Action Replay80ರ ದಶಕದ ಟೆನ್ನಿಸ್ ಕ್ರಿಕೆಟ್ ನ ಕೌತುಕದ ಪಂದ್ಯ ಟೆನ್ನಿಸ್ ಕ್ರಿಕೆಟ್...

80ರ ದಶಕದ ಟೆನ್ನಿಸ್ ಕ್ರಿಕೆಟ್ ನ ಕೌತುಕದ ಪಂದ್ಯ ಟೆನ್ನಿಸ್ ಕ್ರಿಕೆಟ್ ನಲ್ಲಿ ಪ್ರಭುತ್ವ ಸಾಧಿಸಿದ್ದ, ದಕ್ಷಿಣ ಕನ್ನಡ

-

- Advertisment -spot_img

80ರ ದಶಕದ ಟೆನ್ನಿಸ್ ಕ್ರಿಕೆಟ್ ನ ಕೌತುಕದ ಪಂದ್ಯ. ಅದಾಗಲೇ ಟೆನ್ನಿಸ್ ಕ್ರಿಕೆಟ್ ನಲ್ಲಿ ಪ್ರಭುತ್ವ ಸಾಧಿಸಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಚಾಂಪಿಯನ್ ತಂಡ, ಶಿಸ್ತಿನ‌ ಸಿಪಾಯಿಗಳು, ಟೆನ್ನಿಸ್ ಕ್ರಿಕೆಟ್ ನ ಹುಲಿಗಳಾದ ಪ್ಯಾರಡೈಸ್ ಬನ್ನಂಜೆ ವಿರುದ್ಧವಾಗಿ 15 ವರ್ಷಗಳ ಹಿಂದಷ್ಟೇ ಸ್ಥಾಪನೆಯಾಗಿದ್ದ ಕುಂದಾಪುರದ ಸಂಯೋಜಿತ ತಂಡ ಚಕ್ರವರ್ತಿ ಕುಂದಾಪುರದ ನಡುವಿನ ಬೈಂದೂರಿನ ಗಾಂಧಿಮೈದಾನದಲ್ಲಿ ವಿಕ್ರಂ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ ಡಾ|ಪ್ರದೀಪ್ ಕುಮಾರ್ ಶೆಟ್ಟಿ ಸ್ಮರಣಾರ್ಥ ನಡೆದ ಪಂದ್ಯಾಕೂಟದ ಫೈನಲ್ ಪಂದ್ಯಾಟವಾಗಿತ್ತು.

 

20 ಓವರ್ ಗಳ ಎರಡು ಇನ್ನಿಂಗ್ಸ್ ನಲ್ಲಿ ಜರುಗಿದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ಪ್ಯಾರಡೈಸ್ ಬನ್ನಂಜೆ ತಂಡ ಪ್ರದೀಪ್ ವಾಜ್,ದಿ|ಪ್ರತಾಪ್ ಚಂದ್ರ ಹೆಗ್ಡೆ,ಗಣೇಶ್ ನಾವುಡರ ನಿಖರ ದಾಳಿಗೆ 37 ರನ್ ಗಳಿಗೆ ಆಲೌಟ್ ಆಗಿತ್ತು. ಆದರೆ ನಂತರ ಬ್ಯಾಟಿಂಗ್ ಮಾಡಿದ್ದ ಚಕ್ರವರ್ತಿ ತಂಡ ಪ್ಯಾರಡೈಸ್ ನ ದಂತಕಥೆ ಶ್ರೀಧರ್ ಶೆಟ್ಟಿ ಹಾಗೂ ಅಂದಿನ ದಿನಗಳಲ್ಲಿ ಭರವಸೆ ಮೂಡಿಸಿದ್ದ ಬೌಲಿಂಗ್ ಮಿಂಚು ಕೋಟೇಶ್ವರ ದಿ|ಸರ್ದಾರ್ ಬಾಬ್ ಜಾನ್ ದಾಳಿ ಎದುರಿಸಲಾಗದೆ 31 ರನ್ ಗಳಿಗೆ ಆಲೌಟ್ ಆಗಿತ್ತು.ಪ್ಯಾರಡೈಸ್ 6 ರನ್ ಗಳ ಮೊದಲ ಇನ್ನಿಂಗ್ಸ್ ಲೀಡ್ ಗಳಿಸಿತ್ತು.

