ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಶಿಕ್ಷಣದ ಜೊತೆಗೆ ವೃತ್ತಿಪರ ಆಟದಲ್ಲಿ ತೊಡಗಿಸಿಕೊಳ್ಳಲು ಟಿ.ಸಿ.ಎ ಉಡುಪಿ ಶಾಲಾ-ಕಾಲೇಜು ಮಟ್ಟದ...

ಶಿಕ್ಷಣದ ಜೊತೆಗೆ ವೃತ್ತಿಪರ ಆಟದಲ್ಲಿ ತೊಡಗಿಸಿಕೊಳ್ಳಲು ಟಿ.ಸಿ.ಎ ಉಡುಪಿ ಶಾಲಾ-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜನೆ

-

- Advertisment -spot_img
ಉಡುಪಿ-ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಜಿಲ್ಲೆ ಇವರು ಶಾಲಾ ಕಾಲೇಜು ಮಕ್ಕಳಿಗಾಗಿ ನಿಗದಿತ 10  ಓವರುಗಳ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟನ್ನು ಹಮ್ಮಿಕೊಂಡಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಪದವಿಪೂರ್ವ ಕಾಲೇಜು ವಿಭಾಗ ಹಾಗೂ ಪದವಿ ಕಾಲೇಜು ವಿಭಾಗ ಈ ರೀತಿ 4 ವಿಭಾಗಗಳಲ್ಲಿ ಪಂದ್ಯಾಕೂಟವು ನಡೆಯಲಿದೆ. ಉಡುಪಿ ಜಿಲ್ಲೆಯ ಶಾಲಾ ಕಾಲೇಜು ತಂಡಗಳಿಗೆ ಇದರಲ್ಲಿ ಸ್ಪರ್ಧಿಸುವ ಅವಕಾಶವನ್ನು ನೀಡಲಾಗಿದೆ.  ಅಕ್ಟೋಬರ್ 2023 ರಲ್ಲಿ ಉಡುಪಿ ಜಿಲ್ಲೆಯ ಬೇರೆ ಬೇರೆ ತಾಲೂಕ್ ಮೈದಾನಗಳಲ್ಲಿ ಈ ಟೂರ್ನಮೆಂಟ್ ನಡೆಯಲಿರುವುದು. ಭಾಗವಹಿಸುವ ತಂಡಗಳಿಗೆ ಸಂಪೂರ್ಣವಾಗಿ ಉಚಿತ ಪ್ರವೇಶ ಮತ್ತು ಯೂಟ್ಯೂಬ್ ಲೈವ್ ಕೂಡಾ ಇರಲಿದೆ.
ಟಿ. ಸಿ. ಎ ಉಡುಪಿ ಶಾಲಾ -ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾವಳಿ ಇದು ಉದಯೋನ್ಮುಖ ಕ್ರಿಕೆಟಿಗರಿಗೆ ಕ್ರಿಕೆಟ್ ಆಡಲು ಮತ್ತು ವೃತ್ತಿಪರ ಕ್ರಿಕೆಟ್‌ಗೆ ತಮ್ಮ ಮೊದಲ ಹೆಜ್ಜೆಗಳನ್ನು ಇಡಲು ವೇದಿಕೆಯನ್ನು ಒದಗಿಸುತ್ತದೆ. ಇದು  ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಸ್ಟ್ಯಾಂಡರ್ಡ್ ಕ್ರಿಕೆಟ್ ಪಂದ್ಯಾವಳಿಯಾಗಿದೆ. ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಜರಗುವ ಈ   ಪಂದ್ಯಾವಳಿಯು  ಹೆಚ್ಚಿನ ಪ್ರಮುಖ ಶಾಲಾ ಕಾಲೇಜು ತಂಡಗಳ ಅತ್ಯುತ್ತಮ ಯುವ ಪ್ರತಿಭೆಗಳನ್ನು ಒಳಗೊಂಡಿರುತ್ತದೆ.   ಟಿ. ಸಿ. ಎ  ನಡೆಸುವ T10 ಪಂದ್ಯಾವಳಿಯ ಸ್ವರೂಪವು ಯುವ ಪ್ರತಿಭೆಗಳಿಗೆ ಒಂದೇ ವೇದಿಕೆಯಲ್ಲಿ ಆಡಲು ಮತ್ತು  ಶಿಕ್ಷಣದ  ಜೊತೆಗೆ  ವೃತ್ತಿಪರ ಕ್ರಿಕೆಟ್‌ಗೆ ದಾರಿ ಮಾಡಿಕೊಡಲು ವೇದಿಕೆಯನ್ನು ಒದಗಿಸುತ್ತದೆ.
ಟಿ. ಸಿ. ಎ ಉಡುಪಿ  ಆಯೋಜನೆಯ ಈ ಟೂರ್ನಮೆಂಟ್ ಗ್ರಾಸ್ ರೂಟ್ ಲೆವೆಲ್ ನಲ್ಲಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಪತ್ತೆಹಚ್ಚಲು ಮತ್ತು ಅವರ ನಿಜವಾದ ಸಾಮರ್ಥ್ಯವನ್ನು ಹೆಚ್ಚಿಸಲು ಅವರಿಗೆ ನಿರ್ದೇಶನವನ್ನು ನೀಡುವ ಪರಿಣಾಮಕಾರಿ ಆರಂಭದ ಹಂತ ಆಗಿದೆ  ಎಂದು ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ   ಗೌತಮ್ ಶೆಟ್ಟಿ ಹೇಳಿದ್ದಾರೆ.
ಯುವ ಕ್ರಿಕೆಟಿಗರಿಗೆ ವೃತ್ತಿಪರ ಆಟದಲ್ಲಿ ತೊಡಗಿಸಿಕೊಳ್ಳಲು  ಈ ಕ್ರಿಕೆಟ್ ಟೂರ್ನಮೆಂಟ್  ಪರಿಪೂರ್ಣ ಮೆಟ್ಟಿಲು; ಇದು ನಾಳಿನ ಕ್ರಿಕೆಟ್ ತಾರೆಗಳನ್ನು ನಿರ್ಮಿಸುವ ಪಂದ್ಯಾವಳಿಯಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 × 3 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you