ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕುಂದಾಪುರ-ಊರಿನ ಪ್ರತಿಭೆಗಳಿಗೆ ಟಿ.ಸಿ.ಎ ಅವಕಾಶ ಕಲ್ಪಿಸಿದೆ- ಜಿ.ಎಮ್.ಗೊಂಡಾ

ಕುಂದಾಪುರ-ಊರಿನ ಪ್ರತಿಭೆಗಳಿಗೆ ಟಿ.ಸಿ.ಎ ಅವಕಾಶ ಕಲ್ಪಿಸಿದೆ- ಜಿ.ಎಮ್.ಗೊಂಡಾ

-

- Advertisment -spot_img
“ಕ್ರೀಡೆಯಲ್ಲಿ ವಿಧೇಯತೆ,ಕ್ರೀಡಾಸ್ಪೂರ್ತಿ,ಸಮಯ ಪರಿಪಾಲನೆಗೆ ಮಹತ್ವ ನೀಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ‌.ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಊರಿನ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದೆ” ಎಂದು ಕುಂದಾಪುರ ಬಿ.ಸಿ‌.ಸಿ ಪಿ.ಯು ಕಾಲೇಜಿನ  ಪ್ರಾಂಶುಪಾಲರಾದ ಜಿ.ಎಮ್.ಗೊಂಡಾ ಹೇಳಿದರು.
ಇವರು ಶನಿವಾರ ಬೆಳಿಗ್ಗೆ ಇಲ್ಲಿನ ಗಾಂಧಿಮೈದಾನದಲ್ಲಿ ಉಡುಪಿ ಜಿಲ್ಲೆ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆಯುತ್ತಿರುವ 3 ನೇ ದಿನದ ಕುಂದಾಪುರ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಪ್ರಾಸ್ತಾವಿಕ ಭಾಷಣಗೈದ ಟಿ.ಸಿ.ಎ ಅಧ್ಯಕ್ಷರಾದ ಗೌತಮ್ ಶೆಟ್ಟಿ “ಯುವ ಆಟಗಾರರು ತಮ್ಮೂರಿನ ತಂಡವನ್ನೇ ಪ್ರತಿನಿಧಿಸಬೇಕು,ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆಯ ಹೆಚ್ಚಿನ ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ.ಈ ಎಲ್ಲಾ ವಿಚಾರಗಳನ್ನು ಮನಗಂಡು ಟಿ‌.ಸಿ.ಎ ಉಡುಪಿ ಜಿಲ್ಲೆಯ ಸುಮಾರು 1000 ಕ್ಕೂ ಹೆಚ್ಚಿನ ಆಟಗಾರರಿಗೆ ಅವಕಾಶ ಕಲ್ಪಿಸಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಟಿ.ಸಿ.ಎ ಪದಾಧಿಕಾರಿಗಳಾದ ರಮೇಶ್ ಕುಂದರ್ ” ಟಿ‌‌.ಸಿ.ಎ  ಅಳಿವಿನಂಚಿನಲ್ಲಿರುವ ಟೆನಿಸ್ಬಾಲ್ ಕ್ರಿಕೆಟ್ ಗೆ ಪುನರುಜ್ಜೀವನ ಕಲ್ಪಿಸುವಲ್ಲಿ ಯಶಸ್ಸು ಸಾಧಿಸಿದ್ದಾರೆ.
ಯುವ ಆಟಗಾರರು ಟಿ‌.ಸಿ.ಎ ಯೋಜನೆಗೆ ಸಂಪೂರ್ಣ ಬೆಂಬಲ ನೀಡಿ ಯಶಸ್ವಿಗೊಳಿಸಬೇಕೆಂದರು.”
ಇಂದು ಬೆಳಿಗ್ಗೆ ಮುಖ್ಯ ಅತಿಥಿಗಳಾಗಿ ಕುಂದಾಪುರ ಬಿಸಿಸಿ ಪಿ.ಯು ಕಾಲೇಜಿನ ಪ್ರಾಂಶುಪಾಲ ಜಿ.ಎಮ್.ಗೊಂಡಾ,ಟಿ‌ಸಿ‌ಎ ನಿರ್ದೇಶಕರಾದ ಯಾದವ್ ನಾಯಕ್ ಕೆಮ್ಮಣ್ಣು, ಸಿದ್ಧಿವಿನಾಯಕ ಹಾರ್ಡ್ ವೇರ್ ನ ಸಂಪತ್ ಕುಮಾರ್ ಶೆಟ್ಟಿ,ಟಿ.ಸಿ.ಎ ಉಪಾಧ್ಯಕ್ಷರಾದ ಸತೀಶ್ ಕೋಟ್ಯಾನ್, ನಾರಾಯಣ್ ಶೆಟ್ಟಿ ಕೋಟೇಶ್ವರ,ಟಿಸಿಎ ನಿರ್ದೇಶಕರಾದ ದಿನೇಶ್ ಗಾಣಿಗ ಬೈಂದೂರು,ಸುರೇಶ್ ಆಚಾರ್ ಕುಂದಾಪುರ,ರಮೇಶ್ ಕುಂದರ್ ಕೋಟ,ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,ರಂಜಿತ್ ಶೆಟ್ಟಿ,
ಪಂದ್ಯಾಟದ ಆಯೋಜಕರಾದ ಕೆ.ಪಿ ಸತೀಶ್,ಮನೋಜ್ ನಾಯರ್ ಉಪಸ್ಥಿತರಿದ್ದರು.
*ಕ್ವಾಟರ್ ಫೈನಲ್ ಪ್ರವೇಶಿಸಿದ ತಂಡಗಳು*
 ಶುಕ್ರವಾರ ಬಲಿಷ್ಠ ತಂಡಗಳ ರೋಚಕ ಹೋರಾಟಗಳ ಬಳಿಕ ಜಾನ್ಸನ್ ಕುಂದಾಪುರ, ಜೆ.ಸಿ.ಸಿ ಜಾಲಾಡಿ,ಅಂಶು ಕೋಟೇಶ್ವರ ಮತ್ತು ಮಹಾದೇವಿ ಮಲ್ಯಾಡಿ ತಂಡಗಳ ಕ್ವಾರ್ಟರ್ ಫೈನಲ್ ಹಂತಕ್ಕೆ ಲಗ್ಗೆ ಇಟ್ಟಿದೆ.
M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳುತ್ತಿದ್ದು,ವೀಕ್ಷಕ ವಿವರಣೆಕಾರರಾಗಿ ಅಜಯ್ ರಾಜ್ ಮಂಗಳೂರು, ನಾಸಿರ್ ಕೋಟೇಶ್ವರ, ನಿತೀಶ್ ಕೋಟೇಶ್ವರ ಭಾಗವಹಿಸಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

10 + 5 =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you