19.4 C
London
Friday, May 17, 2024
Homeಕ್ರಿಕೆಟ್ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಯ ಸದುದ್ದೇಶದೊಂದಿಗೆ-ಫ್ರೆಂಡ್ಸ್ ಬೆಂಗಳೂರು ಆಯೋಜನೆಯಲ್ಲಿ ಬೃಹತ್ ಕ್ರಿಕೆಟ್ ಹಬ್ಬ

ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಯ ಸದುದ್ದೇಶದೊಂದಿಗೆ-ಫ್ರೆಂಡ್ಸ್ ಬೆಂಗಳೂರು ಆಯೋಜನೆಯಲ್ಲಿ ಬೃಹತ್ ಕ್ರಿಕೆಟ್ ಹಬ್ಬ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
*”ಇದು ಹಣಕ್ಕಾಗಿ ಅಲ್ಲ-ಕ್ರಿಕೆಟ್ ನ ಗೆಲುವಿಗಾಗಿ”*
 
“ಇತ್ತೀಚಿನ ದಿನಗಳಲ್ಲಿ ಹಲವಾರು ಕಾರಣಗಳಿಂದ ತಂಡಗಳ ಗಣನೀಯ ಇಳಿಕೆಯ ಪ್ರಮಾಣ,ತಂಡಗಳ ವ್ಯವಸ್ಥಾಪಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮನಗಂಡು,ಫ್ರೆಂಡ್ಸ್ ಬೆಂಗಳೂರು ತಂಡ ವೈಶಿಷ್ಟ್ಯಪೂರ್ಣ ಪಂದ್ಯಾಟ ಆಯೋಜಿಸಿದ್ದು,ಸಂಪೂರ್ಣ ಉಚಿತ ಪ್ರವೇಶಾತಿಯೊಂದಿಗೆ ಕರ್ನಾಟಕದ 8 ಪ್ರತಿಷ್ಠಿತ ತಂಡಗಳು-ಹೊರ ರಾಜ್ಯದ 8 ತಂಡಗಳು-ಜಿಲ್ಲಾಮಟ್ಟದ ತಂಡಗಳಿಗೆ ಸಮಾನಾವಕಾಶ ಕಲ್ಪಿಸಿದೆ.
ಕಳೆದ ಹಲವಾರು ವರ್ಷಗಳಿಂದ ತಂಡಗಳನ್ನು ಮುನ್ನಡೆಸುತ್ತಿರುವ ತಂಡಗಳ ವ್ಯವಸ್ಥಾಪಕರಿಗೆ ಈ ಪಂದ್ಯಾಟ ಅರ್ಪಣೆ”
ಎಂದು ಫ್ರೆಂಡ್ಸ್ ಬೆಂಗಳೂರು ತಂಡದ ಮಾಲೀಕರಾದ ರೇಣು ಗೌಡ ಇವರು ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ಇಂದು ತಿಳಿಸಿದ್ದಾರೆ.
 
ಫ್ರೆಂಡ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ರಾಘವೇಂದ್ರ.ಎನ್.ಜಿ ಅನ್ಪ್ರೆಡಿಕ್ಟೇಬಲ್ ಕೆ.ಆರ್.ಪುರಂ ಇವರು ಪ್ರಪ್ರಥಮ ಬಾರಿಗೆ 2019 ರಲ್ಲಿ ರಾಜ್ಯ ಮಟ್ಟದ ಉಚಿತ ಪ್ರವೇಶಾತಿಯ ಕ್ರಿಕೆಟ್ ಪಂದ್ಯಾಟವನ್ನು ಸಂಘಟಿಸಿದ್ದರು.
 
ಈ ಬಾರಿ ಫ್ರೆಂಡ್ಸ್ ಬೆಂಗಳೂರು ಹಿರಿಯ-ಕಿರಿಯರು,
ತಂಡದ ಬೆಂಬಲಿಗರ ಸಹಯೋಗದೊಂದಿಗೆ 2023 ಜನವರಿ 25,26,27,28,29 ಐದು ದಿನಗಳ ಕಾಲ ಪೀಣ್ಯ 2 ನೇ ಹಂತದ ಬಳಿ ವಿಶೇಷವಾಗಿ ಸಜ್ಜುಗೊಳಿಸಲಾಗುವ ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ದಾಖಲೆಯ ಪಂದ್ಯಾಟ ನಡೆಸಲು ಭರದಿಂದ ಸಿದ್ಧತೆ ನಡೆಯುತ್ತಿದೆ.
 
ರಾಷ್ಟ್ರೀಯ ಮಟ್ಟದಲ್ಲೇ ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ನಡೆಯಲಿರುವ ಈ ಐತಿಹಾಸಿಕ ಕ್ರಿಕೆಟ್ ಪಂದ್ಯಾವಳಿ
ಯಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್‌ ತಂಡ ಗರಿಷ್ಠ ನಗದು 5,05,000 ರೂ,ದ್ವಿತೀಯ 2,50,000 ನಗದು ಬಹುಮಾನ ಸಹಿತ ವಿಶಿಷ್ಟ ಟ್ರೋಫಿಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದ ಆಟಗಾರರು ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

thirteen − 1 =