ಕ್ರಿಕೆಟ್ಟೊರ್ಪೆಡೋಸ್-ಚಕ್ರವರ್ತಿ ಕುಂದಾಪುರ ಜಂಟಿ ಆಶ್ರಯದಲ್ಲಿ ಅಂತರ್ ಶಾಲಾ ಟೆನ್ನಿಸ್ ಬಾಲ್ ಕ್ರಿಕೆಟ್...

ಟೊರ್ಪೆಡೋಸ್-ಚಕ್ರವರ್ತಿ ಕುಂದಾಪುರ ಜಂಟಿ ಆಶ್ರಯದಲ್ಲಿ ಅಂತರ್ ಶಾಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್.

-

- Advertisment -spot_img

 

ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ದಶಕಗಳ ಕಾಲ ಪಾರುಪತ್ಯ ಮೆರೆದ ಕುಂದಾಪುರದ 2
ತಂಡಗಳು ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕುಂದಾಪುರ ಹಾಗೂ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್
ಕುಂದಾಪುರ(ಹಳೆಯಂಗಡಿ).

70 ರ ದಶಕದಲ್ಲಿ ಸ್ಥಾಪನೆಯಾದ ಚಕ್ರವರ್ತಿ ಕುಂದಾಪುರ ಇನ್ನೆರಡು ವರ್ಷಗಳಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಲಿದೆ.ಸಮರ್ಥ ನಾಯಕ‌ ಶ್ರೀಪಾದ ಉಪಾಧ್ಯಾಯ ರ ದಕ್ಷ ಸಾರಥ್ಯದಲ್ಲಿ ರಾಜ್ಯಾದ್ಯಂತ ಹಲವಾರು ಪ್ರತಿಷ್ಟಿತ ಟ್ರೋಫಿಗಳನ್ನು ಜಯಿಸಿ ಕುಂದಾಪುರ ಪರಿಸರದ ಅನೇಕ ಯುವ ಪ್ರತಿಭೆಗಳನ್ನು ರಾಜ್ಯಕ್ಕೆಪರಿಚಯಿಸಿದ್ದು, ಅಂತೆಯೇ ಟೊರ್ಪೆಡೋಸ್ ಕುಂದಾಪುರ ತಂಡವೂ ಗೌತಮ್ ಶೆಟ್ಟಿ ಯವರ ಸಾರಥ್ಯದಲ್ಲಿ ಅನೇಕ‌ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.

ಚಕ್ರವರ್ತಿ ಕ್ರಿಕೆಟ್ ಕ್ಲಬ್ ಲೆದರ್ ಬಾಲ್ ಕೋಚಿಂಗ್ ಅಕಾಡೆಮಿಯನ್ನು ಸ್ಥಾಪಿಸಿದ್ದು ಶಿಸ್ತಿನ ಆಟಗಾರರಾದ ಪ್ರದೀಪ್ ವಾಜ್ ಪ್ರಮುಖ ಕೋಚ್ ಆಗಿ‌ ಕಾರ್ಯ ನಿರ್ವಹಿಸುತ್ತಿದ್ದು,ಟೊರ್ಪೆಡೋಸ್ ಕ್ರಿಕೆಟ್ ಕೋಚಿಂಗ್ ಅಕಾಡೆಮಿಯಲ್ಲಿ ಪಡುಬಿದ್ರಿ ಫ್ರೆಂಡ್ಸ್ ನ ನಿತಿನ್ ಮೂಲ್ಕಿ ಕೋಚಿಂಗ್ ನೀಡುತ್ತಿದ್ದು ಜೊತೆಯಾಗಿ ಕಪ್ತಾನರು,ಟೊರ್ಪೆಡೋಸ್ ಕ್ಲಬ್ ಸಂಸ್ಥಾಪಕಾಧ್ಯಕ್ಷರಾದ ಗೌತಮ್ ಶೆಟ್ಟಿಯವರು ಕೂಡ ಕ್ರಿಕೆಟ್ ಜೊತೆಗೆ ವಿವಿಧ ಕ್ರೀಡಾ ತರಬೇತಿಯನ್ನು ನೀಡುತ್ತಿದ್ದಾರೆ.

ಈ ಬಾರಿ ಬೇಸಿಗೆ ರಜೆಯ ಸಂದರ್ಭ ಏಪ್ರಿಲ್ 13,14 ರಂದು ಈ ಎರಡು ಪ್ರತಿಷ್ಟಿತ ತಂಡಗಳು ಜಂಟಿಯಾಗಿ ಅಂತರ್ ಶಾಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದಾರೆ.ಕುಂದಾಪುರದ ಗಾಂಧಿಮೈದಾನದಲ್ಲಿ ಈ ಪಂದ್ಯಾವಳಿ ನಡೆಯಲಿದ್ದು ವಿಜೇತ ತಂಡಗಳು ಹಾಗೂ ಸೆಮಿಫೈನಲ್ ಪ್ರವೇಶಿಸಿದ ತಂಡಗಳು ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.

1-1-2003 ನಂತರ ಜನಿಸಿದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.ಪ್ರತಿ ಪಂದ್ಯವು 10 ಓವರ್ ನದ್ದಾಗಿರುತ್ತದೆ.ಆಸಕ್ತ ತಂಡಗಳು  ಎಪ್ರಿಲ್ 10 ರ ಒಳಗೆ ಮೇಲ್ಕಾಣಿಸಿದ ನಂಬರ್ ಗಳನ್ನು ಸಂಪರ್ಕಿಸಬಹುದಾಗಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × three =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you