Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಯಶಸ್ಸಿನ ಹಾದಿಯಲ್ಲಿ T.C.A ಉಡುಪಿ ಜಿಲ್ಲೆ ಪ್ರಯತ್ನ-ದಶಕಗಳ ಬಳಿಕ ಮರುಕಳಿಸಲಿದೆ ಟೆನಿಸ್ಬಾಲ್ ಕ್ರಿಕೆಟ್ ಗತಕಾಲದ ವೈಭವ!

ಉಡುಪಿ ಜಿಲ್ಲೆಯ ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಸಮಾನ‌ ಮನಸ್ಕ ಹಿರಿಯ ಆಟಗಾರರ ಒಗ್ಗೂಡುವಿಕೆಯಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್
ಅಸೋಸಿಯೇಷನ್ ಇವರ ಮೊದಲ ಯೋಜನೆಯಂತೆ ತಾಲೂಕು ಮಟ್ಟದ ಪ್ರತಿಭೆಗಳನ್ನು ಗುರುತಿಸುವ ಸದುದ್ದೇಶ ಡಿಸೆಂಬರ್ ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ.
ಉಡುಪಿ ಜಿಲ್ಲೆಯಾದ್ಯಂತ 7 ತಾಲೂಕುಗಳಲ್ಲಿ  ಆಟಗಾರರ ನೋಂದಣಿ ಪ್ರಕ್ರಿಯೆಗೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದ್ದು,1000 ಕ್ಕೂ ಹೆಚ್ಚಿನ ಆಟಗಾರರು ತಮ್ಮ‌ ಹೆಸರನ್ನು ನೋಂದಾಯಿಸಿಕೊಂಡಿದ್ದರು.
2 ನೇ ಅತಿ ಹೆಚ್ಚು ಆಟಗಾರರ ನೋದಣಿ(223)ಯಲ್ಲಿ ಭಾಗವಹಿಸಿದ ಕುಂದಾಪುರ ತಾಲೂಕಿನಲ್ಲಿ ಮೊದಲ ಕ್ರಿಕೆಟ್ ಪಂದ್ಯಾಟ,ಡಿಸೆಂಬರ್ 18 ಮತ್ತು 19 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.
90 ರ ದಶಕದಲ್ಲಿ ಇತಿಹಾಸ ಬರೆದ ಕುಂದಾಪುರದ ಪ್ರಸಿದ್ಧ ತಂಡಗಳಾದ ಚಕ್ರವರ್ತಿ,ಟೊರ್ಪೆಡೋಸ್, ಮದೀನಾ,
ಜಾನ್ಸನ್,ಚಾಲೆಂಜ್,ಮಯೂರ,ಗೋಲ್ಡನ್ ಮಿಲ್ಲರ್,ಕೀಳೇಶ್ವರಿ,ಸ್ವಾಮಿ ಗಂಗೊಳ್ಳಿ,ರಾಯಲ್ ಗಂಗೊಳ್ಳಿ,ಅಂಶು ಕೋಟೇಶ್ವರ,ಮಿತೃವೃಂದ,ಲಕ್ಕಿಸ್ಟಾರ್ ಕೋಡಿ,ಮಲ್ಯಾಡಿ ಫ್ರೆಂಡ್ಸ್, ಜ್ವಾಲಿ ಅಂಕದಕಟ್ಟೆ,
ಸಮುದಾಯ ತಲ್ಲೂರು ಈ 16 ತಂಡಗಳು ಮತ್ತೆ ಅಖಾಡಕ್ಕಿಳಿಯಲಿದ್ದು,ಟೆನಿಸ್ಬಾಲ್ ಕ್ರಿಕೆಟ್ ನ ಗತಕಾಲದ ವೈಭವ ಮತ್ತೆ ಮರುಕಳಿಸಲಿದೆ ಎಂದು ಉಡುಪಿ ಜಿಲ್ಲೆ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಟೊರ್ಪೆಡೋಸ್ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ತಿಳಿಸಿದ್ದಾರೆ.
ಪಂದ್ಯಾವಳಿಯ ನೇರ ಪ್ರಸಾರ M9 ಸ್ಪೋರ್ಟ್ಸ್ ಬಿತ್ತರಿಸಲಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

one × three =