ಕ್ರಿಕೆಟ್ರೋಮಾಂಚನದ ಹಾದಿಯಲ್ಲಿ ಸಾಗಿದ ಭಾರತ-ಪಾಕಿಸ್ತಾನ ಘರ್ಷಣೆ

ರೋಮಾಂಚನದ ಹಾದಿಯಲ್ಲಿ ಸಾಗಿದ ಭಾರತ-ಪಾಕಿಸ್ತಾನ ಘರ್ಷಣೆ

-

- Advertisment -spot_img

ರೋಮಾಂಚನದ ಹಾದಿಯಲ್ಲಿ ಸಾಗಿದ ಭಾರತ-ಪಾಕಿಸ್ತಾನ ಘರ್ಷಣೆ

ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿರುವ ಏಷ್ಯಾ ಕಪ್ 2025 ಫೈನಲ್ ಪಂದ್ಯ ಭಾರತ-ಪಾಕಿಸ್ತಾನ ನಡುವಿನ ಶಾಶ್ವತ ಪೈಪೋಟಿಯನ್ನು ಮತ್ತೊಮ್ಮೆ ನೆನಪಿಸಿತು. ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡು ಪ್ರಾರಂಭದಿಂದಲೇ ಪಾಕಿಸ್ತಾನಕ್ಕೆ ಒತ್ತಡ ಹಾಕಲು ಪ್ರಯತ್ನಿಸಿತು.

ಪಾಕಿಸ್ತಾನ ಶುರೂದಲ್ಲಿ ಬಲಿಷ್ಠ ಪ್ರದರ್ಶನ ತೋರಿತು. ಅವರ ಓಪನರ್ ಜೋಡಿ ಕೇವಲ 9.4 ಓವರ್‌ಗಳಲ್ಲಿ 84 ರನ್‌ಗಳ ಬೃಹತ್ ಸಹಭಾಗಿತ್ವ ನಿರ್ಮಿಸಿ ಭಾರತಕ್ಕೆ ಕಸರತ್ತು ಮಾಡಿಸಿದರು. ಆದರೆ ಅದಾದ ನಂತರ ಭಾರತೀಯ ಬೌಲರ್‌ಗಳು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ತೋರಿದರು. ಸ್ಪಿನ್ ಹಾಗೂ ವೇಗದ ಬೌಲಿಂಗ್‌ಗಳ ಸಮನ್ವಯದೊಂದಿಗೆ ಪಾಕಿಸ್ತಾನವನ್ನು 113/1 ರಿಂದ ಕೇವಲ 146 ರನ್‌ಗಳಿಗೆ ಕುಸಿದಂತೆ ಮಾಡಿದರು.

ಈ ಚಿಕ್ಕ ಗುರಿಯನ್ನು ಹಿಂಬಾಲಿಸಲು ಬಂದ ಭಾರತಕ್ಕೆ ಸ್ಫೋಟಕ ಆರಂಭ ಸಿಗಲಿಲ್ಲ. ಮೊದಲ ಏಳು ಓವರ್‌ಗಳಲ್ಲಿ 3 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಭಾರತ 42/3 ಸ್ಥಿತಿಗೆ ತಲುಪಿತು. ತಿಲಕ್ ವರ್ಮಾ ಮತ್ತು ಸಂಜು ಸ್ಯಾಮ್ಸನ್ ಕ್ರೀಸ್‌ನಲ್ಲಿ ನಿಂತು ಇನ್ನಿಂಗ್ಸ್ ಪುನರ್‌ನಿರ್ಮಾಣಕ್ಕೆ ಪ್ರಯತ್ನಿಸಿದರು.

ಪಾಕಿಸ್ತಾನ ನೀಡಿದ ಗುರಿ ಅಲ್ಪವಾದರೂ ಪ್ರಾರಂಭದಲ್ಲೇ ವಿಕೆಟ್‌ಗಳ ನಷ್ಟ ಭಾರತಕ್ಕೆ ಒತ್ತಡ ತಂದಿತ್ತು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಜವಾಬ್ದಾರಿಯುತ ಆಟ ಆಡಿ ಭಾರತ ಏಷ್ಯಾ ಕಪ್ ಕಿರೀಟ ಗೆಲ್ಲುವ ಹಾಗೆ ಮಾಡಿದರು. ತಿಲಕ್ ವರ್ಮಾ ಮತ್ತು ಸ್ಯಾಮ್ಸನ್ ಅವರ ಸಹಭಾಗಿತ್ವ ಪಂದ್ಯ ದಿಕ್ಕು ತೀರ್ಮಾನಿಸಿತು.

ಫೈನಲಾಗಿ ಭಾರತವು ಪಾಕಿಸ್ತಾನವನ್ನು ಮಣಿಸಿ ಕಿರೀಟವನ್ನು ತನ್ನದಾಗಿಸಿಕೊಂಡಿತು. ಆರಂಭದಲ್ಲಿ ಬೌಲರ್‌ಗಳ ಅದ್ಭುತ ಪ್ರದರ್ಶನ ಹಾಗೂ ಬಳಿಕ ತಿಲಕ್ ವರ್ಮಾ ಅವರ ಶ್ರೇಷ್ಠ ಬ್ಯಾಟಿಂಗ್ ಈ ಜಯಕ್ಕೆ ಪ್ರಮುಖ ಕಾರಣವಾಯಿತು.

LEAVE A REPLY

Please enter your comment!
Please enter your name here

four × 5 =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you