ಕ್ರಿಕೆಟ್🔴ಸೋಲಿಲ್ಲದ ಸರದಾರರು!🧨 ನಾವೇ ಟಾಪ್...!

🔴ಸೋಲಿಲ್ಲದ ಸರದಾರರು!🧨 ನಾವೇ ಟಾಪ್…!

-

- Advertisment -spot_img
ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಎನ್ಕೌಂಟರ್  ಆಡಲಾಯಿತು.
ತನ್ನ ಐದೂ ಪಂದ್ಯಗಳನ್ನು ಗೆದ್ದು ಗೆಲುವಿನ ನಾಗಾಲೋಟದಲ್ಲಿದ ಟೀಮ್ ಇಂಡಿಯಾ, ಇಂಗ್ಲೆಂಡ್ ತಂಡದೊಂದಿಗೆ ಮುಖಾಮುಖಿಯಾಗಿ ಸೆಣಸಾಡುವ  ಪಂದ್ಯ ಹೈ-ವೋಲ್ಟೇಜ್ ಘರ್ಷಣೆ ಎಂದು ನಿರೀಕ್ಷಿಸಲಾಗಿತ್ತು
ನಾಯಕನಾಗಿ ರೋಹಿತ್ ಶರ್ಮ ಗೆ 100ನೇ ಪಂದ್ಯವಾಗಿತ್ತು. ನಾಯಕತ್ವದ ನೂರನೇ ಪಂದ್ಯದಲ್ಲಿ  ಇದು ಹಿಟ್‌ಮ್ಯಾನ್ ಅವರ ಹೊಸ ಸಾಧನೆ! ಹೊಸ ಮೈಲಿಗಲ್ಲು..!  ಈ ಪಂದ್ಯದಲ್ಲಿ ರೋಹಿತ್ 18,000 ಅಂತರಾಷ್ಟ್ರೀಯ ರನ್ ಕಂಪ್ಲೀಟ್ ಮಾಡಿ ಈ ಮೈಲುಗಲ್ಲು ತಲುಪಿದ ಐದನೆಯ ಭಾರತೀಯ ಅನಿಸಿಕೊಂಡರು. ಅಲ್ಲದೆ  ರೋಹಿತ್ ಶರ್ಮಾ ಅವರು 2023ರಲ್ಲಿ ಏಕದಿನ ಪಂದ್ಯಗಳಲ್ಲಿ 1000 ರನ್ ಪೂರ್ಣಗೊಳಿಸಿದ ಎರಡನೇ ಭಾರತೀಯ ಬ್ಯಾಟರ್ ಎನಿಸಿದರು.
ಈ  ನಿರೀಕ್ಷಿತ ಹಣಾಹಣಿಯ ರೋಚಕ ಸ್ಪರ್ಧೆಯಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.ಭಾರತ ತಂಡದ ಆರಂಭ ಕಳಪೆಯಾಗಿತ್ತು ಸ್ಲೋ ಪಿಚ್ ನಲ್ಲಿ ಕ್ವಾಲಿಟಿ ಇನ್ನಿಂಗ್ಸ್ ಆಡಿದ ನಾಯಕನ ಆಟ ಭಾರತದ ಬ್ಯಾಟಿಂಗ್ ಕುಸಿತಕ್ಕೆ ತಡೆಯಾಯಿತು. ರೋಹಿತ್ ಜೊತೆ ಕೆ ಎಲ್ ಸಾಥ್ ನೀಡಿದರು ಹಾಗೂ ಕೆಳ ಕ್ರಮಾಂಕದಲ್ಲಿ ಸೂರ್ಯ ಶೈನ್ ಆದರು.  ಒತ್ತಡದಲ್ಲಿ ನಾಯಕನ ನಾಕ್ ಆಡಿದ ರೋಹಿತ್ 101 ಎಸೆತಗಳಲ್ಲಿ 87 ರನ್ ಗಳಿಸುವ ಮೂಲಕ ಪಂದ್ಯದಲ್ಲಿ ಅತಿಥೇಯರ ಪರ ಅಗ್ರ ರನ್ ಗಳಿಸಿದ ಆಟಗಾರರಾದರು.ಸೂರ್ಯಕುಮಾರ್ ಯಾದವ್ 49 ರನ್ ಗಳಿಸಿದರೆ, ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಕೂಡ ಅಮೂಲ್ಯ 39 ರನ್ ಕೊಡುಗೆ ನೀಡಿದರು. ನಾಲ್ಕನೇ ವಿಕೆಟ್‌ಗೆ 91 ರನ್‌ಗಳ ಜೊತೆಯಾಟವನ್ನು ರೂಪಿಸಿದ ರಾಹುಲ್ ಮತ್ತು ಶರ್ಮಾ ತಮ್ಮ ತಂಡಕ್ಕಾಗಿ ಅಸ್ತವ್ಯಸ್ತವಾಗಿ  ಮುಳುಗುತ್ತಿದ್ದ ಹಡಗನ್ನು ನೀರಿನಿಂದ ಹೊರಹಾಕಿದರು. ನಿಧಾನಗತಿಯ ಪಿಚ್ ನಲ್ಲಿ ಸ್ಪರ್ಧಾತ್ಮಕ ಮೊತ್ತ ದಾಖಲಿಸಿದ ಭಾರತ ಇಂಗ್ಲೆಂಡ್‌ಗೆ ಗೆಲ್ಲಲು 230 ರನ್‌ಗಳ ಗುರಿ ನೀಡಿತು.
 *🔴 ವಿಕೆಟ್ಸ್ ಗಾನ್! ಬೇಟೆ ಶುರೂ!!🔥
