SportsKannada | ಸ್ಪೋರ್ಟ್ಸ್ ಕನ್ನಡ

ಟೆನಿಸ್ಬಾಲ್ ಕ್ರಿಕೆಟ್ ಗೆ ಪುನರ್ಜನ್ಮ ನೀಡುವ ಟಿ‌‌‌.ಸಿ.ಎ ಉಡುಪಿ ಪ್ರಯತ್ನ ಶ್ಲಾಘನೀಯ-ಪ್ರಶಾಂತ್ ಕುಂದರ್

*ಸ್ಪೋರ್ಟ್ಸ್ ಕನ್ನಡ ವರದಿ*
ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ಟಿ.ಸಿ.ಎ ಉಡುಪಿ ಆಶ್ರಯದಲ್ಲಿ  ಉಡುಪಿ-ದ.ಕ ಜಿಲ್ಲಾ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ದೊರಕಿತು.
ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಉದ್ಯಮಿ ಪ್ರಶಾಂತ್ ಕುಂದರ್ “ಗಿಡ ಸುಂದರವಾಗಿ ಕಾಣಲು ಹೂವು ಎಷ್ಟು ಮುಖ್ಯವೋ,ಪದಾರ್ಥಕ್ಕೆ ಉಪ್ಪು ಖಾರ ಎಷ್ಟು ಮುಖ್ಯವೋ ಅಂತೆಯೇ ಮನುಷ್ಯನ ಜೀವನದಲ್ಲಿ ಕ್ರೀಡೆಯೂ ಮುಖ್ಯವಾಗಿರುತ್ತದೆ ಈ ನಿಟ್ಟಿನಲ್ಲಿ ಅಳಿವಿನಂಚಿನಲ್ಲಿರುವ ಟೆನಿಸ್ಬಾಲ್ ಕ್ರಿಕೆಟ್ ಉಳಿಸುವ ಟಿ.ಸಿ.ಎ ಪ್ರಯತ್ನ ಶ್ಲಾಘನೀಯ” ಎಂದರು.
ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಟಿ‌‌.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ “ಅಂತರಾಷ್ಟ್ರೀಯ ಆಟಗಾರರೂ ಕೂಡ ತಮ್ಮ ಕ್ರೀಡಾ ಜೀವನವನ್ನು ಟೆನಿಸ್ಬಾಲ್ ಕ್ರಿಕೆಟ್ ನಿಂದಲೇ ಪ್ರಾರಂಭಿಸಿದ್ದು,ಲೆದರ್ ಬಾಲ್ ಕ್ರಿಕೆಟ್ ಕೆಲವೇ ಕೆಲವು ಅಕಾಡೆಮಿ ಹಾಗೂ ವಿದ್ಯಾಸಂಸ್ಥೆಗಳಿಗೆ ಸೀಮಿತವಾಗಿದೆ ಆದ್ದರಿಂದ ಉಡುಪಿ-ದ.ಕ ಜಿಲ್ಲಾ ವಿದ್ಯಾಸಂಸ್ಥೆಗಳಿಗೆ ಮುಕ್ತ ಆಹ್ವಾನ ನೀಡಿದ್ದು 64 ವಿದ್ಯಾಸಂಸ್ಥೆಗಳು ಈ ಟೂರ್ನಮೆಂಟ್ ನ ಭಾಗವಾಗಲಿವೆ.ಮುಂದಿನ ದಿನಗಳಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಪ್ರತಿಭೆಗಳಿಗೂ ಭವಿಷ್ಯದಲ್ಲಿ ಕ್ರೀಡಾಜೀವನಕ್ಕೆ ಸರ್ವ ಸಹಕಾರ ನೀಡಲಿದ್ದೇವೆ” ಎಂದರು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಪಂದ್ಯಾಟದಲ್ಲಿ ಭಾಗವಹಿಸಿದ ಶಾಲಾ-ಕಾಲೇಜು ತಂಡದ ವಿದ್ಯಾರ್ಥಿಗಳಿಗೆ ಹಸ್ತಲಾಘವ ನೀಡಿ ಶುಭ ಹಾರೈಸಿದರು.ಈ ಸಂದರ್ಭ ರೋಶನ್ ಕುಮಾರ್ ಶೆಟ್ಟಿ,ಉದ್ಯಮಿ
