ಕ್ರಿಕೆಟ್ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಯ ಸದುದ್ದೇಶದೊಂದಿಗೆ-ಫ್ರೆಂಡ್ಸ್ ಬೆಂಗಳೂರು ಆಯೋಜನೆಯಲ್ಲಿ ಬೃಹತ್ ಕ್ರಿಕೆಟ್ ಹಬ್ಬ

ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಯ ಸದುದ್ದೇಶದೊಂದಿಗೆ-ಫ್ರೆಂಡ್ಸ್ ಬೆಂಗಳೂರು ಆಯೋಜನೆಯಲ್ಲಿ ಬೃಹತ್ ಕ್ರಿಕೆಟ್ ಹಬ್ಬ

-

- Advertisment -spot_img
*”ಇದು ಹಣಕ್ಕಾಗಿ ಅಲ್ಲ-ಕ್ರಿಕೆಟ್ ನ ಗೆಲುವಿಗಾಗಿ”*
 
“ಇತ್ತೀಚಿನ ದಿನಗಳಲ್ಲಿ ಹಲವಾರು ಕಾರಣಗಳಿಂದ ತಂಡಗಳ ಗಣನೀಯ ಇಳಿಕೆಯ ಪ್ರಮಾಣ,ತಂಡಗಳ ವ್ಯವಸ್ಥಾಪಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮನಗಂಡು,ಫ್ರೆಂಡ್ಸ್ ಬೆಂಗಳೂರು ತಂಡ ವೈಶಿಷ್ಟ್ಯಪೂರ್ಣ ಪಂದ್ಯಾಟ ಆಯೋಜಿಸಿದ್ದು,ಸಂಪೂರ್ಣ ಉಚಿತ ಪ್ರವೇಶಾತಿಯೊಂದಿಗೆ ಕರ್ನಾಟಕದ 8 ಪ್ರತಿಷ್ಠಿತ ತಂಡಗಳು-ಹೊರ ರಾಜ್ಯದ 8 ತಂಡಗಳು-ಜಿಲ್ಲಾಮಟ್ಟದ ತಂಡಗಳಿಗೆ ಸಮಾನಾವಕಾಶ ಕಲ್ಪಿಸಿದೆ.
ಕಳೆದ ಹಲವಾರು ವರ್ಷಗಳಿಂದ ತಂಡಗಳನ್ನು ಮುನ್ನಡೆಸುತ್ತಿರುವ ತಂಡಗಳ ವ್ಯವಸ್ಥಾಪಕರಿಗೆ ಈ ಪಂದ್ಯಾಟ ಅರ್ಪಣೆ”
ಎಂದು ಫ್ರೆಂಡ್ಸ್ ಬೆಂಗಳೂರು ತಂಡದ ಮಾಲೀಕರಾದ ರೇಣು ಗೌಡ ಇವರು ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ಇಂದು ತಿಳಿಸಿದ್ದಾರೆ.
 
ಫ್ರೆಂಡ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ರಾಘವೇಂದ್ರ.ಎನ್.ಜಿ ಅನ್ಪ್ರೆಡಿಕ್ಟೇಬಲ್ ಕೆ.ಆರ್.ಪುರಂ ಇವರು ಪ್ರಪ್ರಥಮ ಬಾರಿಗೆ 2019 ರಲ್ಲಿ ರಾಜ್ಯ ಮಟ್ಟದ ಉಚಿತ ಪ್ರವೇಶಾತಿಯ ಕ್ರಿಕೆಟ್ ಪಂದ್ಯಾಟವನ್ನು ಸಂಘಟಿಸಿದ್ದರು.
 
ಈ ಬಾರಿ ಫ್ರೆಂಡ್ಸ್ ಬೆಂಗಳೂರು ಹಿರಿಯ-ಕಿರಿಯರು,
ತಂಡದ ಬೆಂಬಲಿಗರ ಸಹಯೋಗದೊಂದಿಗೆ 2023 ಜನವರಿ 25,26,27,28,29 ಐದು ದಿನಗಳ ಕಾಲ ಪೀಣ್ಯ 2 ನೇ ಹಂತದ ಬಳಿ ವಿಶೇಷವಾಗಿ ಸಜ್ಜುಗೊಳಿಸಲಾಗುವ ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ದಾಖಲೆಯ ಪಂದ್ಯಾಟ ನಡೆಸಲು ಭರದಿಂದ ಸಿದ್ಧತೆ ನಡೆಯುತ್ತಿದೆ.
 
ರಾಷ್ಟ್ರೀಯ ಮಟ್ಟದಲ್ಲೇ ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ನಡೆಯಲಿರುವ ಈ ಐತಿಹಾಸಿಕ ಕ್ರಿಕೆಟ್ ಪಂದ್ಯಾವಳಿ
ಯಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್‌ ತಂಡ ಗರಿಷ್ಠ ನಗದು 5,05,000 ರೂ,ದ್ವಿತೀಯ 2,50,000 ನಗದು ಬಹುಮಾನ ಸಹಿತ ವಿಶಿಷ್ಟ ಟ್ರೋಫಿಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದ ಆಟಗಾರರು ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × five =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you