ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಟೆನಿಸ್ಬಾಲ್ ಕ್ರಿಕೆಟ್ ಗೆ ಪುನರ್ಜನ್ಮ ನೀಡುವ ಟಿ‌‌‌.ಸಿ.ಎ ಉಡುಪಿ ಪ್ರಯತ್ನ ಶ್ಲಾಘನೀಯ-ಪ್ರಶಾಂತ್...

ಟೆನಿಸ್ಬಾಲ್ ಕ್ರಿಕೆಟ್ ಗೆ ಪುನರ್ಜನ್ಮ ನೀಡುವ ಟಿ‌‌‌.ಸಿ.ಎ ಉಡುಪಿ ಪ್ರಯತ್ನ ಶ್ಲಾಘನೀಯ-ಪ್ರಶಾಂತ್ ಕುಂದರ್

-

- Advertisment -spot_img
*ಸ್ಪೋರ್ಟ್ಸ್ ಕನ್ನಡ ವರದಿ*
ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ಟಿ.ಸಿ.ಎ ಉಡುಪಿ ಆಶ್ರಯದಲ್ಲಿ  ಉಡುಪಿ-ದ.ಕ ಜಿಲ್ಲಾ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ದೊರಕಿತು.
ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಉದ್ಯಮಿ ಪ್ರಶಾಂತ್ ಕುಂದರ್ “ಗಿಡ ಸುಂದರವಾಗಿ ಕಾಣಲು ಹೂವು ಎಷ್ಟು ಮುಖ್ಯವೋ,ಪದಾರ್ಥಕ್ಕೆ ಉಪ್ಪು ಖಾರ ಎಷ್ಟು ಮುಖ್ಯವೋ ಅಂತೆಯೇ ಮನುಷ್ಯನ ಜೀವನದಲ್ಲಿ ಕ್ರೀಡೆಯೂ ಮುಖ್ಯವಾಗಿರುತ್ತದೆ ಈ ನಿಟ್ಟಿನಲ್ಲಿ ಅಳಿವಿನಂಚಿನಲ್ಲಿರುವ ಟೆನಿಸ್ಬಾಲ್ ಕ್ರಿಕೆಟ್ ಉಳಿಸುವ ಟಿ.ಸಿ.ಎ ಪ್ರಯತ್ನ ಶ್ಲಾಘನೀಯ” ಎಂದರು.
ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಟಿ‌‌.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ “ಅಂತರಾಷ್ಟ್ರೀಯ ಆಟಗಾರರೂ ಕೂಡ ತಮ್ಮ ಕ್ರೀಡಾ ಜೀವನವನ್ನು ಟೆನಿಸ್ಬಾಲ್ ಕ್ರಿಕೆಟ್ ನಿಂದಲೇ ಪ್ರಾರಂಭಿಸಿದ್ದು,ಲೆದರ್ ಬಾಲ್ ಕ್ರಿಕೆಟ್ ಕೆಲವೇ ಕೆಲವು ಅಕಾಡೆಮಿ ಹಾಗೂ ವಿದ್ಯಾಸಂಸ್ಥೆಗಳಿಗೆ ಸೀಮಿತವಾಗಿದೆ ಆದ್ದರಿಂದ ಉಡುಪಿ-ದ.ಕ ಜಿಲ್ಲಾ ವಿದ್ಯಾಸಂಸ್ಥೆಗಳಿಗೆ ಮುಕ್ತ ಆಹ್ವಾನ ನೀಡಿದ್ದು 64 ವಿದ್ಯಾಸಂಸ್ಥೆಗಳು ಈ ಟೂರ್ನಮೆಂಟ್ ನ ಭಾಗವಾಗಲಿವೆ.ಮುಂದಿನ ದಿನಗಳಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಪ್ರತಿಭೆಗಳಿಗೂ ಭವಿಷ್ಯದಲ್ಲಿ ಕ್ರೀಡಾಜೀವನಕ್ಕೆ ಸರ್ವ ಸಹಕಾರ ನೀಡಲಿದ್ದೇವೆ” ಎಂದರು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಪಂದ್ಯಾಟದಲ್ಲಿ ಭಾಗವಹಿಸಿದ ಶಾಲಾ-ಕಾಲೇಜು ತಂಡದ ವಿದ್ಯಾರ್ಥಿಗಳಿಗೆ ಹಸ್ತಲಾಘವ ನೀಡಿ ಶುಭ ಹಾರೈಸಿದರು.ಈ ಸಂದರ್ಭ ರೋಶನ್ ಕುಮಾರ್ ಶೆಟ್ಟಿ,ಉದ್ಯಮಿ
