ಕ್ರಿಕೆಟ್ವೆಸ್ಟ್ ಇಂಡೀಸ್ ವಿರುದ್ಧ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡುವ ಗುರಿಯೊಂದಿಗೆ ಟೀಮ್‌ ಇಂಡಿಯಾ...

ವೆಸ್ಟ್ ಇಂಡೀಸ್ ವಿರುದ್ಧ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡುವ ಗುರಿಯೊಂದಿಗೆ ಟೀಮ್‌ ಇಂಡಿಯಾ ಮೈದಾನಕ್ಕಿಳಿಯಲು ಸಜ್ಜು

-

- Advertisment -spot_img

ವೆಸ್ಟ್ ಇಂಡೀಸ್ ವಿರುದ್ಧ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡುವ ಗುರಿಯೊಂದಿಗೆ ಟೀಮ್‌ ಇಂಡಿಯಾ ಮೈದಾನಕ್ಕಿಳಿಯಲು ಸಜ್ಜು

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಟೀಮ್ ಇಂಡಿಯಾ ಹೊಂದಿದೆ. ಸರಣಿಯ ಎರಡನೇ ಮತ್ತು ಅಂತಿಮ ಪಂದ್ಯ ಶುಕ್ರವಾರದಿಂದ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಶುಭಮನ್ ಗಿಲ್ ತಂಡಕ್ಕೆ ಮೊದಲ ಟೆಸ್ಟ್ ಗೆಲ್ಲಲು ಕೇವಲ ಮೂರು ದಿನಗಳು ಸಾಕಾಯಿತು.

ಮೊದಲ ಟೆಸ್ಟ್‌ನಲ್ಲಿ ಭಾರತವು ಅಹಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇನ್ನಿಂಗ್ಸ್ ಹಾಗೂ 140 ರನ್‌ಗಳ ಭರ್ಜರಿ ಜಯ ಸಾಧಿಸಿ ಏಕಪಕ್ಷೀಯ ಪ್ರದರ್ಶನ ನೀಡಿತ್ತು. ಎರಡನೇ ಟೆಸ್ಟ್‌ನಲ್ಲಿ ಭಾರತವು ಇದೇ ರೀತಿಯ ಅಧಿಕಾರಯುತ ಪ್ರದರ್ಶನ ನೀಡುವ ಗುರಿಯನ್ನು ಹೊಂದಿದೆ. ಈ ಬಾರಿಯೂ ಶುಭಮನ್ ಗಿಲ್ ನೇತೃತ್ವದ ತಂಡವು ಅದೇ ರೀತಿ ಆಡಲು ಸಜ್ಜಾಗಿದೆ.

ಭಾರತ ಹಾಗೂ ವೆಸ್ಟ್‌ ಇಂಡೀಸ್ ನಡುವಣ ಎರಡನೇ ಪಂದ್ಯ ನವದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ, ಸರಣಿಯನ್ನು ವಶಕ್ಕೆ ಪಡೆಯುವ ಕನಸು ಶುಭಮನ್ ಗಿಲ್ ಪಡೆಯದ್ದಾಗಿದೆ. ಇನ್ನು ಆಡಿದ ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ವೆಸ್ಟ್‌ ಇಂಡೀಸ್ ತಂಡ ಪುಟಿದೇಳುವ ಕನಸು ಕಾಣುತ್ತಿದೆ.

ಅಹಮದಾಬಾದ್‌ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಸಂಘಟಿತ ಆಟದ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಬ್ಯಾಟಿಂಗ್‌ನಲ್ಲಿ ರವೀಂದ್ರ ಜಡೇಜಾ, ಕೆಎಲ್ ರಾಹುಲ್, ಧ್ರುವ್ ಜುರೇಲ್‌ ಶತಕ ಬಾರಿಸಿದರೆ, ಬೌಲಿಂಗ್‌ನಲ್ಲಿ ಸಿರಾಜ್‌, ಜಡ್ಡು ಕಮಾಲ್‌ ಪ್ರದರ್ಶನ ನೀಡಿದರು. ಜೇಟ್ಲಿ ಪಿಚ್‌ನಲ್ಲೂ ಇದೇ ಪ್ರದರ್ಶನ ನೀಡುವ ಕನಸು ಭಾರತ ತಂಡದ್ದಾಗಿದೆ.

ಈ ಮೈದಾನದಲ್ಲೂ ಟೀಮ್ ಇಂಡಿಯಾ ಮತ್ತೊಂದು ಏಕಪಕ್ಷೀಯ ಜಯ ದಾಖಲಿಸುವ ಕನಸು ಹೊಂದಿದೆ. 14 ವರ್ಷದ ಬಳಿಕ ಇದೇ ಅಂಗಳದಲ್ಲಿ ಭಾರತ ಹಾಗೂ ವೆಸ್ಟ್‌ ಇಂಡೀಸ್ ತಂಡಗಳು ಕಾದಾಟ ನಡೆಸಲಿವೆ. ಅರುಣ್‌ ಜೇಟ್ಲಿ ಮೈದಾನದಲ್ಲಿ ಸ್ಪಿನ್ ಬೌಲರ್‌ಗಳು ಅಬ್ಬರ ನಡೆಸಲಿದ್ದಾರೆ. ಇನ್ನು ಬೌನ್ಸ್‌ ಸಹ ವೇಗದ ಬೌಲರ್‌ಗಳಿಗೆ ನೆರವು ನೀಡಲಿದೆ. ವೆಸ್ಟ್‌ ಇಂಡೀಸ್‌ ಬ್ಯಾಟರ್‌ಗಳಿಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗುವ ಸಾಧ್ಯತೆ ಇದೆ. ಎರಡನೇ ಟೆಸ್ಟ್‌ನಲ್ಲಿ ಯಾರು ಮಿಂಚುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಭಾರತ ಮತ್ತೆ ಗೆಲ್ಲುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

one × 3 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you