6.1 C
London
Wednesday, April 17, 2024
Homeಇತರೆಇಂದು ಸಾಲಿಗ್ರಾಮದಲ್ಲಿ ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಬೆಳ್ಳಿ ಹಬ್ಬದ ಪ್ರಯುಕ್ತ "ಮಕ್ಕಳ...

ಇಂದು ಸಾಲಿಗ್ರಾಮದಲ್ಲಿ ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಬೆಳ್ಳಿ ಹಬ್ಬದ ಪ್ರಯುಕ್ತ “ಮಕ್ಕಳ ಹಬ್ಬ ಹಾಗೂ ಸ್ವರಾಂಜಲಿ”

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img

ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಬೆಳ್ಳಿ ಹಬ್ಬದ ಪ್ರಯುಕ್ತ “ಮಕ್ಕಳ ಹಬ್ಬ ಹಾಗೂ ಸ್ವರಾಂಜಲಿ” ಸಾಲಿಗ್ರಾಮದಲ್ಲಿ ಇಂದು.

ಕ್ರೀಡೆಯ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ,ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕಳೆದ ಎರಡೂವರೆ ದಶಕಗಳ ಹಿಂದೆ ಮೂರು ದಶಕಗಳಿಂದ ರಾಜ್ಯ ಟೆನ್ನಿಸ್ ಕ್ರಿಕೆಟ್ ನ ಅನುಭವಿ ವೀಕ್ಷಕ ವಿವರಣೆಕಾರ ಹಾಗೂ ಅಂಪಾಯರ್ ಕೋಟ ಶಿವನಾರಾಯಣ ಐತಾಳ್ ರವರು ಸ್ಥಾಪಿಸಿದ್ದ ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವನ್ನು ಸ್ಥಾಪಿಸಿದ್ದರು.

ಜಿಲ್ಲಾ ಮಟ್ಟದ ಡಬಲ್ ವಿಕೆಟ್ ಪಂದ್ಯಾವಳಿ ಮೊತ್ತ ಮೊದಲ ಬಾರಿಗೆ ಸಂಘಟಿಸಿದ್ದು,
ಟೊರ್ಪೆಡೋಸ್ ಕ್ಲಬ್ ನ ಅಧ್ಯಕ್ಷ ಗೌತಮ್ ಶೆಟ್ಟಿ ಹಾಗೂ ಟೆನ್ನಿಸ್ ಬಾಲ್ ನ ತೆಂಡುಲ್ಕರ್ ಹರಿಪ್ರಸನ್ನ(ಪುಟ್ಟ)ಪ್ರಥಮ ಸ್ಥಾನಗಳಿಸಿದ್ದು,ಇಲೆವೆನ್ ಅಪ್ ಕೋಟ ತಂಡದ ಪದ್ಮನಾಭ ಆಚಾರ್ ಹಾಗೂ ಮಿಥುನ್ ಹಂದೆ ದ್ವಿತೀಯ ಬಹುಮಾನ ಗಳಿಸಿರುವುದು


ನೆನಪಿನ ಪುಟಗಳಲ್ಲಿ ಅಚ್ಚಳಿಯದೆ ಉಳಿದಿದೆ.ಅಂತೆಯೇ ಒಂದು ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ,2 ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಹಾಗೂ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ ಸಂಸ್ಥೆ ಇಂದು ಬೆಳ್ಳಿ ಹಬ್ಬವನ್ನು ಆಚರಿಸುತ್ತಿದೆ.

ಈ ಪ್ರಯುಕ್ತ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಬಯಲು ರಂಗ ಮಂದಿರದಲ್ಲಿ ಇಂದು ಸಂಜೆ 6.30 ಕ್ಕೆ ಮಕ್ಕಳ ಹಬ್ಬ ಹಾಗೂ ಸ್ವರಾಂಜಲಿ-2 ಕಾರ್ಯಕ್ರಮ ನಡೆಯಲಿದೆ.

ಸರಿಗಮಪ ಖ್ಯಾತಿಯ ಡಾ|ಅಭಿಷೇಕ್ ರಾವ್,ಉದಯ ಸಿಂಗರ್ ಖ್ಯಾತಿಯ ವೈಷ್ಣವಿ ರವಿ,ಮಜಾ ಭಾರತ ಖ್ಯಾತಿಯ
ಜ್ಯೂನಿಯರ್ ಗುರುಕಿರಣ್,ಬಾಲನಟಿ
ಪ್ರಣತಿ ಸಾಲಿಗ್ರಾಮ ಬೆಂಗಳೂರು,
ರಾಷ್ಟ್ರೀಯ ಯೋಗಪಟು
ತನ್ವಿತಾ.ವಿ.ಕುಂದಾಪುರ,
ಶಿವನಾರಾಯಣ ಐತಾಳ್ ರ ಸುಪುತ್ರ ಶ್ರೀರಾಮ್ ಇವರಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದ್ದು ಅವಿನಾಶ್ ಕಾಮತ್ ನಿರೂಪಣೆ ನಡೆಸಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮಕ್ಕೆ ಸಮಾಜ ಸೇವಕರು ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಕಾಪು,ಶ್ರೀ ಅನಂತ ಪದ್ಮನಾಭ ಐತಾಳ್ ಆಡಳಿತ ಧರ್ಮದರ್ಶಿಗಳು ಶ್ರೀ ಗುರುನರಸಿಂಹ ದೇವಸ್ಥಾನ ಹಾಗೂ
ಮುಖ್ಯ ಅತಿಥಿಗಳಾಗಿ ಶ್ರೀ ಯಶ್ ಪಾಲ್ ಸುವರ್ಣ ಸಹಕಾರಿ ಧುರೀಣರು ಉಡುಪಿ ಹಾಗೂ ಗೀತಾನಂದ ಫೌಂಡೇಶನ್ ಮಣೂರಿನ ಪ್ರವರ್ತಕರಾದ ಶ್ರೀ ಆನಂದ್.ಸಿ.ಕುಂದರ್ ಭಾಗವಹಿಸಲಿದ್ದಾರೆ.
ಆರ್.ಕೆ.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eighteen + five =