ಕ್ರಿಕೆಟ್ಯುವಕರನ್ನು ಕ್ರೀಡೆಯತ್ತ ಉತ್ತೇಜಿಸುವ ಸಲುವಾಗಿ ಟೀಮ್ ಬಜ್ಪೆ ಲೆಜೆಂಡ್ಸ್ ಆಶ್ರಯದಲ್ಲಿ B.P.L-2023

ಯುವಕರನ್ನು ಕ್ರೀಡೆಯತ್ತ ಉತ್ತೇಜಿಸುವ ಸಲುವಾಗಿ ಟೀಮ್ ಬಜ್ಪೆ ಲೆಜೆಂಡ್ಸ್ ಆಶ್ರಯದಲ್ಲಿ B.P.L-2023

-

- Advertisment -spot_img
ಮಂಗಳೂರು-ಟೀಮ್ ಬಜ್ಪೆ ಲೆಜೆಂಡ್ಸ್ ಇವರ ಆಶ್ರಯದಲ್ಲಿ ಯುವಜನತೆಯಲ್ಲಿ ಮಾದಕ ವ್ಯಸನದ ಬಗ್ಗೆ ಜಾಗ್ರತಿ ಮತ್ತು ಪರಸ್ಪರ ಸೌಹಾರ್ದತೆ ಹಾಗೂ ಕಿರಿಯ ಕಿರಿಯ ಆಟಗಾರರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಸಲುವಾಗಿ ಮೊದಲ ಬಾರಿಗೆ ಬಜಪೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿದ್ದಾರೆ.
ಬಜ್ಪೆಯಲ್ಲಿ ನಡೆಯುವ ಬಿಪಿಎಲ್ ಚಾಂಪಿಯನ್ಸ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಹೊನಲು ಬೆಳಕಿನ ಪಂದ್ಯಾಕೂಟವಾಗಿದ್ದು ನವೆಂಬರ್ 17, 18 ಮತ್ತು 19 ರಂದು ನಡೆಯಲಿದ್ದು, 40 ವರ್ಷ ಮೇಲ್ಪಟ್ಟ ಹಿರಿಯರಿಗೆ ಅಂಡರ್ ಆರ್ಮ್ ಮಾದರಿ ಹಾಗೂ 15 ವರ್ಷಕ್ಕಿಂತ ಕಿರಿಯರಿಗೆ  ಓವರ್ ಆರ್ಮ್ ಪಂದ್ಯಾ ಕೂಟ  ಹೊನಲು ಬೆಳಕಿನಲ್ಲಿ ನಡೆಯಲಿದೆ. ವಿಜೇತರಿಗೆ ಆಕರ್ಷಕ ‌ನಗದು ಬಹುಮಾನಗಳ ಜೊತೆ  ಟ್ರೋಫಿಗಳನ್ನು ನೀಡಿ ಗೌರವಿಸಲಾಗುವುದು.
ನವೆಂಬರ್ 17 ಶುಕ್ರವಾರ ಸಂಜೆ  4.30 ಗಂಟೆಗೆ ಸರಿಯಾಗಿ ಅದ್ಧೂರಿಯ ಉದ್ಘಾಟನಾ ಸಮಾರಂಭ ನಡೆಯಲಿದೆ.ಬಜ್ಪೆ,ಸುಂಕದಕಟ್ಟೆ,ಭಟ್ರಕೆರೆ,ಅಡ್ಯಪಾಡಿ,
ಪೊರ್ಕೋಡಿ,ಕರಂಬಾರ್,ಶಾಂತಿಗುಡ್ಡೆ,ಪೆರ್ಮುದೆ,
ಕೊಂಚಾರ್,ಸೌಹಾರ್ದ ನಗರ ಇಲ್ಲಿಯ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.ಆಯೋಜಕರ ಪ್ರಕಾರ, ಈ ಪಂದ್ಯಾವಳಿಯ ಉದ್ದೇಶವು ಯುವಕರನ್ನು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು. ಈ ಸಂದರ್ಭದಲ್ಲಿ ಮಾತನಾಡಿದ ಆಸಿಫ್ ಬಜ್ಪೆ  ಮತ್ತು ಜುಬೇರ್ ಬಜ್ಪೆ  “ಪ್ರಸ್ತುತ ದಿನಗಳಲ್ಲಿ ನಮ್ಮ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗಿದ್ದಾರೆ. ಯುವಕರು ತಮ್ಮನ್ನು ತಾವು ಬ್ಯುಸಿ ಮತ್ತು ಫಿಟ್ ಆಗಿರಲು ಕ್ರೀಡಾ ಚಟುವಟಿಕೆಗಳಲ್ಲಿ ನಿರತರಾಗಿರಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮ ಯುವಕರನ್ನು ಕ್ರೀಡಾ ಚಟುವಟಿಕೆಗಳಲ್ಲಿ ನಿರತರನ್ನಾಗಿಸುವುದು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ  ಉದ್ದೇಶ ಹಾಗೂ ಈ ಪಂದ್ಯಾವಳಿಯಲ್ಲಿ ಸಂಗ್ರಹವಾದ ಹಣವನ್ನು ಬಡಕುಟುಂಬಗಳಿಗೆ ನೀಡುವ ಉದ್ದೇಶವು ಕೂಡ  ಇದೆ.
ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಮತ್ತು ವಿಶೇಷವಾದ ಫುಡ್ ಕೋರ್ಟ್ ಕ್ರೀಡಾ ಪ್ರೇಕ್ಷಕರಿಗೆ ರಸದೌತಣವನ್ನು ನೀಡಲಿದೆ ಎಂದರು.”
ಹೆಚ್ಚಿನ ವಿವರಗಳಿಗಾಗಿ ಹಕೀಮ್-9844135947,
ಅಖ್ತರ್-9986754468,ನೌಶಾದ್-8867222095,ಕೆ.ಹೆಚ್‌.ರಹೀಮ್-9353319205 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಪಂದ್ಯಾ ಕೂಟದ ನೇರಪ್ರಸಾರ ಸ್ಟಾರ್ ವರ್ಟೆಕ್ಸ್-Sportskannadatv ಯೂಟ್ಯೂಬ್ ಲೈವ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಪಂದ್ಯಾಟದ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಸ್ಪೋರ್ಟ್ಸ್ ಕನ್ನಡ ಇತ್ತೀಚೆಗೆ ನಡೆಸಿದ ಟೀಮ್ ಬಜ್ಪೆ ಲೆಜೆಂಡ್ಸ್ ಸಂದರ್ಶನ ವೀಕ್ಷಿಸಲು Sportskannadatv ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಹಾಗೂ ಶೇರ್ ಮಾಡಿ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × two =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you