9 C
London
Wednesday, April 17, 2024
Homeಕ್ರಿಕೆಟ್ಇಂದು ವೆಸ್ಟ್ ಇಂಡೀಸ್ ಮತ್ತು ಭಾರತ ನಡುವೆ ಮೊದಲ ಟಿ20

ಇಂದು ವೆಸ್ಟ್ ಇಂಡೀಸ್ ಮತ್ತು ಭಾರತ ನಡುವೆ ಮೊದಲ ಟಿ20

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img

ಇಂಗ್ಲೆಂಡ್‌ನಲ್ಲಿ ನಡೆದ 2019ರ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಸೋತ ಬಳಿಕ ಭಾರತ ತಂಡ ತನ್ನ ಮೊದಲ ಪ್ರವಾಸ ಆರಂಭಿಸಿದೆ. ಈಗಾಗಲೇ ವೆಸ್ಟ್ ಇಂಡೀಸ್ ತಲುಪಿರುವ ತಂಡ ನಾಳೆ ವಿಂಡೀಸ್ ವಿರುದ್ದ ಮೊದಲ ಟಿ20 ಪಂದ್ಯವನ್ನಾಡಲಿದೆ.

ಹಲವು ಯುವ ಪ್ರತಿಭೆಗಳನ್ನು ಒಳಗೊಂಡಿರುವ ತಂಡ ಟಿ20,ಏಕದಿನ ಮತ್ತು ಟೆಸ್ಟ್ ಗಳನ್ನು ಗೆದ್ದು ವಿಶ್ವಕಪ್ ಸೋಲನ್ನು ಮರೆಯಲು ತಂಡ ಪ್ರಯತ್ನಿಸಬೇಕಾಗಿದೆ.ಭಾರತ ಪರ ರೋಹಿತ್ ಶರ್ಮಾ ರಾಹುಲ್ ಮತ್ತು ಧವನ್ ಬ್ಯಾಟಿಂಗ್ ನಲ್ಲಿ ಉತ್ತಮ ಲಯದಲ್ಲಿದ್ದಾರೆ ಹಾಗೆ ಬೌಲಿಂಗ್ ನಲ್ಲಿ ಅನುಭವಿ ಭುವಿ ಹಾಗೂ ಖಲೀಲ್ ಅಹಮ್ಮದ್ ಪ್ರಬಲ ಅಸ್ತ್ರ ಆಗಿದ್ದಾರೆ.

ವೆಸ್ಟ್ ಇಂಡೀಸ್ ಕೂಡ ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು ಭಾರತ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಮರಳಿ ಲಯಕ್ಕೆ ಹಿಂತಿರುಗಬೇಕಾದ ಅವಶ್ಯಕತೆ ಇದೆ.ವಿಂಡೀಸ್ ಪರ ಪೋಲಾರ್ಡ್,ನರೈನ್, ಆಂಡ್ರೆ ರಸೈಲ್ ಮತ್ತು ಕಿಮೋ ಪೌಲ್ ಉತ್ತಮ ಫಾರ್ಮ ನಲ್ಲಿದ್ದು ವೆಸ್ಟ್ ಇಂಡೀಸ್ ಕೂಡ ಉತ್ತಮ ಫಾರ್ಮನಲ್ಲಿದೆ. ವಿಂಡೀಸ್ ಪ್ರವಾಸದಲ್ಲಿರುವ ಭಾರತ 3 ಟಿ20 ಪಂದ್ಯಗಳು, 3 ಏಕದಿನ ಪಂದ್ಯಗಳು ಮತ್ತು 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಟಿ-20 ಪಂದ್ಯಕ್ಕೆ ಟೀಂ ಇಂಡಿಯಾ: ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಕೃನಾಲ್ ಪಾಂಡೆ, ಜಡೇಜಾ, ವಾಷಿಂಗ್ಟನ್ ಸುಂದರ್, ರಾಹುಲ್ ಚಾಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಾಹರ್, ನವದೀಪ್ ಸೈನಿ.

ಲೇಖನೆ : ಪ್ರೀತಮ್ ಹೆಬ್ಬಾರ್

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twelve + 6 =