ಕ್ರಿಕೆಟ್ಸಂಘಟಿತ ಹೋರಾಟ-ಸತತ 2 ನೇ ಬಾರಿಗೆ ಕ್ಲಾಸಿಕ್ ಕ್ರಿಕೆಟರ್ಸ್ ಮುಡಿಗೆ "ಬಿ.ಎಸ್.ವೈ...

ಸಂಘಟಿತ ಹೋರಾಟ-ಸತತ 2 ನೇ ಬಾರಿಗೆ ಕ್ಲಾಸಿಕ್ ಕ್ರಿಕೆಟರ್ಸ್ ಮುಡಿಗೆ “ಬಿ.ಎಸ್.ವೈ ಕಪ್” ಕಿರೀಟ.

-

- Advertisment -spot_img
ಕ್ಲಾಸಿಕ್ ಕ್ರಿಕೆಟರ್ಸ್ ತಿಪಟೂರು ಇವರ ಆಶ್ರಯದಲ್ಲಿ ಕ್ರೀಡಾ ಪ್ರೋತ್ಸಾಹಕರಾದ ಎನ್.ಆರ್‌.ಸಂತೋಷ್,ಬಿ.ಸಿ.ನಾಗೇಶ್,ಲೋಕೇಶ್ವರ್ ಸಾರಥ್ಯದಲ್ಲಿ,ರಘು ಟಿ.ಎನ್,ವಾಸು ಪ್ರಕಾಶ್,ಶಿವ,ಚಿರಂತನ್,ಮೋಹನ್,ವಿಲಾಸ್,ಅಭಿ,ವರದಾ ಇವರೆಲ್ಲರ ಸಹಭಾಗಿತ್ವದಲ್ಲಿ ತಿಪಟೂರಿನಲ್ಲಿ ನಡೆದ ಹೊನಲು ಬೆಳಕಿನ “ಬಿ.ಎಸ್.ವೈ ಕಪ್” ಕ್ಲಾಸಿಕ್ ತಿಪಟೂರು ತಂಡ ಜಯಿಸಿದೆ.
ತಿಪಟೂರು-ತುಮಕೂರು ಪರಿಸರದ 10 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಲೀಗ್ ಹಂತದ ರೋಚಕ ಸೆಣಸಾಟಗಳ ಬಳಿಕ
M.C.C ತಿಪಟೂರು ಹಾಗೂ ಕ್ಲಾಸಿಕ ಕ್ರಿಕೆಟರ್ಸ್ ಫೈನಲ್ ಪ್ರವೇಶಿಸಿತ್ತು.ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಕ್ಲಾಸಿಕ್ ಕ್ರಿಕೆಟರ್ಸ್ ನಿಗದಿತ 8 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 57 ರನ್ ಕಲೆ ಹಾಕಿತ್ತು.ಕಠಿಣ ಸವಾಲನ್ನು ಬೆಂಬತ್ತುವ ಸಂದರ್ಭದಲ್ಲಿ, ಕ್ಲಾಸಿಕ್ ತಿಪಟೂರಿನ
ಬಿಗು ಬೌಲಿಂಗ್ ದಾಳಿಯೆದುರು M.C.C ಯ ದಾಂಡಿಗರು ರನ್ ಗಳಿಸಲು ಪರದಾಡಿ,ಅಂತಿಮವಾಗಿ
 8 ಓವರ್ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 33 ರನ್ ಗಳಿಸಲಷ್ಟೇ ಶಕ್ತವಾಯಿತು.
ಬಿ.ಎಸ್.ವೈ ಕಪ್ ನ ಮುಖ್ಯ ಆಕರ್ಷಣೆಯ ಪಂದ್ಯದಲ್ಲಿ
ಬೆಂಗಳೂರು ಇಲೆವೆನ್ ತಂಡದ ಸಲೀಂ ಅಬ್ಬರದ ಬ್ಯಾಟಿಂಗ್ ಪ್ರದರ್ಶನದೊಂದಿಗೆ ರೆಸ್ಟ್ ಆಫ್ ಕರ್ನಾಟಕ ಇಲೆವೆನ್ ತಂಡವನ್ನು ಅನಾಯಾಸವಾಗಿ‌ ಸೋಲಿಸಿತ್ತು.
ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ ಕ್ಲಾಸಿಕ್
