ಕ್ರಿಕೆಟ್ಮತ್ತೆ ರಾಯಲ್ ಚಾಲೆಂಜರ್ಸ್ ತಂಡ ಸೇರಲಿದ್ದಾರಾ ಕರುನಾಡ ಮನೆಮಗ?

ಮತ್ತೆ ರಾಯಲ್ ಚಾಲೆಂಜರ್ಸ್ ತಂಡ ಸೇರಲಿದ್ದಾರಾ ಕರುನಾಡ ಮನೆಮಗ?

-

- Advertisment -spot_img

ಕ್ರಿಕೆಟ್ ಜಗತ್ತಿನ ಚಿನ್ನದ ಮೊಟ್ಟೆ ಇಡುವ ಕೋಳಿ ಎಂದರೆ ಅದು ಇಂಡಿಯನ್ ಪ್ರೀಮಿಯರ್ ಲೀಗ್, ಅರ್ಥಾತ್ ಐಪಿಎಲ್.

17 ವರ್ಷಗಳನ್ನು ಪೂರೈಸಿರುವ ಐಪಿಎಲ್ ಟೂರ್ನಿ 18ನೇ ವರ್ಷಕ್ಕೆ ಕಾಲಿಟ್ಟಿದೆ. ಮುಂದಿನ ವರ್ಷದ ಐಪಿಎಲ್ ಬಗ್ಗೆ ಈಗಿನಿಂದಲೇ ಕುತೂಹಲಗಳು ಗರಿಗೆದರಿವೆ. ಕಾರಣ, ಐಪಿಎಲ್ ಮೆಗಾ ಆಕ್ಷನ್.

ಹೌದು. ಐಪಿಎಲ್ ಮೆಗಾ ಆಕ್ಷನ್ ಈ ವರ್ಷದ ಕೊನೆಯಲ್ಲಿ ನಡೆಯುವ ಸಾಧ್ಯತೆಯಿದೆ. ಐಪಿಎಲ್’ನಲ್ಲಿ ಆಡುತ್ತಿರುವ 10 ತಂಡಗಳಿಗೆ ತಲಾ ನಾಲ್ವರು ಆಟಗಾರರನ್ನು ರೀಟೇನ್ ಮಾಡಿಕೊಳ್ಳುವ ಅವಕಾಶ ಸಿಗಲಿದ್ದು, ಉಳಿದ ಆಟಗಾರರನ್ನು ಹರಾಜಿಗೆ ಬಿಡಬೇಕಿದೆ. ಹಾಗಾದರೆ ಯಾವ ಯಾವ ತಂಡಗಳು ಯಾವ ಯಾವ ಆಟಗಾರರನ್ನು ಉಳಿಸಿಕೊಳ್ಳಲಿವೆ? ಈ ಕುತೂಹಲದ ಮಧ್ಯೆ ಕನ್ನಡಿಗ ಕೆ.ಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Yes. ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಜೊತೆ ರಾಹುಲ್ ಅವರಿಗೆ ಅಸಮಾಧಾನ ಇರುವುದು ಜಗತ್ತಿಗೇ ಗೊತ್ತಿರುವ ಸಂಗತಿ. ಕಳೆದ ಐಪಿಎಲ್ ಟೂರ್ನಿಯಲ್ಲಿ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 10 ವಿಕೆಟ್’ಗಳ ಹೀನಾಯ ಸೋಲು ಕಂಡಾಗ, ಲಕ್ನೋ ತಂಡದ ಮಾಲೀಗ ಸಂಜೀವ್ ಗೋಯೆಂಕಾ, ನಾಯಕ ರಾಹುಲ್ ಅವರನ್ನು ಕ್ಯಾಮರಾಗಳ ಮುಂದೆಯೇ ನಿಂದಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಆ ಘಟನೆಯ ನಂತರ ರಾಹುಲ್ ಲಕ್ನೋ ತಂಡವನ್ನು ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆದರೆ ಅವರನ್ನು ಖರೀದಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದೆ. ನಾಯಕ, ವಿಕೆಟ್ ಕೀಪರ್ ಮತ್ತು ಓಪನರ್.. ಈ ಮೂರೂ ಜವಾಬ್ದಾರಿಗಳನ್ನು ನಿಭಾಯಿಸಬಲ್ಲ ಆಟಗಾರನೊಬ್ಬನ ಅವಶ್ಯಕತೆ RCB ತಂಡಕ್ಕಿದೆ. ರಾಯಲ್ ಚಾಲೆಂಜರ್ಸ್ ನಾಯಕರಾಗಿದ್ದ ದಕ್ಷಿಣ ಆಫ್ರಿಕಾದ ಫಾಫ್ ಡು’ಪ್ಲೆಸಿಸ್ ಅವರಿಗೀಗ 40 ವರ್ಷ ವಯಸ್ಸು. ಹೀಗಾಗಿ ಅವರನ್ನು ಮತ್ತೆ ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆ ಕಡಿಮೆ. ಇನ್ನು RCB ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಫಾಫ್ ಮತ್ತು ಡಿಕೆ ಅವರಿಂದ ಖಾಲಿಯಾಗುವ ಜಾಗವನ್ನು ತುಂಬಲು ಕೆ.ಎಲ್ ರಾಹುಲ್ ಅವರಿಗಿಂತ ಉತ್ತಮ ಆಯ್ಕೆ ಬೇರೆ ಯಾವುದಿದೆ ಎಂಬ ಪ್ರಶ್ನೆಯನ್ನು RCB ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಕೇಳುತ್ತಿದ್ದಾರೆ.

