5 C
London
Wednesday, April 24, 2024
Homeಕ್ರಿಕೆಟ್ಟೊರ್ಪೆಡೋಸ್-ಚಕ್ರವರ್ತಿ ಕುಂದಾಪುರ ಜಂಟಿ ಆಶ್ರಯದಲ್ಲಿ ಅಂತರ್ ಶಾಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್.

ಟೊರ್ಪೆಡೋಸ್-ಚಕ್ರವರ್ತಿ ಕುಂದಾಪುರ ಜಂಟಿ ಆಶ್ರಯದಲ್ಲಿ ಅಂತರ್ ಶಾಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

 

ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ದಶಕಗಳ ಕಾಲ ಪಾರುಪತ್ಯ ಮೆರೆದ ಕುಂದಾಪುರದ 2
ತಂಡಗಳು ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕುಂದಾಪುರ ಹಾಗೂ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್
ಕುಂದಾಪುರ(ಹಳೆಯಂಗಡಿ).

70 ರ ದಶಕದಲ್ಲಿ ಸ್ಥಾಪನೆಯಾದ ಚಕ್ರವರ್ತಿ ಕುಂದಾಪುರ ಇನ್ನೆರಡು ವರ್ಷಗಳಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಲಿದೆ.ಸಮರ್ಥ ನಾಯಕ‌ ಶ್ರೀಪಾದ ಉಪಾಧ್ಯಾಯ ರ ದಕ್ಷ ಸಾರಥ್ಯದಲ್ಲಿ ರಾಜ್ಯಾದ್ಯಂತ ಹಲವಾರು ಪ್ರತಿಷ್ಟಿತ ಟ್ರೋಫಿಗಳನ್ನು ಜಯಿಸಿ ಕುಂದಾಪುರ ಪರಿಸರದ ಅನೇಕ ಯುವ ಪ್ರತಿಭೆಗಳನ್ನು ರಾಜ್ಯಕ್ಕೆಪರಿಚಯಿಸಿದ್ದು, ಅಂತೆಯೇ ಟೊರ್ಪೆಡೋಸ್ ಕುಂದಾಪುರ ತಂಡವೂ ಗೌತಮ್ ಶೆಟ್ಟಿ ಯವರ ಸಾರಥ್ಯದಲ್ಲಿ ಅನೇಕ‌ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.

ಚಕ್ರವರ್ತಿ ಕ್ರಿಕೆಟ್ ಕ್ಲಬ್ ಲೆದರ್ ಬಾಲ್ ಕೋಚಿಂಗ್ ಅಕಾಡೆಮಿಯನ್ನು ಸ್ಥಾಪಿಸಿದ್ದು ಶಿಸ್ತಿನ ಆಟಗಾರರಾದ ಪ್ರದೀಪ್ ವಾಜ್ ಪ್ರಮುಖ ಕೋಚ್ ಆಗಿ‌ ಕಾರ್ಯ ನಿರ್ವಹಿಸುತ್ತಿದ್ದು,ಟೊರ್ಪೆಡೋಸ್ ಕ್ರಿಕೆಟ್ ಕೋಚಿಂಗ್ ಅಕಾಡೆಮಿಯಲ್ಲಿ ಪಡುಬಿದ್ರಿ ಫ್ರೆಂಡ್ಸ್ ನ ನಿತಿನ್ ಮೂಲ್ಕಿ ಕೋಚಿಂಗ್ ನೀಡುತ್ತಿದ್ದು ಜೊತೆಯಾಗಿ ಕಪ್ತಾನರು,ಟೊರ್ಪೆಡೋಸ್ ಕ್ಲಬ್ ಸಂಸ್ಥಾಪಕಾಧ್ಯಕ್ಷರಾದ ಗೌತಮ್ ಶೆಟ್ಟಿಯವರು ಕೂಡ ಕ್ರಿಕೆಟ್ ಜೊತೆಗೆ ವಿವಿಧ ಕ್ರೀಡಾ ತರಬೇತಿಯನ್ನು ನೀಡುತ್ತಿದ್ದಾರೆ.

ಈ ಬಾರಿ ಬೇಸಿಗೆ ರಜೆಯ ಸಂದರ್ಭ ಏಪ್ರಿಲ್ 13,14 ರಂದು ಈ ಎರಡು ಪ್ರತಿಷ್ಟಿತ ತಂಡಗಳು ಜಂಟಿಯಾಗಿ ಅಂತರ್ ಶಾಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದಾರೆ.ಕುಂದಾಪುರದ ಗಾಂಧಿಮೈದಾನದಲ್ಲಿ ಈ ಪಂದ್ಯಾವಳಿ ನಡೆಯಲಿದ್ದು ವಿಜೇತ ತಂಡಗಳು ಹಾಗೂ ಸೆಮಿಫೈನಲ್ ಪ್ರವೇಶಿಸಿದ ತಂಡಗಳು ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.

1-1-2003 ನಂತರ ಜನಿಸಿದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.ಪ್ರತಿ ಪಂದ್ಯವು 10 ಓವರ್ ನದ್ದಾಗಿರುತ್ತದೆ.ಆಸಕ್ತ ತಂಡಗಳು  ಎಪ್ರಿಲ್ 10 ರ ಒಳಗೆ ಮೇಲ್ಕಾಣಿಸಿದ ನಂಬರ್ ಗಳನ್ನು ಸಂಪರ್ಕಿಸಬಹುದಾಗಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

4 × 3 =