ಕ್ರಿಕೆಟರ್ಸ್ 2 ಲಕ್ಷ ನಗದು,ದ್ವಿತೀಯ ಸ್ಥಾನಿ M.C.C ತಿಪಟೂರು 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.
ಈ ಪಂದ್ಯಾವಳಿಯಲ್ಲಿ ಒಟ್ಟು 4 ಅರ್ಧ ಶತಕ ದಾಖಲಾಗಿದೆ.ರಾಜಾ ಸಾಲಿಗ್ರಾಮ,ಸ್ಯಾಂಡಿ,ಗಿಲ್ಲಿ ಹಾಗೂ ರಕ್ಷಿತ್ ನಂದಳಿಕೆ ಈ ನಾಲ್ವರು ಆಟಗಾರರು ದಾಂಡಿನಿಂದ ಬಿರುಸಿನ ಸಿಕ್ಸರ್, ಬೌಂಡರಿಗಳ ಸುರಿಮಳೆ ಸುರಿಸಿ ಪ್ರೇಕ್ಷಕರನ್ನು ರಂಜಿಸಿದ್ದರು.
ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವಸ್ತಿಕ್ ನಾಗರಾಜ್ ಪಡೆದರೆ,ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್‌ ರಕ್ಷಿತ್ ನಂದಳಿಕೆ,ಬೆಸ್ಟ್ ಬೌಲರ್ ಸಚಿನ್ ಮಹಾದೇವ್ ಹಾಗೂ ಸರಣಿಯುದ್ದಕ್ಕೂ ಶ್ರೇಷ್ಟ ಸವ್ಯಸಾಚಿ ಪ್ರದರ್ಶನ ನೀಡಿ,ತಿಪಟೂರಿನ ಅಂಗಣದ ಮೂಲೆ ಮೂಲೆಗೂ ಬೌಂಡರಿ,ಸಿಕ್ಸರ್ ಗಳ‌ ಸುರಿಮಳೆಗೈದು ಕ್ರೀಡಾಭಿಮಾನಿಗಳ ಹೃದಯ ಗೆದ್ದ ರಾಜಾ ಸಾಲಿಗ್ರಾಮ ಸರಣಿ ಶ್ರೇಷ್ಠ ಪ್ರಶಸ್ತಿ ಗೌರವಕ್ಕೆ ಪಾತ್ರರಾದರು.
ತಿಪಟೂರಿನ ಸ್ಥಳೀಯ ಆಟಗಾರರ ಪೈಕಿ ಕ್ರಮವಾಗಿ ಬೆಸ್ಟ್ ಬ್ಯಾಟ್ಸ್‌ಮನ್‌ ಗಿಲ್ಲಿ,ಬೆಸ್ಟ್ ಬೌಲರ್ ವಾಸು ಪ್ರಕಾಶ್ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ರವಿ ಪಡೆದುಕೊಂಡರು.
S.R.B ಸ್ಪೋರ್ಟ್ಸ್ ನ‌ ಸಂಪೂರ್ಣ ಸಹಕಾರದೊಂದಿಗೆ,M.Sports ನೇರ ಪ್ರಸಾರವನ್ನು ಬಿತ್ತರಿಸಿದರೆ,ವೀಕ್ಷಕ ವಿವರಣೆಯಲ್ಲಿ
ಹಿರಿಯ ವೀಕ್ಷಕ ವಿವರಣೆಕಾರ ಶಿವನಾರಾಯಣ್ ಐತಾಳ್ ಕೋಟ,ರಾಘು ಮಟಪಾಡಿ ಭಾಗವಹಿಸಿದರೆ,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಸಹಕರಿಸಿತ್ತು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 × four =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you