ಸ್ಪೋರ್ಟ್ಸ್ತ್ರಿಪಲ್ ಜಂಪ್‌ನಲ್ಲಿ ಚಿನ್ನ ಗೆದ್ದ ತಾಷಾ ಸಿಕ್ವೇರಾ

ತ್ರಿಪಲ್ ಜಂಪ್‌ನಲ್ಲಿ ಚಿನ್ನ ಗೆದ್ದ ತಾಷಾ ಸಿಕ್ವೇರಾ

-

- Advertisment -spot_img

ತ್ರಿಪಲ್ ಜಂಪ್‌ನಲ್ಲಿ ಚಿನ್ನದ ಗೆಲುವು ಸಾಧಿಸಿದ ತಾಷಾ ಸಿಕ್ವೇರಾ

ಬೆಂಗಳೂರು: ಸಿಐಎಸ್‌ಸಿಇ (CISCE) ರಾಷ್ಟ್ರೀಯ ಅಥ್ಲೆಟಿಕ್ಸ್‌ ಕ್ರೀಡಾಸ್ಪರ್ಧೆಯಲ್ಲಿ ಬೆಂಗಳೂರಿನ ತಾಷಾ ಸಿಕ್ವೇರಾ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಗೆದ್ದಿದ್ದಾರೆ. ಬಾಲಕಿಯರ 17 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿಭಾಗದ ತ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ಪ್ರತಿನಿಧಿಸುವ ತಾಷಾ 10.11 ಮೀಟರ್‌ ದೂರ ಜಿಗಿದು ಪ್ರಥಮ ಸ್ಥಾನ ಪಡೆದು ಕೀರ್ತಿ ಸಾಧಿಸಿದ್ದಾರೆ.

ಈ ಸ್ಪರ್ಧೆ ಶ್ರೀ ಜಯಪ್ರಕಾಶ್‌ ನಾರಾಯಣ ರಾಷ್ಟ್ರೀಯ ಯುವ ಕ್ರೀಡಾ ತರಬೇತಿ ಕೇಂದ್ರ, ವಿದ್ಯಾನಗರ, ಬೆಂಗಳೂರಿನಲ್ಲಿ ನಡೆದಿತ್ತು. ತಾಷಾ ಅವರ ಈ ಸಾಧನೆಯೊಂದಿಗೆ ಅವರು ಎಸ್‌ಜಿಎಫ್‌ಐ (School Games Federation of India) ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

ತಾಷಾ ಸಿಕ್ವೇರಾ ಅವರು ಹೆಬ್ಬಾಳದ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ತಾಷಾ ಅವರ ತಂದೆ ಜಾನ್ ರೋಹನ್ ಸಿಕ್ವೇರಾ ಮತ್ತು ತಾಯಿ ಅರ್ಚನಾ ಕಬೀಲನ್. ತಾಷಾ ಅವರಿಗೆ ಕೃಷ್ಣಮೂರ್ತಿ (ಬೆಂಗಳೂರು ಸ್ಪೋರ್ಟ್ಸ್ ಕ್ಲಬ್) ಅವರು ತರಬೇತಿ ನೀಡುತ್ತಿದ್ದಾರೆ.

ತಾಷಾ ಸಿಕ್ವೇರಾ ಕರ್ನಾಟಕ ತಂಡದ ಪರ ರಾಜ್ಯ ಕ್ರೀಡಾಕೂಟದಲ್ಲಿ ‘ಕಾಗೋ’ ತಂಡದಲ್ಲಿ ಭಾಗವಹಿಸಿ ಅಲ್ಲಿ ಸಹ ಚಿನ್ನದ ಪದಕ ಗೆದ್ದಿದ್ದರು. ರಾಜ್ಯ ಮಟ್ಟದಲ್ಲಿ ತೋರಿದ ಅದ್ಭುತ ಪ್ರದರ್ಶನದಿಂದಲೇ ಅವರು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದರು ಮತ್ತು ಇದೀಗ ರಾಷ್ಟ್ರ ಮಟ್ಟದಲ್ಲಿ ತನ್ನ ಪ್ರಭಾವ ಬೀರಿದ್ದಾರೆ.

ಈ ಸಾಧನೆ ತಾಷಾ ಅವರ ಪರಿಶ್ರಮ ಮತ್ತು ಶಿಸ್ತುಬದ್ಧ ತರಬೇತಿಗೆ ಸಾಕ್ಷಿಯಾಗಿದ್ದು, ಕ್ರೀಡಾಭಿಮಾನಿಗಳಿಂದ ಪ್ರಶಂಸೆಗೆ ಪಾತ್ರವಾಗಿದೆ. ಅವರ ಈ ಸಾಧನೆ ಕರ್ನಾಟಕ ತಂಡಕ್ಕೆ ಹೆಮ್ಮೆ ತಂದಿದ್ದು, ಕ್ರೀಡಾಭಿಮಾನಿಗಳಿಂದ ಅಭಿನಂದನೆಗಳು ಹರಿದು ಬರುತ್ತಿವೆ.

 

LEAVE A REPLY

Please enter your comment!
Please enter your name here

five × five =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you