ದ್ವಿತೀಯ ಇನ್ನಿಂಗ್ಸ್ ನಲ್ಲಿ ಮತ್ತೆ ಅತ್ಯುತ್ತಮ ಬೌಲಿಂಗ್ ದಾಳಿ ಸಂಘಟಿಸಿದ ಚಕ್ರವರ್ತಿಗಳ ಅಂದಿನ ದಿನಗಳ ಬೌಲಿಂಗ್ ಬ್ರಹ್ಮಾಸ್ತ್ರ ಸದಾನಂದ ಬನ್ನಾಡಿ,ಗಣೇಶ್ ನಾವುಡ,ಯುವ ಎಸೆತಗಾರ ಮೊಹಮದ್ ಶಫಿ ದಾಳಿ ಎದುರಿಸಲಾಗದೆ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 43 ರನ್ ಗಳಷ್ಟೇ ಗಳಿಸಲು ಶಕ್ತವಾಗಿತ್ತು.

ವಿಜಯ ಗಳಿಸಲು 50 ರನ್ ಗಳ ಕಠಿಣ ಸವಾಲನ್ನು ಚಕ್ರವರ್ತಿ ತಂಡ ಮನಮೋಹಕ ಹೊಡೆತಗಳ ಆಟಗಾರ ಪ್ರಕಾಶ್ ಶಿರಸಿಕರ್ ರ ಆಕರ್ಷಕ ಅಜೇಯ 25 ರನ್ ಗಳ ನೆರವಿನಿಂದ 4 ವಿಕೆಟ್ ಅಂತರದ ಜಯಗಳಿಸಿತ್ತು.

ಅಂದು ಚಕ್ರವರ್ತಿ ತಂಡದ ಬೆನ್ನೆಲುಬಾಗಿದ್ದ ಸ್ಪುರದ್ರೂಪಿ,ಪ್ರತಿಭಾವಂತ ಆಟಗಾರ, ಶ್ರೇಷ್ಠ ಕ್ಷೇತ್ರರಕ್ಷಕ ದಿ| ಬಿ.ಪ್ರತಾಪ್ ಚಂದ್ರ ಹೆಗ್ಡೆ 7 ಕ್ಯಾಚ್ ಹಿಡಿದು ಪಂದ್ಯಾಟದ ಮೇಲೆ ಹಿಡಿತ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಪಂದ್ಯಾಕೂಟದ ಶ್ರೇಷ್ಠ ದಾಂಡಿಗ ಪ್ರಶಸ್ತಿಯನ್ನು ಅಂದಿನ ದಿನಗಳ ನಾಯಕ ಶಿವಾನಂದ ಗೌಡ, ಬೌಲಿಂಗ್ ಮಿಂಚು ಪ್ರದೀಪ್ ವಾಜ್ ಶ್ರೇಷ್ಠ ಬೌಲರ್ ಹಾಗೂ ಪ್ರಕಾಶ್ ಸಿರ್ಸಿಕರ್ ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರೆ,ಬೌಲಿಂಗ್,ಬ್ಯಾಟಿಂಗ್ ವಿಭಾಗದಲ್ಲಿ ಶ್ರೇಷ್ಠ ನಿರ್ವಹಣೆ ತೋರಿದ್ದ ಅಂದಿನ ದಿನಗಳ ಶ್ರೇಷ್ಠ ಆಲ್ ರೌಂಡರ್ ಪ್ಯಾರಡೈಸ್ ಬನ್ನಂಜೆಯ ಸರ್ದಾರ್ ಬಾಬ್ ಜಾನ್ ಕೋಟೇಶ್ವರ ಪಡೆದುಕೊಂಡಿದ್ದರು.