ಕೆ.ಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡು ತಂಡದ ನಾಯಕರಾದರೆ ಅದು ಕನ್ನಡಿಗರ ಪಾಲಿಗೆ ಶುಭ ಸುದ್ದಿ. ರಾಹುಲ್ ದ್ರಾವಿಡ್ ಮತ್ತು ಅನಿಲ್ ಕುಂಬ್ಳೆಯವರ ನಂತರ ಕರ್ನಾಟಕದ ಮತ್ತೊಬ್ಬ ಆಟಗಾರ RCB ನಾಯಕರಾಗಿಲ್ಲ.

ಅಂದ ಹಾಗೆ, ಕೆ.ಎಲ್ ರಾಹುಲ್ ಐಪಿಎಲ್’ನಲ್ಲಿ ತಮ್ಮ ಅಭಿಯಾನ ಶುರು ಮಾಡಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೂಲಕವೇ. 2013ರಲ್ಲಿ ಕೇವಲ 10 ಲಕ್ಷ ರೂಪಾಯಿಗೆ RCB ತಂಡ ಸೇರಿಕೊಂಡಿದ್ದ ರಾಹುಲ್, 2014ರಲ್ಲಿ 1 ಕೋಟಿ ರೂಪಾಯಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದ್ದರು. ಎರಡು ವರ್ಷಗಳ ಕಾಲ, ಅಂದರೆ 2015ರವರೆಗೆ ಹೈದರಾಬಾದ್ ಪರ ಆಡಿದ್ದ ರಾಹುಲ್, 2016ರಲ್ಲಿ ಮತ್ತೆ RCBಗೆ ಮರಳಿದ್ದರು. 2016ರ ಟೂರ್ನಿಯಲ್ಲಿ 14 ಪಂದ್ಯಗಳಿಂದ 397 ರನ್ ಗಳಿಸಿದ್ದ ರಾಹುಲ್, ರಾಯಲ್ ಚಾಲೆಂಜರ್ಸ್ ತಂಡ ಫೈನಲ್ ತಲುಪುವಲ್ಲಿ ಮಹತ್ವ ಪಾತ್ರ ನಿಭಾಯಿಸಿದ್ದರು.

8 ವರ್ಷಗಳ ನಂತರ ಕೆ.ಎಲ್ ರಾಹುಲ್ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳಲಿದ್ದಾರೆಯೇ? ಗೊತ್ತಿಲ್ಲ. ಆದರೆ ಇಂಥದ್ದೊಂದು ಚರ್ಚೆಯಂತೂ ಆರಂಭವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೂಡ ಕನ್ನಡಿಗನನ್ನು ಮರಳಿ ತಂಡಕ್ಕೆ ಕರೆ ತರಲು ಉತ್ಸುಕವಾಗಿದ್ದು, ರಾಹುಲ್ ಜೊತೆ ಸಂಪರ್ಕದಲ್ಲಿದೆ ಎನ್ನಲಾಗುತ್ತಿದೆ.

LEAVE A REPLY

Please enter your comment!
Please enter your name here

eighteen + 7 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you