ಕೌಂಟರ್ ಇನ್ನಿಂಗ್ಸ್‌ನಲ್ಲಿ ಆಡುವಾಗ ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಒಬ್ಬರ ನಂತರ ಒಬ್ಬರಂತೆ ಔಟಾಗುತ್ತಲೇ ಇದ್ದರು. ಭಾರತದ ‘ವೇಗ’ಕ್ಕೆ  ಆಂಗ್ಲರ ಟಾಪ್ ಆರ್ಡರ್ ಹಾರಿ ಹೋಯಿತು.  ಬುಮ್ರಾ- ಶಮಿ  ಶರವೇಗದ ದಾಳಿ ಭಾರತಕ್ಕೆ ಮಾಸ್ ಆರಂಭ ನೀಡಿತು. ಬುಮ್ರಾ- ಶಮಿ ಉರಿ ದಾಳಿಗೆ ಬೆದರಿದ ಆಂಗ್ಲರ ಟಾಪ್ ನಾಲ್ಕು ಬ್ಯಾಟ್ಸಮನ್ ಗಳು ಔಟ್ ಆಗಿ ಇಂಗ್ಲೆಂಡ್ ಸಂಕಷ್ಟಕ್ಕೆ ಸಿಲುಕಿತು.  ಬಳಿಕ ಕುಲ್ದೀಪ್ ಸ್ಪಿನ್ ಸುಳಿಗೆ  ಬಟ್ಲರ್‌ ದಂಗಾದರು. ಶಮಿ  ತನ್ನ ಉರಿ ದಾಳಿಯಿಂದ ನಾಲ್ಕು ವಿಕೆಟ್ಸ್ ಕಬಳಿಸಿ ಸೂಪರ್ ಹೀರೋ ಆದರು. ಕ್ರಿಕೆಟ್ ಜನಕರಿಗೂ ತಟ್ಟಿದ ‘ಶಮಿ’ ಕಾಟದಿಂದಾಗಿ  ಭಾರತದ ಅಜೇಯ ಓಟ ಮುಂದುವರೆದಿದೆ. ಮೂರು ವಿಕೆಟ್ ಗಳಿಸಿದ ಬೂಂ ಬೂಂ ಬುಮ್ರಾ ಎದುರಾಳಿಗೆ ‌ಸಿಂಹಸ್ವಪ್ನರಾದರು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ 34.5 ಓವರ್ ಗಳಲ್ಲಿ ಕೇವಲ 129 ರನ್ ಗಳಿಗೆ ಸೀಮಿತವಾಗಿ ಹೀನಾಯ ಸೋಲು ಅನುಭವಿಸಿತು.  ಸುಲಭ ಜಯ ದಾಖಲಿಸಿದ  ಟೀಂ ಇಂಡಿಯಾ ತಂಡ ಇಂಗ್ಲೆಂಡ್ ತಂಡವನ್ನು 100 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಟೂರ್ನಿಯಿಂದ ಬಹುತೇಕ ಹೊರಹಾಕಿದೆ. ಈ ಗೆಲುವಿನೊಂದಿಗೆ ಭಾರತ ಟೂರ್ನಿಯಲ್ಲಿ ಆರನೇ ಜಯ ದಾಖಲಿಸಿದೆ.
ಆಂಗ್ಲರ  ಮೇಲೆ ಭಾರತದ ಪವರ್ ತೋರಿಸಿದ  ರೋಹಿತ್ ಪಡೆ ಇಂಗ್ಲೆಂಡ್ ರಿಟರ್ನ್ ಟಿಕೆಟ್ ಕನ್ಫರ್ಮ್ ಮಾಡಿದ್ದಾರೆ.  ಹಾಲಿ ಚಾಂಪಿಯನ್  ಇಂಗ್ಲೆಂಡ್ ಅನ್ನು 100 ರನ್‌ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾದ ಸೆಮಿಫೈನಲ್‌ನ ಹಾದಿ ಸುಲಭವಾಗಿದೆ  ಮತ್ತು ಸತತ ಆರನೇ ಗೆಲುವಿನ ಅಪ್ಪುಗೆ ಭಾರತಕ್ಕೆ ಸಿಕ್ಕಿದೆ. ಭಾರತ ತಂಡ ವಿಶ್ವಕಪ್ ನಲ್ಲಿ ಗೆಲುವಿನ ಅಭಿಯಾನ ಮುಂದುವರಿಸಿದೆ.ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ಮತ್ತೆ ನಂಬರ್ ಒನ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ.
✍️ ಸುರೇಶ್ ಭಟ್, ಮೂಲ್ಕಿ
ಟೀಂ ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

18 + ten =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you