ಚಿತ್ತರಂಜನ್ ಹೆಗ್ಡೆ ಹರ್ಕೂರು,ರಮೇಶ್ ಶೆಟ್ಟಿ, ಕುಸುಮಾಕರ್ ಶೆಟ್ಟಿ, ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ,ಯಾದವ್‌ ನಾಯಕ್ ಕೆಮ್ಮಣ್ಣು,ಸದಾನಂದ ಶಿರ್ವ,
ನಾರಾಯಣ ಶೆಟ್ಟಿ ಮಾರ್ಕೋಡು,ಶಂಕರ್ ಅಂಕದಕಟ್ಟೆ,ಸುಧೀರ್.ಕೆ.ಎಸ್,
ಚೇತನ್ ಕುಮಾರ್ ದೇವಾಡಿಗ,ಕೋಟ ರಾಮಕೃಷ್ಣ ಆಚಾರ್ ಸ್ಪೋರ್ಟ್ಸ್ ಕನ್ನಡ,ಶಿವನಾರಾಯಣ ಐತಾಳ್ ಕೋಟ,ಟಿ‌.ಸಿ.ಎ ಪದಾಧಿಕಾರಿಗಳು ಮತ್ತು ಸದಸ್ಯರು,ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
*ಪ್ರಥಮ ದಿನ ಭಾಗವಹಿಸಿದ 12 ತಂಡಗಳು*
ಟಿ‌.ಸಿ.ಎ ಉಡುಪಿ ಆಯೋಜಿಸಿದ ಶಾಲಾ-ಕಾಲೇಜು ಮಟಯ ಕ್ರಿಕೆಟ್ ಪಂದ್ಯಾಟದ ಮೊದಲ ದಿನ,
ಭಂಡಾರ್ಕರ್ಸ್ ಕಾಲೇಜು ಕುಂದಾಪುರ,ಜಿ.ಎಫ್.ಜಿ.ಸಿ ಶಂಕರನಾರಾಯಣ,ಯು.ಪಿ.ಎಂ.ಸಿ ಉಡುಪಿ,ಎಮ್.ಪಿ.ಯು‌.ಸಿ ಮಣಿಪಾಲ,ಗೋವಿಂದದಾಸ್ ಕಾಲೇಜ್ ಸುರತ್ಕಲ್,ಭಂಡಾರ್ಕರ್ಸ್ ಪಿ.ಯು ಕಾಲೇಜ್,ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಮಣಿಪಾಲ,ಐ.ಎಮ್‌.ಜೆ ಮೂಡ್ಲಕಟ್ಟೆ,ಜಿ.ಎಫ್.ಜಿ.ಸಿ ತೆಂಕನಿಡಿಯೂರು,ಜಿ.ಪಿ.ಟಿ ಮಣಿಪಾಲ,ಬಿ.ಬಿ ಹೆಗ್ಡೆ ಕಾಲೇಜ್ ಕುಂದಾಪುರ ಹೀಗೆ ಒಟ್ಟು 12 ತಂಡಗಳು ಭಾಗವಹಿಸಿದ್ದವು.
*4 ತಂಡಗಳು ಕ್ವಾರ್ಟರ್ ಫೈನಲ್ ಗೆ*
ಪ್ರಥಮ ದಿನದಾಂತ್ಯದಲ್ಲಿ
ಜಿ‌.ಎಫ್.ಜಿ‌‌.ಸಿ ಶಂಕರನಾರಾಯಣ,
ಭಂಡಾರ್ಕರ್ಸ್ ಪಿ.ಯು ಕಾಲೇಜ್,
ಐ.ಎಮ್.ಜೆ ಮೂಡ್ಲಕಟ್ಟೆ ಮತ್ತು ಜಿ‌.ಪಿ‌‌.ಟಿ ಮಣಿಪಾಲ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.
ಭರತ್ ಪಟೇಲ್,ಪ್ರೀತೇಶ್ 2 ಬಾರಿ,ರೋಹಿತ್,ಸುಹಾಗ್,ಅನ್ವಿತ್,ಫಲ್ಗುಣ್,ಕೌಶಿಕ್,ಶ್ರೇಯಸ್,
ಪ್ರೀತೇಶ್,ಶ್ರೇಯಸ್ ಶೆಣೈ ಮತ್ತು ಸಂತೋಷ್  ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.
Exit mobile version