ಶ್ರೇಷ್ಠ ಪ್ರದರ್ಶನದ ಮೂಲಕ ಚಕ್ರವರ್ತಿಗಳಿಗೆ ರಾಜ್ಯ,ರಾಷ್ಟ್ರೀಯ ಮಟ್ಟದ ಮನ್ನಣೆ ಕೊಡಿಸಿದ್ದಮೇರು ಕಪ್ತಾನ ಶ್ರೀಪಾದ ಉಪಾಧ್ಯಾಯ, ಟೆನ್ನಿಸ್ ಕ್ರಿಕೆಟ್ ಸಂಜಯ್ ಮಂಜ್ರೇಕರ್ ಸತೀಶ್ ಕೋಟ್ಯಾನ್, ಪ್ರದೀಪ್ ವಾಜ್, ದಿನೇಶ್ ಗಾಣಿಗ ಬೈಂದೂರು, ಮನೋಜ್ ನಾಯರ್, ಕೆ.ಪಿ.ಸತೀಶ್ ರಿಗೆ ಈ ಪಂದ್ಯ ಪ್ರಾರಂಭದ ದಿನಗಳು.

ಅಂದಿನ ದಿನಗಳ ಬೈಂದೂರಿನ ಪರಿಸರದ ಶಿಸ್ತು ಹಾಗೂ ಸಂಯೋಜಿತ ತಂಡ ವಿಕ್ರಂ ತಂಡ ಹಲವಾರು ಪಂದ್ಯಾಕೂಟಗಳನ್ನು ಆಯೋಜಿಸಿದ್ದ ಬೈಂದೂರಿನ ಗಾಂಧಿಮೈದಾನದ ವಿಶಾಲ ಅಂಗಣ ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರದ ಹಲವು ಯುವ ಕ್ರಿಕೆಟಿಗರ ಭವಿಷ್ಯ ರೂಪಿಸಿತ್ತು‌. ಅಂತರಾಷ್ಟ್ರೀಯ ಕ್ರಿಕೆಟಿಗರಿಗೆ ಇಂಗ್ಲೆಂಡ್ ನ ಲಾರ್ಡ್ಸ್ ಕ್ರಿಕೆಟ್ ಕಾಶಿಯಾದರೆ, ಟೆನ್ನಿಸ್ ಕ್ರಿಕೆಟಿಗರ ಪಾಲಿಗೆ ಬೈಂದೂರಿನ ಗಾಂಧಿಮೈದಾನ ಕ್ರಿಕೆಟ್ ಸ್ವರ್ಗವಾಗಿತ್ತು.

ಈ ಅಂಗಣದಲ್ಲಿ ಹಿರಿಯ ತಂಡ ಜೈ ಕರ್ನಾಟಕ ಬೆಂಗಳೂರು,ಪಡುಬಿದ್ರಿ,ಸನ್ನಿ ಉಡುಪಿ,ವೀರಕೇಸರಿ ಇನ್ನಿತರ ತಂಡಗಳು ಹಲವು ದಾಖಲೆಗಳನ್ನು ಬರೆದಿದೆ.ಇಂದಿಗೆ 30 ವರ್ಷಗಳು ಸರಿದರೂ ರಾಜ್ಯದ ಹಿರಿಯ ಟೆನ್ನಿಸ್ ಕ್ರಿಕೆಟಿಗರು ನೆನಪುಗಳನ್ನು ಸದಾ ಸ್ಮರಿಸುತ್ತಾರೆ. ಆ ಎಲ್ಲಾ ತಂಡಗಳ,ಎಲ್ಲಾ ಗತಕಾಲದ ನೆನಪುಗಳನ್ನು ಮುಂದಿನ ದಿನಗಳಲ್ಲಿ ಪ್ರತಿ ರವಿವಾರ ನಿಮ್ಮೆಲ್ಲರ ಪ್ರೀತಿಯ “ಸ್ಪೋರ್ಟ್ಸ್ ಕನ್ನಡ” ವೆಬ್ಸೈಟ್ ನಲ್ಲಿ ಬರೆಯುವೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 2 =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you