ಚಿತ್ತರಂಜನ್ ಹೆಗ್ಡೆ ಹರ್ಕೂರು,ರಮೇಶ್ ಶೆಟ್ಟಿ, ಕುಸುಮಾಕರ್ ಶೆಟ್ಟಿ, ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ,ಯಾದವ್‌ ನಾಯಕ್ ಕೆಮ್ಮಣ್ಣು,ಸದಾನಂದ ಶಿರ್ವ,
ನಾರಾಯಣ ಶೆಟ್ಟಿ ಮಾರ್ಕೋಡು,ಶಂಕರ್ ಅಂಕದಕಟ್ಟೆ,ಸುಧೀರ್.ಕೆ.ಎಸ್,
ಚೇತನ್ ಕುಮಾರ್ ದೇವಾಡಿಗ,ಕೋಟ ರಾಮಕೃಷ್ಣ ಆಚಾರ್ ಸ್ಪೋರ್ಟ್ಸ್ ಕನ್ನಡ,ಶಿವನಾರಾಯಣ ಐತಾಳ್ ಕೋಟ,ಟಿ‌.ಸಿ.ಎ ಪದಾಧಿಕಾರಿಗಳು ಮತ್ತು ಸದಸ್ಯರು,ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
*ಪ್ರಥಮ ದಿನ ಭಾಗವಹಿಸಿದ 12 ತಂಡಗಳು*
ಟಿ‌.ಸಿ.ಎ ಉಡುಪಿ ಆಯೋಜಿಸಿದ ಶಾಲಾ-ಕಾಲೇಜು ಮಟಯ ಕ್ರಿಕೆಟ್ ಪಂದ್ಯಾಟದ ಮೊದಲ ದಿನ,
ಭಂಡಾರ್ಕರ್ಸ್ ಕಾಲೇಜು ಕುಂದಾಪುರ,ಜಿ.ಎಫ್.ಜಿ.ಸಿ ಶಂಕರನಾರಾಯಣ,ಯು.ಪಿ.ಎಂ.ಸಿ ಉಡುಪಿ,ಎಮ್.ಪಿ.ಯು‌.ಸಿ ಮಣಿಪಾಲ,ಗೋವಿಂದದಾಸ್ ಕಾಲೇಜ್ ಸುರತ್ಕಲ್,ಭಂಡಾರ್ಕರ್ಸ್ ಪಿ.ಯು ಕಾಲೇಜ್,ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಮಣಿಪಾಲ,ಐ.ಎಮ್‌.ಜೆ ಮೂಡ್ಲಕಟ್ಟೆ,ಜಿ.ಎಫ್.ಜಿ.ಸಿ ತೆಂಕನಿಡಿಯೂರು,ಜಿ.ಪಿ.ಟಿ ಮಣಿಪಾಲ,ಬಿ.ಬಿ ಹೆಗ್ಡೆ ಕಾಲೇಜ್ ಕುಂದಾಪುರ ಹೀಗೆ ಒಟ್ಟು 12 ತಂಡಗಳು ಭಾಗವಹಿಸಿದ್ದವು.
*4 ತಂಡಗಳು ಕ್ವಾರ್ಟರ್ ಫೈನಲ್ ಗೆ*
ಪ್ರಥಮ ದಿನದಾಂತ್ಯದಲ್ಲಿ
ಜಿ‌.ಎಫ್.ಜಿ‌‌.ಸಿ ಶಂಕರನಾರಾಯಣ,
ಭಂಡಾರ್ಕರ್ಸ್ ಪಿ.ಯು ಕಾಲೇಜ್,
ಐ.ಎಮ್.ಜೆ ಮೂಡ್ಲಕಟ್ಟೆ ಮತ್ತು ಜಿ‌.ಪಿ‌‌.ಟಿ ಮಣಿಪಾಲ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.
ಭರತ್ ಪಟೇಲ್,ಪ್ರೀತೇಶ್ 2 ಬಾರಿ,ರೋಹಿತ್,ಸುಹಾಗ್,ಅನ್ವಿತ್,ಫಲ್ಗುಣ್,ಕೌಶಿಕ್,ಶ್ರೇಯಸ್,
ಪ್ರೀತೇಶ್,ಶ್ರೇಯಸ್ ಶೆಣೈ ಮತ್ತು ಸಂತೋಷ್  ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen − 1 =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you