಪುತ್ರಿಯಾಗಿರುವ ತನುಶ್ರೀ ಉಡುಪಿಯ ಸೈಂಟ್ ಸಿಸಿಲಿ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಭತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಇದುವರೆಗೂ ಒಟ್ಟು 505 ಕ್ಕೂ ಹೆಚ್ಚು ನೃತ್ಯ ಪ್ರದರ್ಶನವನ್ನಿತ್ತ ಕಲಾ ಕುಸುಮ ಇವರು.ತಮ್ಮ ಯೋಗಗುರುಗಳಾದ ಹರಿರಾಜ್ ಕಿನ್ನಿಗೋಳಿ ಹಾಗೂ ಸುದರ್ಶನ್ ಕಾರ್ಕಳ ಇವರ ಮಾರ್ಗದರ್ಶನದಲ್ಲಿ  1 ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹಾಗೂ 6 ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಬರೆದಿದ್ದಾರೆ.ಡಾ.ವೀರೇಂದ್ರ ಹೆಗ್ಗಡೆಯವರಿಂದ  ‘ಯೋಗರತ್ನ ಪ್ರಶಸ್ತಿ’, ‘ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ‘, ‘ ವಿಶೇಷ ಬಾಲ ಪ್ರತಿಭೆ ಪ್ರಶಸ್ತಿ ‘, ‘ಯೋಗಶ್ರೀ ಪ್ರಶಸ್ತಿ’ ಹೀಗೆ ಹತ್ತು ಹಲವು ಪುರಸ್ಕಾರಗಳು ಇವರ ಸಾಧನೆಗೆ ಸಂದಿದೆ. ಇದುವರೆಗೂ ಹಲವಾರು ಸಂಘ ಸಂಸ್ಥೆಗಳು ಇವರ ಈ ವಿಶೇಷ ಸಾಧನೆಯನ್ನು ಗುರುತಿಸಿ ಗೌರವಿಸಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

sixteen + six =